ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಂಗೇರಿ ಬಳಿ ಒಂದು ಅಕ್ರಮ ಆಶ್ರಮ: ಅಪ್ರಾಪ್ತ ಹೆಣ್ಣುಮಕ್ಕಳ ರಕ್ಷಣೆ

|
Google Oneindia Kannada News

ಬೆಂಗಳೂರು, ಏ.4: ಎಂಜಿನಿಯರಿಂಗ್ ಪದವೀಧರರು ಅಕ್ರಮವಾಗಿ ನಡೆಸುತ್ತಿದ್ದ ಆಶ್ರಮದಿಂದ ಅಪ್ರಾಪ್ತ ಹೆಣ್ಣುಮಕ್ಕಳನ್ನು ರಕ್ಷಿಸಲಾಗಿದೆ.

ಕೆಂಗೇರಿಯಲ್ಲಿ ಎಂಜಿನಿಯರಿಂಗ್ ಪದವೀಧರರು ಅಕ್ರಮವಾಗಿ ನಡೆಸುತ್ತಿದ್ದ ಆಶ್ರಮದಿಂದ 8 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ.

ವೈದ್ಯರ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಪತ್ರಕರ್ತರ ಬಂಧನ ವೈದ್ಯರ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಪತ್ರಕರ್ತರ ಬಂಧನ

ಈ ವಿಷಯವನ್ನು ಮಾಧ್ಯಮಗಳಿಗೆ ತಿಳಿಸಿದ ಪಶ್ಚಿಮ ವಲಯದ ಡಿಸಿಪಿ ರವಿ ಡಿ ಚನ್ನಣ್ಣವರ್, ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ನಾವು ಕೇಸು ದಾಖಲಿಸಿದ್ದೇವೆ. ತನಿಖೆ ಮುಂದುವರಿಸಿದ್ದೇವೆ. ಕೆಂಗೇರಿ ಗೇಟ್ ಉಪ ವಿಭಾಗದ ಎಸಿಪಿಯವರಿಗೆ ಕೇಸಿನ ತನಿಖೆ ವಹಿಸಿದ್ದೇವೆ ಎಂದರು.

Eight kids rescued from illegal ashram in Bengaluru

ಆಶ್ರಮದ ಮಾಲೀಕ 40 ವರ್ಷದ ಜಾದೂಗಾರ ಆಗಿದ್ದು ಆತ ಆಶ್ರಮದಲ್ಲಿದ್ದ 17 ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನಡೆಸಿದ್ದಾನೆ ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಪೊಕ್ಸೊ ಕಾಯ್ದೆಯಡಿ ಕೇಸು ದಾಖಲಿಸಿ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಈ ಬಾಲಕಿ ಮಾತ್ರ ದೂರು ಸಲ್ಲಿಸಿದ್ದು ಬೇರೆ ಬಾಲಕಿಯವರು ಯಾವುದೇ ದೂರು ನೀಡಿಲ್ಲ, ಹೀಗಾಗಿ ತನಿಖೆ ನಡೆಸಿಯೇ ನಾವು ತೀರ್ಮಾನಕ್ಕೆ ಬರುತ್ತೇವೆ ಎನ್ನುತ್ತಾರೆ ಹಿರಿಯ ಪೊಲೀಸ್ ಅಧಿಕಾರಿ.

ಮೈಸೂರಿನಲ್ಲಿ ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾರಮೈಸೂರಿನಲ್ಲಿ ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾರ

ಆಶ್ರಮದಿಂದ ತಪ್ಪಿಸಿಕೊಂಡು ಬಂದು ಚಾಮರಾಜನಗರ ರೈಲ್ವೆ ನಿಲ್ದಾಣದಲ್ಲಿ ಸಿಕ್ಕಿದ ಬಾಲಕಿಯೊಬ್ಬಳು ನೀಡಿದ ಮಾಹಿತಿ ಪಡೆದ ಮಕ್ಕಳ ಅಭಿವೃದ್ಧಿ ಸಮಿತಿಯ ಸದಸ್ಯರು ನೀಡಿದ್ದ ದೂರಿನ ಮೇರೆಗೆ ನಗರ ಪೊಲೀಸರು ಆಶ್ರಮಕ್ಕೆ ದಾಳಿ ನಡೆಸಿದ ಸಂದರ್ಭದಲ್ಲಿ ಇದು ಬೆಳಕಿಗೆ ಬಂದಿದೆ.

English summary
At least eight minor children were rescued from an illegally-running ashram run by an engineering graduate, at Kengeri. A 40-year-old man, a magician, is the owner of the ashram, and was allegedly sexually harassing a 17-year-old girl staying there, according to the complaint filed by the girl.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X