8 ವರ್ಷಗಳ ಬಳಿಕ ಕಂಠೀರವ ಸ್ಟುಡಿಯೋ ಜಂಕ್ಷನ್ ಅಂಡರ್ಪಾಸ್ ಕಾಮಗಾರಿ ಆರಂಭ
ಕಳೆದ ಎಂಟು ವರ್ಷಗಳಿಂದ ಅರ್ಧಕ್ಕೆ ನಿಂತಿದ್ದ ಬೆಂಗಳೂರಿನ ಗೊರಗುಂಟೆಪಾಳ್ಯ ಸಮೀಪವಿರುವ ರಾಷ್ಟ್ರೀಯ ಕೌಶಲ್ಯ ತರಬೇತಿ ಸಂಸ್ಥೆ ಜಂಕ್ಷನ್ನಲ್ಲಿ (ಕಂಠೀರವ ಸ್ಟುಡಿಯೋ ಜಂಕ್ಷನ್) ಅಂಡರ್ಪಾಸ್ನ ಕಾಮಗಾರಿಯನ್ನು ಬಿಡಿಎ ಮತ್ತೆ ಆರಂಭಿಸಿದೆ.
ಪೀಣ್ಯ ಕಡೆಗೆ ಹೋಗುವ ಅಂಡರ್ಪಾಸ್ನ ಒಂದು ಅರ್ಧ ಕಾಮಗಾರಿ ಹಲವು ವರ್ಷಗಳ ಹಿಂದೆಯೇ ಪೂರ್ಣಗೊಂಡಿದ್ದು, ಇನ್ನರ್ಧ ಭಾಗ ಭೂಸ್ವಾಧೀನ ಸಮಸ್ಯೆಯಿಂದ ವಿಳಂಬವಾಗಿದ್ದರಿಂದ ಸಮಸ್ಯೆಯಾಗಿತ್ತು.

ರಾಜಾಜಿನಗರ, ನಂದಿನಿ ಲೇಔಟ್, ಮಹಾಲಕ್ಷ್ಮಿ ಲೇಔಟ್ ಮತ್ತು ಕುರುಬರಹಳ್ಳಿಯ ನಿವಾಸಿಗಳಿಗೆ ಅಂಡರ್ಪಾಸ್ ಪೂರ್ಣಗೊಂಡ ನಂತರ ತುಮಕೂರಿನತ್ತ ಸಾಗುವ ರಸ್ತೆಯಲ್ಲಿ ಸಂಚಾರ ದಟ್ಟಣೆ ಕಡಿಮೆಯಾಗಲಿದೆ.
ಕಳೆದ ಎರಡು ದಿನಗಳ ಹಿಂದೆ ಕೆಲಸ ಮತ್ತೆ ಆರಂಭವಾಗಿದೆ. ಭೂಸ್ವಾಧೀನ ಸಮಸ್ಯೆಯಿಂದಾಗಿ ಯೋಜನೆ ಸ್ಥಗಿತಗೊಂಡಿತ್ತು. ಸಮಸ್ಯೆಯನ್ನು ಸರಿಪಡಿಸಲಾಗಿದ್ದು, ಅಂಡರ್ಪಾಸ್ ಮತ್ತು ಸರ್ವಿಸ್ ರಸ್ತೆಗಳನ್ನು ನಿರ್ಮಿಸಲು ಇಲ್ಲಿನ 31 ಕಟ್ಟಡಗಳನ್ನು ಕೆಡವುತ್ತಿದ್ದೇವೆ. ಸಹಜವಾಗಿಯೇ ಸಂಚಾರ ವ್ಯತ್ಯಯವನ್ನು ಹಂತಹಂತವಾಗಿ ಕೈಗೊಳ್ಳಬೇಕಾಗುತ್ತದೆ. ಆರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಿದ್ದೇವೆ ಎಂದು ಹಿರಿಯ ಬಿಡಿಎ ಅಧಿಕಾರಿಯೊಬ್ಬರು ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
136 ಕೋಟಿ ರೂಪಾಯಿ ವೆಚ್ಚ
"ಅಂಡರ್ಪಾಸ್ಗಾಗಿ ಭೂಸ್ವಾಧೀನದ ಒಟ್ಟಾರೆ ವೆಚ್ಚ ಮತ್ತು ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ರಸ್ತೆಗಳು ಮತ್ತು ಮೇಲ್ಸೇತುವೆಗಳು ಒಂದು ಯೋಜನೆಯ ಭಾಗವಾಗಿರುವುದರಿಂದ ಒಟ್ಟಾರೆಯಾಗಿ 136 ಕೋಟಿ ರೂ. ವೆಚ್ಚವಾಗಲಿದ್ದು, ಭೂಸ್ವಾಧೀನಕ್ಕೆ ಸುಮಾರು 26 ಕೋಟಿ ರೂ. ವೆಚ್ಚವಾಗಿದೆ.
ಪೀಕ್ ಅವರ್ಗಳಲ್ಲಿ, ಜಂಕ್ಷನ್ ಎಲ್ಲಾ ಕಡೆಯಿಂದ ಹೆಚ್ಚಿನ ವಾಹನಗಳು ಬರುವುದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿತ್ತು. ವಿಶೇಷವಾಗಿ ದೊಡ್ಡ ಟ್ರಕ್ಗಳು ನಿಲ್ಲುವ ಕಾರಣ ಟ್ರಾಫಿಕ್ ಹೆಚ್ಚಾಗುತ್ತಿತ್ತು.
ಅಂಡರ್ಪಾಸ್ ಕಾಮಗಾರಿ ಆರಂಭವಾದಾಗ ಸಂಚಾರಕ್ಕೆ ಅಡ್ಡಿಪಡಿಸಲು ಸಾರ್ವಜನಿಕರಿಗೆ ಸರ್ವಿಸ್ ರಸ್ತೆಗಳನ್ನು ನಿರ್ಮಿಸಲು ಬಿಡಿಎ ಅವುಗಳನ್ನು ಕೆಡವಲು ಗುರುತು ಮಾಡಿದ್ದರಿಂದ ರಸ್ತೆ ವಿಸ್ತರಣೆಯಲ್ಲಿ ಕೆಲವು ಅಂಗಡಿಗಳನ್ನು ತೆರವು ಮಾಡಲಾಗುತ್ತಿದೆ.
ತುಮಕೂರು ಕಡೆಗೆ ಕೆಲಸಕ್ಕಾಗಿ ಹೋಗುವ ಎಲ್ಲಾ ವಾಹನ ಸವಾರರಿಗೆ ಈ ಅಂಡರ್ ಪಾಸ್ ನಿಜವಾಗಿಯೂ ಸಹಾಯ ಮಾಡುತ್ತದೆ. ಕೆಲಸ ಪೂರ್ಣಗೊಳಿಸಲು ಬಿಡಿಎ ಕನಿಷ್ಠ ಒಂದು ವರ್ಷ ತೆಗೆದುಕೊಳ್ಳಬಹುದು ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.
ಕಳೆದ ಎಂಟು ವರ್ಷದಿಂದ ನೆನೆಗುದಿಗೆ ಬಿದ್ದಿದ್ದ ಅಂಡರ್ ಪಾಸ್ ಕಾಮಗಾರಿಯನ್ನು ಮತ್ತೆ ಆರಂಭಿಸಿರುವುದು ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ. ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಕಡಿಮೆ ಮಾಡಲು, ಸರ್ಕಾರ, ಬಿಡಿಎ ಮತ್ತು ಬಿಬಿಎಂಪಿ ಹರಸಾಹಸ ಪಡುತ್ತಿದ್ದು, ಹೊಸ ಕಾಮಗಾರಿಗಳನ್ನು ಕೈಗೊಳ್ಳುವ ಜೊತೆಗೆ, ಅರ್ಧಕ್ಕೆ ನಿಂತಿರುವ ಫ್ಲೈ ಓವರ್, ಅಂಡರ್ ಪಾಸ್ ಕಾಮಗಾರಿಗಳನ್ನು ಮುಗಿಸಲು ಆಸಕ್ತಿ ತೋರಿಸುತ್ತಿದೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ












Click it and Unblock the Notifications