ಇಜ್ಞಾನ ಟ್ರಸ್ಟ್ ನಿಂದ 'ಕನ್ನಡ: ನಿನ್ನೆ, ಇಂದು ಮತ್ತು ನಾಳೆ' ವಿಚಾರಸಂಕಿರಣ
ಬೆಂಗಳೂರು, ನವೆಂಬರ್ 15: ಕನ್ನಡ ಭಾಷೆಯ ಇತಿಹಾಸ, ವರ್ತಮಾನ ಹಾಗೂ ಭವಿಷ್ಯ ಕುರಿತ 'ಕನ್ನಡ: ನಿನ್ನೆ, ಇಂದು ಮತ್ತು ನಾಳೆ' ವಿಚಾರಸಂಕಿರಣ ಬರುವ ನವೆಂಬರ್ 19ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಇಜ್ಞಾನ ಟ್ರಸ್ಟ್ ಸ್ವಯಂಸೇವಾ ಸಂಸ್ಥೆ ನವಕರ್ನಾಟಕ ಪ್ರಕಾಶನದ ಸಹಯೋಗದಲ್ಲಿ ಆಯೋಜಿಸಿದೆ.
ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಈ ವಿಚಾರಸಂಕಿರಣ ನಡೆಯಲಿದ್ದು ಕಾರ್ಯಕ್ರಮ ನವೆಂಬರ್ 19, 2017ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾಗಲಿದೆ.

ಹಿರಿಯ ವಿದ್ವಾಂಸರಾದ ಟಿ. ವಿ. ವೆಂಕಟಾಚಲ ಶಾಸ್ತ್ರೀ, ಲೇಖಕರಾದ ಎಸ್. ದಿವಾಕರ್ ಹಾಗೂ ವಸುಧೇಂದ್ರ ಕನ್ನಡದ ನಿನ್ನೆ, ಇಂದು ಹಾಗೂ ನಾಳೆಗಳ ಕುರಿತು ತಮ್ಮ ವಿಚಾರ ಮಂಡಿಸಲಿದ್ದಾರೆ. ಇವರೊಡನೆ ಚಿಂತಾಮಣಿ ಕೊಡ್ಲೆಕೆರೆ, ಜಿ. ಎಂ. ಕೃಷ್ಣಮೂರ್ತಿ ಹಾಗೂ ಮಂಜುನಾಥ ಕೊಳ್ಳೇಗಾಲ ಅವರೂ ವಿಚಾರಸಂಕಿರಣದಲ್ಲಿ ಭಾಗವಹಿಸಲಿದ್ದಾರೆ. ನವಕರ್ನಾಟಕ ಪ್ರಕಾಶನದ ಎ. ರಮೇಶ ಉಡುಪ, ಇಜ್ಞಾನ ಟ್ರಸ್ಟ್ನ ಟಿ. ಎಸ್. ಗೋಪಾಲ್ ಹಾಗೂ ಎರಡೂ ಸಂಸ್ಥೆಗಳ ಸದಸ್ಯರು ಉಪಸ್ಥಿತರಿರಲಿದ್ದಾರೆ.
ನವಕರ್ನಾಟಕ ಪ್ರಕಾಶನದ 'ನವಕರ್ನಾಟಕ ಕನ್ನಡ ಕಲಿಕೆ' ಮಾಲಿಕೆಯ 18 ಕೃತಿಗಳನ್ನು ಈ ಸಂದರ್ಭದಲ್ಲಿ ಅನಾವರಣಗೊಳಿಸಲಾಗುವುದು. ಈ ಪುಸ್ತಕಗಳನ್ನು ರಾಜ್ಯದೆಲ್ಲೆಡೆಯ 150ಕ್ಕೂ ಹೆಚ್ಚು ಶಾಲೆಗಳಿಗೆ ಉಚಿತವಾಗಿ ವಿತರಿಸುವ ಇಜ್ಞಾನ ಟ್ರಸ್ಟ್ ಕಾರ್ಯಕ್ರಮ 'ಕಲಿಕೆಗೆ ಕೊಡುಗೆ' ಹಾಗೂ ಇಜ್ಞಾನ ಟ್ರಸ್ಟ್ ಜಾಲತಾಣವನ್ನೂ ಅತಿಥಿಗಳು ಲೋಕಾರ್ಪಣೆ ಮಾಡಲಿದ್ದಾರೆ. ಪುಸ್ತಕ ವಿತರಣೆಗಾಗಿ ಶಾಲೆಗಳ ಆಯ್ಕೆ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು ಆಯ್ಕೆಯಾದ ಶಾಲೆಗಳಿಗೆ ಈ ಕಾರ್ಯಕ್ರಮದ ನಂತರ ಪುಸ್ತಕಗಳನ್ನು ತಲುಪಿಸಲಾಗುವುದು.
ವಿಜ್ಞಾನ-ತಂತ್ರಜ್ಞಾನ ವಿಷಯಗಳಿಗೆ ಮೀಸಲಾದ ಕನ್ನಡ ಜಾಲತಾಣ 'ಇಜ್ಞಾನ ಡಾಟ್ ಕಾಮ್' ಅನ್ನು ನಡೆಸುತ್ತಿರುವ ಇಜ್ಞಾನ ಟ್ರಸ್ಟ್ ಸ್ವಯಂಸೇವಾ ಸಂಸ್ಥೆ ವಿಜ್ಞಾನ, ತಂತ್ರಜ್ಞಾನ, ಕನ್ನಡ ಹಾಗೂ ಸಂಸ್ಕೃತಿ ಕುರಿತ ವಿವಿಧ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಇಜ್ಞಾನ ಟ್ರಸ್ಟ್ ರೂಪಿಸಿರುವ 'ಕಂಪ್ಯೂಟರ್-ತಂತ್ರಜ್ಞಾನ ಪದವಿವರಣ ಕೋಶ' ಇತ್ತೀಚೆಗೆ ಬಿಡುಗಡೆಯಾಗಿದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications