ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕೊರೊನಾ: ಗೊಂದಲ ಮೂಡಿಸಿದ 'ಧ್ವನಿವರ್ಧಕ' ಘೋಷಣೆ, ಸ್ಪಷ್ಟನೆ ಇಲ್ಲಿದೆ
ಬೆಂಗಳೂರು, ಮಾರ್ಚ್ 20: ರಾಜ್ಯದಲ್ಲಿ ಕೊರೊನಾ ಭೀತಿ ಅಧಿಕವಾಗಿದ್ದು, ಬೆಂಗಳೂರಿನಲ್ಲಿ ಇದುವರೆಗೂ 11 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಹನ್ನೊಂದರ ಜನರ ಪೈಕಿ ಬಹುತೇಕರು ವಿದೇಶದಿಂದ ಬಂದ ಟೆಕ್ಕಿಗಳು ಎನ್ನುವುದು ಗಮನಾರ್ಹ.
ಇದೀಗ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಾಲ್ಕು ಜನರಿಗೆ ಕೊರೊನಾ ಕಾಣಿಸಿಕೊಂಡಿದೆ ಎಂಬ ಸುದ್ದಿ ಸಿಲಿಕಾನ್ ಸಿಟಿ ಜನರನ್ನು ಆತಂಕಕ್ಕೆ ಒಳಗಾಗಿಸಿದೆ. ದೊಡ್ಡ ತೋಗೂರು ಪಂಚಾಯಿತಿ ಪ್ಯಾಪ್ತಿಯಲ್ಲಿ ಬರುವ ಲೇಔಟ್ನಲ್ಲಿ ಒಟ್ಟು ನಾಲ್ಕು ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ಸುದ್ದಿ ಹರಡಿಸುತ್ತಿರುವ ವಿಡಿಯೋ ಈಗ ಸ್ಥಳೀಯರನ್ನು ಗಾಬರಿಪಡಿಸುತ್ತಿದೆ.
ದೊಡ್ಡ ತೋಗೂರು ಪಂಚಾಯಿತಿ ಪ್ಯಾಪ್ತಿಯ ಎಲ್ಲಾ ಪುಟ್ಪಾಟ್ ವ್ಯಾಪಾರಿಗಳು, ಬಾರ್, ರೆಸ್ಟೋರೆಂಟ್, ಬೀದಿ ವ್ಯಾಪಾರಿಗಳನ್ನು ಅಂಗಡಿ ಮುಚ್ಚುವಂತೆ ವ್ಯಕ್ತಿಯೊಬ್ಬ ಧ್ವನಿವರ್ಧಕ ಬಳಸಿ ಘೋಷಣೆ ಮಾಡಿದ್ದಾನೆ. ಈ ವಿಡಿಯೋದಲ್ಲಿ ಹೇಳುತ್ತಿರುವುದು ಎಷ್ಟು ಸತ್ಯ? ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕೊರೊನಾ ಬಂದಿರುವ ನಿಜನಾ? ಮುಂದೆ ಓದಿ...
ಇದು ತಪ್ಪು ಪ್ರಚಾರ
ವಿದೇಶದಿಂದ ಬಂದಿರುವ ನಾಲ್ಕು ಜನಕ್ಕೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕೊರೊನಾ ಬಂದಿದೆ. ಆ ಕಾರಣದಿಂದ ಬೀದಿ ವ್ಯಾಪಾರಿಗಳು, ಬಾರ್, ಹೋಟೆಲ್, ರೆಸ್ಟೋರೆಂಟ್ ಮುಚ್ಚಬೇಕಾಗಿ ಸಾರ್ವಜನರಿಕರಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ ಎಂದು ವ್ಯಕ್ತಿಯೊಬ್ಬ ಧ್ವನಿವರ್ಧಕ ಮೂಲಕ ಸಾರ್ವಜನಿಕವಾಗಿ ಘೋಷಣೆ ಮಾಡಿದ್ದಾನೆ. ಆದರೆ, ಈ ಮಾಹಿತಿ ತಪ್ಪು ಎಂದು ಎಲೆಕ್ಟ್ರಾನಿಕ್ಸ್ ಸಿಟಿ ಇಂಡಸ್ಟ್ರಿಯಲ್ ಟೌನ್ಶಿಪ್ ಪ್ರಾಧಿಕಾರ ತಿಳಿಸಿದೆ.

ವಿದೇಶಿಯರಿಗೆ ನೆಗಿಟಿವ್ ಬಂದಿದೆ
ಇತ್ತೀಚಿಗೆ ವಿದೇಶಿದಿಂದ ಬಂದ ಬಂದಿರುವ ವ್ಯಕ್ತಿಗಳನ್ನು ಪರೀಕ್ಷೆ ಮಾಡಲಾಗಿದೆ. ಅವರಲ್ಲಿ ಕೊರೊನಾ ನೆಗಿಟಿವ್ ಬಂದಿದೆ. ಅವರನ್ನು ಗೃಹಬಂಧನಲ್ಲಿ ಇಡಲಾಗಿಲ್ಲ. ಆದರೂ ಅವರನ್ನು ಮನೆಯಲ್ಲಿ ಉಳಿಯುವಂತೆ ಸಲಹೆ ನೀಡಲಾಗಿದೆ ಎಂದು ಎಲೆಕ್ಟ್ರಾನಿಕ್ಸ್ ಸಿಟಿ ಇಂಡಸ್ಟ್ರಿಯಲ್ ಟೌನ್ಶಿಪ್ ಪ್ರಾಧಿಕಾರ ಸ್ಪಷ್ಟನೆ ನೀಡಿದೆ.

ಐಟಿ ಕಂಪನಿಗಳು ಹೆಚ್ಚಿರುವುದರಿಂದ ಅನುಮಾನ!
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಇನ್ಫೋಸಿಸ್ ಸೇರಿದಂತೆ ಹಲವು ಐಟಿ ಕಂಪನಿಗಳು ಕಾರ್ಯನಿರ್ವಹಿಸುತ್ತಿದೆ. ಹೆಚ್ಚಿನ ವಿದೇಶಿಗರು ಇಲ್ಲಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ, ಎಲೆಕ್ಟ್ರಾನಿಕ್ ಸಿಟಿ ಸುತ್ತಾಮುತ್ತ ಕೊರೊನಾ ಬಂದಿರಬಹುದು ಎಂಬ ಗಾಳಿ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ, ಇದಕ್ಕೆ ಸಾರ್ವಜನಿಕರು ಕಿವಿಕೊಡಬೇಡಿ. ಅಂತಹ ಯಾವುದೇ ಕೇಸ್ಗಳು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪತ್ತೆಯಾಗಿಲ್ಲ.

ಸರ್ಕಾರ ಅಧಿಕೃತ ಮಾಡಿದ್ರೆ ಮಾತ್ರ ನಂಬಿ
ಕೊರೊನಾ ವಿಚಾರದಲ್ಲಿ ಸಾರ್ವಜನಿಕರು ಎಚ್ಚರದಿಂದ ಇದ್ದರೆ ಒಳ್ಳೆಯದು. ರೋಗದ ಲಕ್ಷಣಗಳು ಕಾಣಿಸಿಕೊಂಡರೆ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ. ಫೇಸ್ಬುಕ್, ವಾಟ್ಸಾಪ್ ಇನ್ನಿತರ ಸೋಶಿಯಲ್ ಮೀಡಿಯಾದಲ್ಲಿ ಬರುವ ಸುಳ್ಳು ಸುದ್ದಿಗಳನ್ನು ನಂಬಬೇಡಿ ಮತ್ತು ಅದನ್ನ ಶೇರ್ ಮಾಡುವುದು ಉತ್ತಮವಲ್ಲ. ಈ ಬಗ್ಗೆ ಸರ್ಕಾರವೇ ಅಧಿಕೃತ ಮಾಹಿತಿ ನೀಡುತ್ತಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications