ಎಲ್ಸಿಟಾದಿಂದ ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ಪಾದಚಾರಿ ಮೇಲ್ಸೇತುವೆ ಲೋಕಾರ್ಪಣೆ
ಬೆಂಗಳೂರು, ಮೇ 09: ಎಲೆಕ್ಟ್ರಾನಿಕ್ಸ್ ಸಿಟಿ ಟೌನ್ಶಿಪ್ ಅಥಾರಿಟಿ (ಎಲ್ಸಿಟಾ) ಹಾಗೂ ಹೆಚ್ ಪಿ ಎಂಟಪ್ರೈಸಸ್ ವತಿಯಿಂದ ನಿರ್ಮಿಸಲಾದ ಎಲೆಕ್ಟ್ರಾನಿಕ್ಸ್ ಸಿಟಿಯ ಪೂರ್ವ ಮತ್ತು ಪಶ್ಚಿಮ ಭಾಗವನ್ನು ಸಂಪರ್ಕಿಸುವ ಪಾದಚಾರಿ ಮೇಲುಸೇತುವೆಯನ್ನು ಇಂದು ಎಲೆಕ್ಟ್ರಾನಿಕ್ಸ್ ಸಿಟಿ ಟೋಲ್ಗೇಟ್ ಬಳಿ ಉದ್ಘಾಟಿಸಲಾಯಿತು.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಈ ವೇಳೆ ಮಾತನಾಡಿದ ಎಲ್ಸಿಟಾ ಛೇರ್ಮನ್, ಹರಿಪ್ರಸಾದ್ ಹೆಗ್ಡೆ ಅವರು, 'ವಾಹನ ಸಂಚಾರ ಅಧಿಕವಾಗಿರುವ ಸಮಯದಲ್ಲಿ ಪಾದಚಾರಿಗಳು ರಸ್ತೆ ದಾಟಲು ಹಲವು ರೀತಿಯ ಸಮಸ್ಯೆ ಎದುರಿಸಬೇಕಾಗಿತ್ತು. ಈ ಮೇಲ್ಸೇತುವೆಯು ಪಾದಾಚಾರಿಗಳಿಗೆ ಎಲೆಕ್ಟ್ರಾನಿಕ್ಸ್ ಸಿಟಿಯ ಪೂರ್ವ ಭಾಗದಿಂದ ಪಶ್ಚಿಮ ಭಾಗಕ್ಕೆ ಸುರಕ್ಷಿತವಾಗಿ ದಾಟಲು ಸಹಕಾರಿ. ಇದರಿಂದಾಗಿ ಯಾವುದೇ ವಾಹನಗಳು ತಡೆ ಇಲ್ಲದೇ ಸಂಚರಿಸಬಹುದು ಹಾಗೂ ವಾಯು ಮಾಲಿನ್ಯವೂ ಕಡಿಮೆಯಾಗುತ್ತದೆ' ಎಂದರು.

ಈ ಪಾದಚಾರಿ ಮೇಲ್ಸೇತುವೆಯಿಂದ ಪ್ರತಿದಿನ ಸುಮಾರು 30,000 ಜನರಿಗೆ ಪ್ರಯೋಜನವಾಗುತ್ತದೆ ಹಾಗೂ ರಸ್ತೆ ದಾಟುವಾಗ ಸಂಭವಿಸಬಹುದಾದ ಅಪಘಾತಗಳು ಕೂಡ ಇಲ್ಲವಾಗುತ್ತದೆ.
ಎಲೆಕ್ಟ್ರಾನಿಕ್ಸ್ ಸಿಟಿಯನ್ನು ಪಾದಚಾರಿ ಸ್ನೇಹಿ ಪರಿಸರವಾಗಿಸುವ ಉದ್ದೇಶವನ್ನು ಎಲ್ಸಿಟಾ ಸಂಸ್ಥೆ ಹೊಂದಿದೆ. ರಸ್ತೆ ಸುರಕ್ಷತೆಯ ದೃಷ್ಟಿಯಿಂದ ಈ ಪಾದಚಾರಿ ಮೇಲ್ಸೇತುವೆಯು ಒಂದು ಪ್ರಮುಖ ಯೋಜನೆ. ಇದರಿಂದಾಗಿ ಕೇವಲ ಪಾದಾಚಾರಿಗಳಷ್ಟೇ ಅಲ್ಲದೇ ಟ್ರಾಫಿಕ್ ಪೊಲೀಸರಿಗೆ ಕೂಡ ಸಂಚಾರವನ್ನು ಸುಗಮಗೊಳಿಸಲು ಸಹಕಾರಿಯಾಗುತ್ತದೆ, ಎಂದು ಹೇಳಿದ ಎಲ್ಸಿಟಾ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ರಮಾ ಎನ್. ಎಸ್. ಅವರು ಈ ಕಾರ್ಯದಲ್ಲಿ ಎಲ್ಸಿಟಾದೊಂದಿಗೆ ಕೈಜೋಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಬಿಇಟಿಪಿಎಲ್ಗೆ ಧನ್ಯವಾದಗಳನ್ನು ಸಮರ್ಪಿಸಿದರು.

ಎಲ್ಸಿಟಾ (ಎಲೆಕ್ಟ್ರಾನಿಕ್ಸ್ ಸಿಟಿ ಇಂಡಸ್ಟ್ರಿಯಲ್ ಟೌನ್ಶಿಪ್ ಅಥಾರಿಟಿ) : 2013ರಲ್ಲಿ ಸ್ಥಾಪಿಸಲಾದ ಎಲ್ಸಿಟಾ ಸಂಸ್ಥೆಯು ಇಲೆಕ್ಟ್ರಾನಿಕ್ಸ್ ಸಿಟಿಯ ನಿರ್ವಹಣೆ ಮಾಡುತ್ತಿದೆ. ಕರ್ನಾಟಕ ಸರಕಾರವು 2013ರಲ್ಲಿ ಇಲೆಕ್ಟ್ರಾನಿಕ್ ಸಿಟಿಯನ್ನು ಕೈಗಾರಿಕಾ ಪ್ರದೇಶ ಎಂದು ಪರಿಗಣಿಸಿ ಇದರ ನಿರ್ವಹಣೆಗಾಗಿ ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ ಆಕ್ಟ್ ಅಡಿಯಲ್ಲಿ ಎಲ್ಸಿಟಾ ಸಂಸ್ಥೆಯನ್ನು ಸ್ಥಾಪಿಸಿದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications