ಬೆಂಗಳೂರು : ವೃದ್ಧ ದಂಪತಿಗಳ ಮೇಲೆ ಹಲ್ಲೆ, ಪತಿ ಸಾವು
ಬೆಂಗಳೂರು, ಡಿ.18 : ಬೆಂಗಳೂರಿನಲ್ಲಿ ವೃದ್ಧ ದಂಪತಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನ ದೋಚಿರುವ ಘಟನೆ ನಡೆದಿದೆ. ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ರಾಘವೇಂದ್ರ ರಾವ್ ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಅವರ ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬನಶಂಕರಿ ಮೂರನೇ ಹಂತದ ಇಟ್ಟಮಡುವಿನ 10ನೇ ತಿರುವಿನಲ್ಲಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ನಿವೃತ್ತ ನ್ಯಾಯಾಲಯ ಅಧಿಕಾರಿ ರಾಘವೇಂದ್ರರಾವ್ (70) ಮತ್ತು ಅವರ ಪತ್ನಿ ಸುಧಾ (68) ಅವರ ಮೇಲೆ ಹಲ್ಲೆ ನಡೆದಿದೆ.

ರಾಘವೇಂದ್ರ ರಾವ್ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದು, ಒಬ್ಬರು ಸೌದಿ ಅರೇಬಿಯಾದಲ್ಲಿ ನೆಲೆಸಿದ್ದಾರೆ. ಕಿರಿಯ ಮಗ ಮಧು ಎನ್ನುವವರು ಹತ್ಯೆ ನಡೆದ ಮನೆಯಿಂದ 100 ಮೀಟರ್ ಅಂತರದಲ್ಲೇ ಇರುವ ಮತ್ತೊಂದು ಮನೆಯಲ್ಲಿ ವಾಸವಾಗಿದ್ದರು. [ಜಯನಗರ ತ್ರಿವಳಿ ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ]
ಮಗ ಬಂದಾಗ ಬೆಳಕಿಗೆ ಬಂತು : ಮಧು ತಂದೆ-ತಾಯಿಯನ್ನು ಮಾತನಾಡಿಸಿಕೊಂಡು ಹೋಗಲು ಪ್ರತಿದಿನ ಮನೆಗೆ ಬರುತ್ತಿದ್ದರು. ಅಂತೆಯೇ ಬುಧವಾರ ರಾತ್ರಿ 8.30ರ ಸುಮಾರಿಗೆ ತಂದೆಯ ಮನೆಗೆ ಬಂದಾಗ, ಲೈಟ್ಗಳು ಆಫ್ ಆಗಿದ್ದವು, ಟಿವಿ ಮಾತ್ರ ಆನ್ ಆಗಿತ್ತು. [ಜಯನಗರದಲ್ಲಿ ಒಂಟಿ ಮಹಿಳೆ ಕೊಲೆ]
ಮನೆಯೊಳಗೆ ಪ್ರವೇಶ ಮಾಡುತ್ತಿದ್ದಂತೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ತಂದೆ ತಾಯಿಯನ್ನು ಅವರು ನೋಡಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರ ಸಹಾಯದಿಂದ ತೀವ್ರವಾಗಿ ಗಾಯಗೊಂಡಿದ್ದ ತಾಯಿಯನ್ನು ಸಮೀಪದ ದೇವೇಗೌಡ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ರಾಘವೇಂದ್ರ ರಾವ್ ಮನೆಯ ಮೊದಲ ಮಹಡಿಯಲ್ಲಿ ಬಾಡಿಗೆದಾರರಿದ್ದು ಅಕ್ಕ ಪಕ್ಕದ ಮನೆಯವರೂ ಬಾಗಿಲು ತೆರೆದುಕೊಂಡೇ ಇದ್ದರು. ಆದರೂ ಸಂಜೆ ದುಷ್ಕರ್ಮಿಗಳು ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ. ರಾಘವೇಂದ್ರ ರಾವ್ ಪತ್ನಿಯ ಕೊರಳಿನಲ್ಲಿದ್ದ ಚಿನ್ನದ ಸರ ಕಾಣೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಚನ್ನಮ್ಮನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications