Get Updates
Get notified of breaking news, exclusive insights, and must-see stories!

ಬೆಂಗಳೂರಿನಲ್ಲಿ ವೃದ್ಧ ದಂಪತಿ ಹತ್ಯೆ, ಮಗ ನಾಪತ್ತೆ

ಬೆಂಗಳೂರು, ಜೂನ್ 10: ನಗರದಲ್ಲಿ ವೃದ್ಧ ದಂಪತಿಯ ಕೊಲೆ ನಡೆದಿದ್ದು, ಪುತ್ರ ನಾಪತ್ತೆಯಾಗಿರುವ ಘಟನೆ ನಡೆದಿದೆ.

Recommended Video

      ಲಾಕ್‌ಡೌನ್ ಸಂದರ್ಭದಲ್ಲಿ ಅತಿ ಹೆಚ್ಚು ಮಾರಾಟವಾದ ಬಿಸ್ಕತ್| Parle G biscuit register Highest sale in Lockdown

      ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕಾವೇರಿನಗರದ ಮಹದೇಶ್ವರ ದೇವಸ್ಥಾನದ ಬಳಿ ಘಟನೆ ಸಂಭವಿಸಿದೆ. ದುಷ್ಕರ್ಮಿಗಳು ವೃದ್ಧ ದಂಪತಿ ಕೊಲೆ ಮಾಡಿ ಅಲ್ಲಿಂದ ಕಾಲ್ಕಿತ್ತಿದ್ದಾರೆ. ನರಸಿಂಹರಾಜು(70), ಸರಸ್ವತಿ(60) ಹತ್ಯೆಯಾದವರು.

      ಮಂಗಳವಾರ ರಾತ್ರಿ ಘಟನೆ ಸಂಭವಿಸಿದ್ದು, ವೃದ್ಧ ದಂಪತಿ ಪುತ್ರ ಸಂತೋಷ್ ಕಾಣೆಯಾಗಿದ್ದಾನೆ. ತಂದೆ-ತಾಯಿ ಜೊತೆಗೆ ಕಾಮಾಕ್ಷಿಪಾಳ್ಯದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದ. ಸಂತೋಷ್ ಆಡಿಟರ್ ಆಗಿ ಕೆಲಸ ಮಾಡುತ್ತಿದ್ದ, ಅಲ್ಲಿಯೇ ಸ್ವಂತ ಕಚೇರಿಯನ್ನು ಕೂಡ ಹೊಂದಿದ್ದ, ಪತ್ನಿ ಗರ್ಭಿಣಿಯಾಗಿದ್ದ ಹಿನ್ನೆಲೆಯಲ್ಲಿ ಪತ್ನಿಯನ್ನು ಊರಿಗೆ ಕಳುಹಿಸಿದ್ದ.

      Elderly Couple Murdered In Kamakshipalya

      ವೃದ್ಧ ದಂಪತಿ ಮೂಲತಃ ಮೈಸೂರಿನವರಾಗಿದ್ದಾರೆ. ಕಳೆದ ಒಂದು ವರ್ಷದಿಂದ ಕಾವೇರಿಪುರದ ನಿವಾಸದಲ್ಲಿ ವಾಸವಿದ್ದಾರೆ. ಮೃತ ನರಸಿಂಹರಾಜು ಮದುವೆ ಬ್ರೋಕರ್ ಆಗಿದ್ದರು, ಕಳೆದ ಹತ್ತು ವರ್ಷಗಳಿಂದ ಮನೆಯಲ್ಲಿಯೇ ಇದ್ದರು, ತಾಯಿ ಟೀಚರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು ಅವರು ಕೂಡ 5 ವರ್ಷಗಳಿಂದ ಮನೆಯಲ್ಲಿಯೇ ಇದ್ದರು.

      ಬುಧವಾರ ಬೆಳಗ್ಗೆ 8.30ರ ಸುಮಾರಿಗೆ ಮನೆಕೆಲಸದಾಕೆ ಮನೆಗೆ ಬಂದಾಗ ಬಾಗಿಲು ತೆರೆದಿತ್ತು. ಒಳಗೆ ಬಂದು ನೋಡಿದಾಗ ಹಾಲ್‌ನಲ್ಲಿ ನರಸಿಂಹರಾಜು ಅವರ ದೇಹ ಬಿದ್ದಿತ್ತು. ಬಳಿಕ ರೂಂನಲ್ಲಿ ಸರಸ್ವತಿ ಅವರ ಮೃತದೇಹವಿತ್ತು. ತಕ್ಷಣ ಪೊಲೀಸರಿಗೆ ಆಕೆ ವಿಷಯ ತಿಳಿಸಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+