ಶಿವಮೊಗ್ಗ ಜೆಡಿಎಸ್ ಅಭ್ಯರ್ಥಿ ಗೀತಾ ಶಿವಣ್ಣ ಸಂದರ್ಶನ
ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಚುನಾವಣಾ ಕಣಕ್ಕೆ ಇಳಿಯುತ್ತಿರುವುದು ಗೊತ್ತೇ ಇದೆ. ಗೀತಾ ಶಿವರಾಜ್ ಕುಮಾರ್ ಜೆಡಿಎಸ್ ನಿಂದ ಶಿವಮೊಗ್ಗ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ತಿದ್ದಾರೆ.
ಯಥೇಚ್ಛ ನೈಸರ್ಗಿಕ ಸೌಂದರ್ಯವನ್ನು ತುಂಬಿಕೊಂಡಿರುವ ಶಿವಮೊಗ್ಗ ಜಿಲ್ಲೆ ಕರ್ನಾಟಕದ ಅನ್ನದ ಬಟ್ಟಲು ಎನ್ನಿಸಿಕೊಂಡಿದೆ. ಅವರ ಕ್ಷೇತ್ರ, ರಾಜಕೀಯ ಪ್ರವೇಶಕ್ಕೆ ಸಂಬಂಧಿಸಿದಂತೆ ಮಾತಿಗೆಳೆದಾಗ ಅವರು ತಮ್ಮ ಮುಂದಿನ ರಾಜಕೀಯದ ಬಗ್ಗೆ ಮನಬಿಚ್ಚಿ ಮಾತನಾಡಿದರು. ಅವರೊಂದಿಗೆ ನಡೆಸಿದ ಸಂದರ್ಶನದ ಆಯ್ದ ಕೆಲವು ಪ್ರಶ್ನೋತ್ತರಗಳು ಇಲ್ಲಿವೆ.
*ಯಡಿಯೂರಪ್ಪ ಅವರು ಪ್ರಬಲ ಸ್ಪರ್ಧಿ ಅನ್ನಿಸುತ್ತಿಲ್ಲವೇ?
ನಾನು ಆ ರೀತಿ ಅಂದುಕೊಂಡೇ ಇಲ್ಲ. ತುಂಬ ಹಿರಿಯ ರಾಜಕಾರಣಿ. ಅವರ ಬಗ್ಗೆ ನನಗೆ ಗೌರವ ಇದೆ. ಒಂದು ವೇಳೆ ಅವರು ಸ್ಪರ್ಧಿಸದಿದ್ದರೆ ಇನ್ನೊಬ್ಬರು ಬರುತ್ತಿರಲಿಲ್ಲವೇ? ಯಾರೋ ಒಬ್ಬರ ಮುಂದೆ ನಾನು ಸ್ಪರ್ಧಿಸಲೇಬೇಕಲ್ಲವೇ?
*ದೇವೇಗೌಡರ ಚದುರಂಗದಾಟದಲ್ಲಿ ನೀವು ದಾಳವಾಗಿದ್ದೀರಾ?
ಇಲ್ಲವೇ ಇಲ್ಲ. ನಾನು ನಮ್ಮ ತಂದೆಯವರ ಕೆಲಸ ಮುಂದುವರಿಸಬೇಕೆಂದಿದ್ದೇನೆ. ನಮ್ಮ ತಾಯಿಯವರ ಆಸೆ ಕೂಡ ಅದೇ. ಯಾವುದೇ ದುರುದ್ದೇಶದಿಂದ ರಾಜಕೀಯಕ್ಕೆ ಬಂದಿಲ್ಲ.

*ಮುಂದೆ ಎದುರಾಗುವ ಸಮಸ್ಯೆಗಳನ್ನು ಎದುರಿಸಲು ಮಾನಸಿಕವಾಗಿ ಸಿದ್ಧರಾಗಿದ್ದೀರಾ?
ನನಗೇನು ಆ ರೀತಿಯ ಸಮಸ್ಯೆಗಳು ಕಾಣುತ್ತಿಲ್ಲ. ನನ್ನ ಬಗ್ಗೆ ಅವರು ಏನೂ ಮಾತನಾಡುವುದಕ್ಕೂ ಆಗಲ್ಲ. ಏಕೆಂದರೆ ನಾನು ಆ ರೀತಿ ತಪ್ಪು ಮಾಡಿಲ್ಲ ಅಲ್ವಾ?
*ಬಂಗಾರಪ್ಪ ಅವರ ಕುಟುಂಬಿಕರನ್ನೇ ಬಳಸಿಕೊಂಡು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ದೇವೇಗೌಡ ಮಾಸ್ಟರ್ ಪ್ಲಾನ್ ಮಾಡಿದ್ದಾರೆ ಅನ್ನಿಸುವುದಿಲ್ಲವೇ?
ನಮ್ಮ ಕುಟುಂಬದಿಂದ ನಾಲ್ಕು ಜನರಿಂದ ಯಾರಾದರೊಬ್ಬರು ಸ್ಪರ್ಧಿಸಬೇಕು ಎಂದಿತ್ತು. ನಮ್ಮ ತಾಯಿಯವರ ಆರೋಗ್ಯ ಸರಿಯಿಲ್ಲದೇ ಇರುವ ಕಾರಣ ನನ್ನನ್ನು ನಿಲ್ಲಿಸುತ್ತಿದ್ದಾರೆ. ಇದರಲ್ಲಿ ಬೇರೆ ಏನೂ ಅರ್ಥ ಕಲ್ಪಿಸಬೇಕಾಗಿಲ್ಲ.
*ಯಡಿಯೂರಪ್ಪ ಅವರ ವಿರುದ್ಧ ಬಂಗಾರಪ್ಪ ಸೋತಿದ್ದರು. ಈ ಬಾರಿ ಗೆಲ್ಲುತ್ತೀನಿ ಎಂದು ಯಾವ ವಿಶ್ವಾಸ, ಲೆಕ್ಕಾಚಾರ ನಿಮ್ಮದು?
ನನಗೆ ನಮ್ಮ ತಂದೆ ಮಾಡಿರುವ ಕೆಲಸಗಳು, ನಾನು ಮಾಡಬೇಕು ಎಂಬ ಆಸೆಗಳಿವೆ. ನಮ್ಮ ತಂದೆಯವರು ಏನೆಲ್ಲಾ ಮಾತನಾಡಿದ್ದರು ಎಂಬುದು ನನಗೆ ಗೊತ್ತಿರುವುದರಿಂದ. ಅಲ್ಲಿನ ಸಮಸ್ಯೆಗಳೇನು ಎಂಬುದು ನನಗೂ ಗೊತ್ತು. ಅದೆಲ್ಲಕ್ಕಿಂತಲೂ ಹೆಚ್ಚಾಗಿ ಶಿವಮೊಗ್ಗ ಜನತೆಗೆ ನಾವು ಎಂಥಹವರು ಎಂದು ಗೊತ್ತು.
*ತಂದೆಯ ಅನುಕಂಪವನ್ನು ಲಾಭ ಮಾಡಿಕೊಳ್ಳಲು ತಾವು ಹೊರಟಿದ್ದೀರಾ?
ಹಾಗ್ಯಾಕೆ ಅಂದುಕೊಳ್ಳಬೇಕು. ನಮ್ಮ ತಂದೆ ಮಾಡಿರುವ ಕೆಲಸಗಳು ಅದನ್ನೇ ನಾನು ಮುಂದಿಟ್ಟುಕೊಂಡು ರಾಜಕೀಯಕ್ಕೆ ಬರುತ್ತಿದ್ದೇನೆ. ಅವರು ಇನ್ನೂ ಮಾಡಬೇಕೆಂದಿದ್ದ ಕೆಲಸಗಳನ್ನು ಅವರ ಮಗಳಾಗಿ ನಾನು ನೆರವೇರಿಸುತ್ತೇನೆ. ಇದನ್ನು ಅನುಕಂಪ ಎಂದೇಕೆ ಭಾವಿಸುತ್ತೀರಿ.
*ಪದೇ ಪದೇ ಅನುಕಂಪ ಎನ್ನುವುದು ವರ್ಕ್ ಔಟ್ ಆಗುತ್ತದೆಯೇ?
ಇದನ್ನು ನಾನು ಹೇಳುವುದಕ್ಕಿಂತ ನೀವು ಜನತೆಯನ್ನೇ ಕೇಳಿದರೆ ಉತ್ತರ ಸಿಗುತ್ತದೆ. ಮುಂದೆ ಓದಿ ರಾಜಕೀಯಕ್ಕೆ ಬರಲು ಗೀತಾಗೆ ಯಾರು ಪ್ರೇರಣೆ?
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications