ಚುನಾವಣಾ ಆಯೋಗದಿಂದ ವಿದ್ಯಾರ್ಥಿಗಳಿಗೆ ಚುನಾವಣಾ ರಸಪ್ರಶ್ನೆ ಕಾರ್ಯಕ್ರಮ
ಬೆಂಗಳೂರು, ಜನವರಿ 18: ಭಾರತದ ಪ್ರಜಾಪ್ರಭುತ್ವ ಮತ್ತಷ್ಟು ಬಲಿಷ್ಠಗೊಳಿಸಲು ಮತದಾನದ ಕುರಿತು ಭವಿಷ್ಯದ ಮತದಾರರಾಗಿರುವ ಮಕ್ಕಳಲ್ಲಿ ಜಾಗೃತಿ ಮೂಡಿಸುವ ದೃಷ್ಠಿಯಿಂದ ಜನವರಿ 25ರಂದು ಆಚರಿಸುವ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಚುನಾವಣಾ ಆಯೋಗದ ವತಿಯಿಂದ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಚುನಾವಣಾ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಕೊಂಡಜ್ಜಿ ಬಸ್ಸಪ್ಪ ಸಭಾಂಗಣದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ರಾಜ್ಯಮಟ್ಟದ ಚುನಾವಣೆ ವಿಶೇಷ ರಸಪ್ರಶ್ನೆ ಕಾರ್ಯಕ್ರಮ "ಥಟ್ ಅಂತ ಹೇಳಿ!" ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.
ರಾಜ್ಯ ಚುನಾವಣಾ ಆಯುಕ್ತ ಸಂಜಯ್ ಕುಮಾರ್ ಅವರು ಮಾತನಾಡಿ ಪ್ರಜಾಭುತ್ವದ ಮಹತ್ವದ ಬಗ್ಗೆ ಮಕ್ಕಳಿಗೆ ತಿಳಿಸುವುದರ ಅಗತ್ಯವಿದೆ ಎಂದು ಹೇಳಿದರು.

ಚುನಾವಣಾ ರಸಪ್ರಶ್ನೆ ಕಾರ್ಯಕ್ರಮವು ಜನವರಿ 25ರಂದು ಆಚರಿಸುವ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ದೂರದರ್ಶನ ಚಂದನ ವಾಹಿನಿಯ "ಥಟ್ ಅಂತ ಹೇಳಿ!" ಕಾರ್ಯಕ್ರಮದಲ್ಲಿ ಐದು ಕಂತುಗಳಲ್ಲಿ ಶನಿವಾರ ಮತ್ತು ಭಾನುವಾರ ಹೊರತುಪಡಿಸಿ ಪ್ರಸಾರವಾಗಲಿದೆ.
ರಾಜ್ಯ ಮಟ್ಟದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಮೊದಲ ಹಂತದ ರಸಪ್ರಶ್ನೆ ಸ್ಪರ್ಧೆಗಳಲ್ಲಿ 7345 ಪ್ರೌಢಶಾಲೆಗಳ 54765 ವಿದ್ಯಾರ್ಥಿಗಳು, 3509 ಪಿಯು ಕಾಲೇಜುಗಳಿಂದ 38645 ವಿದ್ಯಾರ್ಥಿಗಳು ಹಾಗೂ 404 ಪದವಿ ಕಾಲೇಜುಗಳಿಂದ 9479 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 11258 ಶಾಲಾ-ಕಾಲೇಜುಗಳಿಂದ 102889 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ತಂಡದ ಇಬ್ಬರು ವಿದ್ಯಾರ್ಥಿಗಳಂತೆ ವಿವಿಧ ಜಿಲ್ಲೆಗಳಿಂದ ಒಟ್ಟು 58 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಮೊದಲನೇ ದಿನ ಪ್ರಥಮ ಹಂತದಲ್ಲಿ ವಿದ್ಯಾರ್ಥಿಗಳಿಗೆ ವಿಭಾಗವಾರು ಲಿಖಿತ ಪರಿಕ್ಷೆಯನ್ನು ಮಹಾರಾಣಿ ಮಹಿಳಾ ವಿಜ್ಞಾನ ಪದವಿ ಕಾಲೇಜಿನಲ್ಲಿ ನಡೆಸಲಾಯಿತು. ಇದರಲ್ಲಿ ಪ್ರತಿ ವಿಭಾಗದಿಂದ 6 ತಂಡಗಳನ್ನು ಮುಂದಿನ ಹಂತಕ್ಕೆ ಆಯ್ಕೆ ಮಾಡಲಾಯಿತು.
ಎರಡನೇ ಹಂತದಲ್ಲಿ ಮೌಖಿಕ ರಸಪ್ರಶ್ನೆಯನ್ನು ನಡೆಸಿ ಪ್ರತಿ ವಿಭಾಗದಿಂದ ಒಂದು ತಂಡವನ್ನು ಮೂರನೇ ಹಂತಕ್ಕೆ ಆಯ್ಕೆ ಮಾಡಲಾಯಿತು. ಅಂತಿಮ ಹಂತದಲ್ಲಿ ಬೆಳಗಾವಿ ವಿಭಾಗದ ಉತ್ತರ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಾದ ಸುಜಯ್ ಭಟ್ ಮತ್ತು ಸುಮುಖ್ ಭಟ್ ಅವರು ಪ್ರಥಮ ಸ್ಥಾನ ಪಡೆದರು, ಕಲಬುರಗಿ ವಿಭಾಗದಿಂದ ಬೀದರ್ ಜಿಲ್ಲೆಯ ರಾಘವೇಂದ್ರ ದೇವಿದಾಸ್ ಹಾಗೂ ಸೋಮೇಶ್ ಶಿವಶರಣಪ್ಪ ಅವರು ದ್ವೀತಿಯ, ಬೆಂಗಳೂರು ವಿಭಾಗದಿಂದ ಶಿವಮೊಗ್ಗ ಜಿಲ್ಲೆಯ ಗಾನವಿ ಎಸ್ ಪ್ರಸಾದ್ ಮತ್ತು ಮೀಷ್ನಾ ಆರ್ ಅವರು ತೃತೀಯ ಸ್ಥಾನ ಪಡೆದರು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ಆಗಮಿಸಿದ್ದ ಮಕ್ಕಳನ್ನು ವಿಧಾನಸೌಧ ಹಾಗೂ ನೆಹರು ತಾರಾಲಯ ವೀಕ್ಷಣೆಗಾಗಿ ಚುನಾವಣೆ ಆಯೋಗದಿಂದ ವ್ಯವಸ್ಥೆ ಮಾಡಲಾಗಿತ್ತು.
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications