ಬೊಮ್ಮನಹಳ್ಳಿ: ಜೆಡಿಎಸ್ ನಿಂದ ನಿರ್ಮಾಪಕ ಮಂಜು ಕಣಕ್ಕೆ?
Recommended Video

Karnataka Elections 2018 : ಕನ್ನಡ ಸಿನಿಮಾ ನಿರ್ಮಾಪಕ ಕೆ ಮಂಜು ಬೊಮ್ಮನಹಳ್ಳಿ ಕ್ಷೇತ್ರದಿಂದ ಕಣಕ್ಕೆ
ಬೆಂಗಳೂರು, ಏಪ್ರಿಲ್ 23: ಬೊಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದಿಂದ ಕನ್ನಡ ಸಿನಿಮಾ ನಿರ್ಮಾಪಕ ಕೆ ಮಂಜು ಅವರು ಕಣಕ್ಕಿಳಿಯುವ ಸುದ್ದಿ ಬಂದಿದೆ.
ಜೆಡಿಎಸ್ ನಿಂದ ಟಿಕೆಟ್ ಪಡೆದು ಸ್ಪರ್ಧಿಸಲು ಕೆ ಮಂಜು ಸಿದ್ಧರಾಗಿದ್ದಾರೆ. ಈ ಮುಂಚೆ ಕಾಂಗ್ರೆಸ್ ಟಿಕೆಟ್ ಬಯಸಿದ್ದರು. ಅದರೆ, ಈಗ ಜೆಡಿಎಸ್ ವರಿಷ್ಠ ಎಚ್. ಡಿ ದೇವೇಗೌಡರನ್ನು ಭೇಟಿ ಮಾಡಿ, ಬಿ ಫಾರಂ ಪಡೆಯಲಿದ್ದು, ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ ಎಂಬ ಮಾಹಿತಿಯಿದೆ.

ಬೊಮ್ಮನಹಳ್ಳಿ ಕ್ಷೇತ್ರದಿಂದ ಒಕ್ಕಲಿಗ ಮಹಾಸಂಸ್ಥಾನದ ಚಂದ್ರಶೇಖರಸ್ವಾಮೀಜಿ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಈಗ ಕೆ ಮಂಜುಗೆ ಅದೃಷ್ಟ ಒಲಿದಿದೆ. ಬೊಮ್ಮನಹಳ್ಳಿಯಲ್ಲಿ ಬಿಜೆಪಿಯಿಂದ ಸತೀಶ್ ರೆಡ್ಡಿ, ಕಾಂಗ್ರೆಸ್ಸಿನಿಂದ ಪುಷ್ಪ ರಾಜಗೋಪಾಲರೆಡ್ಡಿ ಕಣದಲ್ಲಿದ್ದಾರೆ.












Click it and Unblock the Notifications