ಜಯನಗರದಿಂದ ರವಿಕೃಷ್ಣಾ ರೆಡ್ಡಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ
ಬೆಂಗಳೂರು, ಏಪ್ರಿಲ್ 01 : ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ರವಿಕೃಷ್ಣಾ ರೆಡ್ಡಿ ಜಯನಗರ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ 2018ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ಅವರು ಪ್ರಚಾರ ಕಾರ್ಯವನ್ನು ನಡೆಸುತ್ತಿದ್ದಾರೆ.
ಮಾರ್ಚ್ 14ರಂದು ರವಿಕೃಷ್ಣಾ ರೆಡ್ಡಿ ಅವರ ಮೇಲೆ ಹಲ್ಲೆ ನಡೆಸಲು ಪ್ರಯತ್ನಿಸಲಾಗಿತ್ತು. ಪಡಿತರ ಚೀಟಿ ವಿತರಣೆಯಲ್ಲಿ ನಡೆಯುತ್ತಿದ್ದ ಅಕ್ರಮ ಪ್ರಶ್ನಿಸಿದ್ದಕ್ಕೆ ಮಾಜಿ ಮೇಯರ್ ಮಂಜುನಾಥ ರೆಡ್ಡಿ ಬೆಂಬಲಿಗರು ಅವರ ಮೇಲೆ ಹಲ್ಲೆ ನಡೆಸಲು ಪ್ರಯತ್ನ ನಡೆಸಿದ್ದರು. ಮಾರ್ಚ್ 24ರಂದು ಸಂಜೆ ಶಶಾಂಕ್ ಎಂಬ ವ್ಯಕ್ತಿ ಅವರಿಗೆ ಬೆದರಿಕೆ ಹಾಕಿದ್ದರು. ಇದೆಲ್ಲವನ್ನು ಲೆಕ್ಕಿಸದೆ, ತಮ್ಮ ಹೋರಾಟ ಮುಂದುವರೆಸಿರುವ ರವಿಕೃಷ್ಣಾರೆಡ್ಡಿ ಅವರು ಚುನಾವಣೆ ಸ್ಪರ್ಧೆ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ರವಿಕೃಷ್ಣಾರೆಡ್ಡಿ ಅವರು ಫೇಸ್ ಬುಕ್ ಪುಟದಲ್ಲಿ ನೀಡಿರುವ ಘೋಷಣಾ ಪತ್ರದ ಯಥಾವತ್ತು ಕಾಪಿ ಇಲ್ಲಿದೆ:
ಬಂಧುಗಳೇ,
ಈಗಾಗಲೇ ಮೂರು ಚುನಾವಣೆಗಳಲ್ಲಿ ಸ್ಪರ್ಧಿಸಿ, ನನ್ನ ಇತಿಮಿತಿಗಳಲ್ಲಿ ಚುನಾವಣಾ ರಾಜಕೀಯ ಹೋರಾಟವನ್ನು ಮಾಡಿದ್ದ ನಾನು, ಈ ಬಾರಿ ಸ್ಪರ್ಧಿಸಿದರೆ ಗೆಲ್ಲಲೇಬೇಕು ಮತ್ತು ಆ ಮೂಲಕ ಒಂದು ಮಾದರಿ ನಿರ್ಮಿಸಿ, ರಾಜ್ಯದ ಸಾವಿರಾರು ಜನರಿಗೆ ಸ್ವಚ್ಚ ಮತ್ತು ಮೌಲ್ಯಾಧಾರಿತ ಚುನಾವಣಾ ರಾಜಕಾರಣದ ಬಗ್ಗೆ ಸ್ಫೂರ್ತಿ ಮೂಡಿಸಬೇಕು ಎನ್ನುವ ತೀರ್ಮಾನವನ್ನು ಮೊದಲೇ ಮಾಡಿದ್ದೆ.
ಆ ಹಿನ್ನೆಲೆಯಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದರೆ, ಹಣ-ಹೆಂಡ ಹಂಚದೆ, ಯಾವುದೇ ಚುನಾವಣಾ ಅಕ್ರಮ ಎಸಗದೆ, ಸುಳ್ಳು ಆಶ್ವಾಸನೆಗಳನ್ನು ನೀಡದೆ, ಆಮಿಷಗಳನ್ನು ಒಡ್ಡದೆ, ಚುನಾವಣಾ ಆಯೋಗ ನಿಗದಿಪಡಿಸಿರುವ ವೆಚ್ಚದ ಮಿತಿಯೊಳಗೆ ಪ್ರಚಾರ ಮಾಡಿ ಗೆಲ್ಲಲು ಸಾಧ್ಯವೇ ಎಂದು ಕಳೆದ ನಾಲ್ಕೂವರೆ ತಿಂಗಳಿನಿಂದ (11-11-2017 ರಿಂದ) ಕ್ಷೇತ್ರಾದ್ಯಂತ ಮನೆಮನೆ, ಬೀದಿಬೀದಿ ಸುತ್ತಿ ಜನಾಭಿಪ್ರಾಯ ಸಂಗ್ರಹಿಸುತ್ತ ಬಂದಿದ್ದೇವೆ. ಆ ಸಂದರ್ಭದಲ್ಲಿ ಕ್ಷೇತ್ರದ ಹಲವು ಸಮಸ್ಯೆಗಳಿಗೆ ಪರಿಹಾರವೂ ಸಿಗುವಂತೆ ಮಾಡಿದ್ದೇವೆ.

ಈಗ ನನ್ನ ಮುಂದಿರುವ ಪ್ರಶ್ನೆ, ಇಲ್ಲಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ಗೆಲ್ಲುವ ಅವಕಾಶ ಸಷ್ಟವಾಗಿ ಇದೆಯೇ? ಎನ್ನುವುದು. ಕೆಲವು ಸಹಾಯ/ಬೆಂಬಲ ಸಿಕ್ಕರೆ ಖಂಡಿತ ಸಾಧ್ಯ ಎನ್ನುವ ವಿಶ್ವಾಸ ಈಗ ಬಂದಿದೆ.
ಎಂತಹ ಸಹಾಯಗಳು?
- ಕ್ಷೇತ್ರದವರಷ್ಟೇ ಅಲ್ಲ, ರಾಜ್ಯದ ವಿವಿಧ ಕಡೆಗಳಿಂದ ಕನಿಷ್ಟ ನೂರು ಜನರಾದರೂ ಸಮಾನಮನಸ್ಕರು ಬಂದು ಇಲ್ಲಿ ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು.
- ಚುನಾವಣಾ ಆಯೋಗ ನಿಗದಿಪಡಿಸಿರುವ ಚುನಾವಣಾ ವೆಚ್ಚದ ಮಿತಿ ರೂ.28 ಲಕ್ಷ. ಅಷ್ಟನ್ನೂ ನಾವು ಜನರಿಂದ ದೇಣಿಗೆ ರೂಪದಲ್ಲಿ ಸಂಗ್ರಹಿಸಲು ಸಾಧ್ಯವಾಗಬೇಕು, ಮತ್ತು ಅಷ್ಟನ್ನೂ ಪಾರದರ್ಶಕವಾಗಿ ಮತ್ತು ಪರಿಣಾಮಕಾರಿಯಾಗಿ ಪ್ರಚಾರಕ್ಕೆ ಬಳಸಬೇಕು.
ಮೇಲಿನ ಎರಡೂ ಸಾಧ್ಯವಾಗುತ್ತದೆ, ಹಾಗೂ ಕಳೆದ ನಾಲ್ಕೈದು ತಿಂಗಳಿನಿಂದ ನಾವು ಕ್ಷೇತ್ರದಲ್ಲಿ ಮಾಡಿರುವ ಕೆಲಸಗಳಿಂದ ಜಯನಗರದ ಮತದಾರರಿಗೂ ನಮ್ಮ ಬಗ್ಗೆ ಒಳ್ಳೆಯ ವಿಶ್ವಾಸ ಮೂಡಿದೆ ಎಂದು ನಮಗೆ ಈಗ ಪ್ರತಿದಿನವೂ ಅರಿವಾಗುತ್ತಿದೆ.

ಈ ಹಿನ್ನೆಲೆಯಲ್ಲಿ, ನಾನು ಈ ಬಾರಿ ನಿಮ್ಮೆಲ್ಲರ ಬೆಂಬಲ-ಸಹಾಯ-ಸಹಕಾರದಿಂದ ಜಯನಗರ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ ಎಂದು ಅಧಿಕೃತವಾಗಿ ಘೋಷಿಸುತ್ತಿದ್ದೇನೆ.
ಒಂದೆರಡು ದಿನಗಳಲ್ಲಿ ನಮ್ಮ ಅಭಿಯಾನ ಚುನಾವಣಾ ಪ್ರಚಾರವಾಗಿ ಬದಲಾಗಲಿದೆ ಮತ್ತು ಇನ್ನೂ ಹಲವು ರೂಪಗಳನ್ನು ಪಡೆಯಬೇಕಿದೆ.
ಹಾಗೆಯೇ ಮೂರ್ನಾಲ್ಕು ದಿನಗಳಲ್ಲಿ ಚುನಾವಣಾ ಸಂಬಂಧಿ ಬ್ಯಾಂಕ್ ಖಾತೆಯ ವಿವರಗಳನ್ನು ಸಹ ಹಂಚಿಕೊಳ್ಳಲಾಗುತ್ತದೆ.
ನಿಮ್ಮೆಲ್ಲರ ತನು-ಮನ-ಧನದ ಸಹಾಯದ ನಿರೀಕ್ಷೆಯಲ್ಲಿ...
ಬನ್ನಿ, ಸ್ವಚ್ಚ, ಸುಂದರ. ಸದೃಢ, ಸಮೃದ್ಧ, ಲಂಚಮುಕ್ತ, ಮಾದರಿ ಜಯನಗರ ನಿರ್ಮಿಸೋಣ. ನಾವೆಲ್ಲಾ ಸೇರಿ ಆ ಮೂಲಕ ಇತಿಹಾಸ ನಿರ್ಮಿಸೋಣ. ಜನಪರ, ಮೌಲ್ಯಾಧಾರಿತ ರಾಜಕಾರಣ ಕಟ್ಟೋಣ, ಪ್ರಜಾಪ್ರಭುತ್ವ ಬಲಪಡಿಸೋಣ.
ವಂದನೆಗಳೊಂದಿಗೆ,
ರವಿ ಕೃಷ್ಣಾರೆಡ್ಡಿ
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications