ಕಾಂಗ್ರೆಸ್ಸಿಗೆ ಮತ ಹಾಕುವಂತೆ ಮಾತೆ ಮಹಾದೇವಿ ಕರೆ
ಬೆಂಗಳೂರು, ಏಪ್ರಿಲ್ 07: ನಮ್ಮ ಬೆಂಬಲ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷಕ್ಕೆ ಎಂದು ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಘೋಷಿಸಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ಬೆಂಗಳೂರಿನ ಚಾಲುಕ್ಯ ವೃತ್ತದ ಬಳಿ ಇರುವ ಬಸವ ಮಂಟಪದಲ್ಲಿ ನಡೆದ ಜಾಗತಿಕ ಲಿಂಗಾಯತ ಮಹಾಸಭಾದಲ್ಲಿ ತೆಗೆದುಕೊಂಡ ತೀರ್ಮಾನವಾಗಿದೆ. ಆದರೆ, ಇದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಬೇಲಿಮಠದ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ.

'ಮೊದಲು ಯಡಿಯೂರಪ್ಪ ಪ್ರಯತ್ನ ಮಾಡಿದ್ದು ನಮಗೆ ಗೊತ್ತಿಲ್ಲ. ಈಗ ಅವರ ಮೌನ ನಮಗೆ ಯಾವುದೇ ಬೆಂಬಲ ನೀಡಲಿಲ್ಲ. ಅಮಿತ್ ಶಾ ಅವರು ಪ್ರತ್ಯೇಕ ಲಿಂಗಾಯತ ಧರ್ಮ ಕುರಿತಂತೆ ನೀಡಿರುವ ಹೇಳಿಕೆಗಳಲ್ಲಿ ಗೊಂದಲವಿದೆ' ಎಂದು ಮಾತೆ ಮಹಾದೇವಿ ಹೇಳಿದರು.
ಗಂಗಾಧರೇಶ್ವರ ಸ್ವಾಮೀಜಿ, ಕಂಬಾಳಿಮಠ: ಇದು ಪೂರ್ವ ನಿಯೋಜಿತ, ಧರ್ಮ ಒಡೆದು ಬೇಕಾದ ರೀತಿಯಲ್ಲಿ ರಾಜಕೀಯ ಮಾಡುವವರು ಅವರನ್ನು ಬೆಂಬಲಿಸುವವರನ್ನು ನಾನು ಧಿಕ್ಕರಿಸುತ್ತೇನೆ ಎಂದರು.












Click it and Unblock the Notifications