ಚುನಾವಣಾ ಅಕ್ರಮ, ತೇಜಸ್ವಿ ಸೂರ್ಯ ವಿರುದ್ಧ ವಕೀಲರಿಂದ ದೂರು
Recommended Video

ಬೆಂಗಳೂರು, ಏಪ್ರಿಲ್ 12: ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ವಕೀಲರಿಬ್ಬರು ದೂರು ನೀಡಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ವಕೀಲರಾದ ಬಿ. ಸಂಜಯ್ ಯಾದವ್, ಮೊಹಮ್ಮದ್ ಅಯೂಬ್ ಅಲಿ ಅವರು ತೇಜಸ್ವಿ ಸೂರ್ಯ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.
ಈ ಹಿಂದೆ ತೇಜಸ್ವಿ ಸೂರ್ಯ ಅವರ ಹಳೆ ಟ್ವೀಟ್ಸ್, ಮೋದಿ ಬೆಂಬಲಿಸದಿರುವವರು ದೇಶದ್ರೋಹಿಗಳು ಎಂಬ ಹೇಳಿಕೆ ಬಗ್ಗೆ ಕೂಡಾ ದೂರು ನೀಡಲಾಗಿತ್ತು.

ಬಾಲಕೋಟ್ ವೈಮಾನಿಕ ದಾಳಿಯನ್ನು ಬಿಜೆಪಿ ಸಾಧನೆ ಎನ್ನುವಂತೆ ಬಿಂಬಿಸಿ ತೇಜಸ್ವಿ ಸೂರ್ಯ ಚುನಾವಣೆ ಪ್ರಚಾರ ನಡೆಸಿದ್ದಾರೆ. ಮೋದಿ ಮತ್ತೊಮ್ಮೆ ಹೆಸರಿನ ಪ್ರಚಾರ ನಡೆಸಿದ್ದು, ತಮ್ಮ ಚುನಾವಣಾ ಪ್ರಚಾರ ಕರಪತ್ರಗಳಲ್ಲಿ ಈ ಬಗ್ಗೆ ಮುದ್ರಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಆದರೆ, ತೇಜಸ್ವಿ ಸೂರ್ಯ ಅವರ ಪ್ರಚಾರದ ಕರಪತ್ರದಲ್ಲಿ ಮೋದಿ ಅವರ ಸರ್ಕಾರದ ಸಾಧನೆ ಬಗ್ಗೆ ಮಾಹಿತಿ ಇರುವುದು ನಿಜವಾದರೂ, ತಾಯ್ನಾಡಿನ ರಕ್ಷಣೆ ನಮ್ಮ ಹೊಣೆ ಎಂಬ ವಿಭಾಗದಲ್ಲಿ ' ಸರ್ಜಿಕಲ್ ಸ್ಟ್ರೈಕ್-ದಿಟ್ಟ ಉತ್ತರದ ಮೂಲಕ ಭಾರತದ ಹೊಸ ಮಾನದಂಡ ಎಂದು ಮಾತ್ರ ಬರೆಯಲಾಗಿದೆ. ಇದಲ್ಲದೆ, 36 ಸುಸಜ್ಜಿತ ಯುದ್ಧ ವಿಮಾನ ಖರೀದಿ, ಅಗ್ನಿ 5 ಕ್ಷಿಪಣಿ ಪ್ರಯೋಗ ಯಶಸ್ವಿ ಬಗ್ಗೆ ಉಲ್ಲೇಖವಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications