'65 ವರ್ಷ ಸುಭದ್ರ ಆಡಳಿತ ನೀಡಿದ ಕಾಂಗ್ರೆಸ್ಸಿಗೆ ಮತ ನೀಡಿ'
ಬೆಂಗಳೂರು, ಏಪ್ರಿಲ್ 10 : 65 ವರ್ಷಗಳ ಕಾಲ ಸುಭದ್ರ ಆಡಳಿತ ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ನಗರದ ಬೊಮ್ಮನಹಳ್ಳಿ ಹಾಗೂ ಪದ್ಮನಾಭನಗರ ವಿಧಾನಸಭಾಕ್ಷೇತ್ರದಲ್ಲಿ ಇಂದು ಬಿರುಸಿನ ಪ್ರಚಾರ ಕೈಗೊಂಡರು. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ರಾಮಲಿಂಗಾರೆಡ್ಡಿ ಅವರು ಸಾಥ್ ನೀಡಿದರೆ, ಪದ್ಮನಾಭ ನಗರ ಕ್ಷೇತ್ರದಲ್ಲಿ ನಡೆದ ಪಾದಯಾತ್ರೆಯಲ್ಲಿ ಮಾಜಿ ಶಾಸಕ ಎಂ ಶ್ರೀನಿವಾಸ್ ಜೊತೆಯಾದರು.
ಪ್ರಧಾನಿ ನರೇಂದ್ರ ಮೋದಿ ಅವರು 65 ವರ್ಷಗಳಿಂದ ಕಾಂಗ್ರೆಸ್ ದೇಶಕ್ಕೆ ಏನೂ ಕೊಡಗೆ ನೀಡಿಲ್ಲ ಎನ್ನುವ ಸುಳ್ಳು ಮಾಹಿತಿಯನ್ನು ನೀಡುತ್ತಿದ್ದಾರೆ. ಈ ಮೂಲಕ ಜನರ ದಾರಿ ತಪ್ಪಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. 65 ವರ್ಷಗಳ ಆಡಳಿತಾವಧಿಯಲ್ಲಿ ಕಾಂಗ್ರೆಸ್ ನೀಡಿದ ಕೊಡುಗೆಯಲ್ಲಿ ಶೇಕಡಾ 10 ರಷ್ಟನ್ನೂ ಮೋದಿ ಆಡಳಿತದಲ್ಲಿ ನೀಡಿಲ್ಲ ಎಂದರು. ಕಾಂಗ್ರೆಸ್ ಪಕ್ಷ ಬೆಂಗಳೂರು ಅಭಿವೃದ್ದಿಗೆ ಸಾಕಷ್ಟು ಕೊಡುಗೆಯನ್ನು ನೀಡಿದೆ.

ಬೆಂಗಳೂರು ಇಂದು ವಿಶ್ವದಲ್ಲಿ ತನ್ನದೇ ಆದ ವಿಶಿಷ್ಟ ಛಾಪನ್ನು ಹೊಂದಲು ಕಾರಣ ಕಾಂಗ್ರೆಸ್. ಅಲ್ಲದೆ, ನಿರುದ್ಯೋಗ ನಿವಾರಣೆ, ಬಡತನ ನಿವಾರಣೆ, ರೈತರ ಅಭಿವೃದ್ದಿಗೆ ಸಾಕಷ್ಟು ಯೋಜನೆಗಳನ್ನು ಕಾಂಗ್ರೆಸ್ ಪಕ್ಷ ತಂದಿದೆ. ಆದರೆ ಈ ಯಾವುದೇ ಕೊಡುಗೆಯನ್ನು ನೀಡದ ಮೋದಿ ಕೇವಲ ಧರ್ಮದ ಆಧಾರದ ಮೇಲೆ ಹಾಗೂ ಸೈನಿಕರನ್ನು ಮುಂದಿಟ್ಟುಕೊಂಡು ಮತಯಾಚಿಸುತ್ತಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಜನರು ಮೋದಿ ವಿರುದ್ದ ಮತ ನೀಡಲಿದ್ದಾರೆ ಎಂದರು.
ಮಾಜಿ ಗೃಹಮಂತ್ರಿ ರಾಮಲಿಂಗಾ ರೆಡ್ಡಿ ಮಾತನಾಡಿ, ಅನುಭವಿ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖರಾಗಿರುವ ಹರಿಪ್ರಸಾದ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಈ ಅಭ್ಯರ್ಥಿ ಆಯ್ಕೆಯಾದಲ್ಲಿ ನಗರದ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ ಎಂದರು.

ಮಾಜಿ ಶಾಸಕ ಎಂ ಶ್ರೀನಿವಾಸ್ ಮಾತನಾಡಿ, ಬಿ ಕೆ ಹರಿಪ್ರಸಾದ್ ಅವರಂತಹ ಮುತ್ಸದ್ದಿ ಕಣದಲ್ಲಿರುವುದರಿಂದ ನಾನು ಪ್ರಚಾರಕ್ಕೆ ಬಂದಿದ್ದೇನೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ದಿ ನಡೆಯಲಿದೆ ಎಂದರು.
ಸಂಜೆ ಪದ್ಮನಾಭ ನಗರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಅಭ್ಯರ್ಥಿ ಬಿ ಕೆ ಹರಿಪ್ರಸಾದ್ ಪಾದಯಾತ್ರೆಯನ್ನು ಮಾಡಿದರು. ಪಾದಯಾತ್ರೆಯ ಮೂಲಕ 3 ಕಿಮಿಗೂ ಹೆಚ್ಚು ಪ್ರಚಾರ ನಡೆಸಿದರು. ಈ ಸಂಧರ್ಭದಲ್ಲಿ ಸಾವಿರಾರು ಕಾರ್ಯಕರ್ತರು ಅವರಿಗೆ ಸಾಥ್ ನೀಡಿದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications