Electric Bus: ನಾಳೆಯಿಂದ ಬೆಂಗಳೂರು- ಮೈಸೂರು ನಡುವೆ ಎಲೆಕ್ಟ್ರಿಕ್ ಬಸ್: ವಿಶೇಷತೆಗಳು, ದರ ತಿಳಿಯಿರಿ
ಬೆಂಗಳೂರು, ಜ. 15: ಬೆಂಗಳೂರು ಮತ್ತು ಮೈಸೂರು ನಡುವೆ ಎಲೆಕ್ಟ್ರಿಕ್ ಬಸ್ ಸೇವೆ ಜನವರಿ 16ರ ಸೋಮವಾರದಂದು ಪ್ರಾರಂಭವಾಗಲಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಆಯೋಗ (ಕೆಎಸ್ಆರ್ಟಿಸಿ) ಪ್ರಕಟಿಸಿದೆ.
ಇದು ರಾಜ್ಯದಲ್ಲಿಯೇ ಮೊದಲ ಇಂಟರ್ಸಿಟಿ ಎಲೆಕ್ಟ್ರಿಕ್ ಬಸ್ ಸೇವೆಯಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಹತ್ವಪೂರ್ಣ ಯೋಜನೆಯಾಗಿರುವ ಇದರ ಅಡಿಯಲ್ಲಿ ಒಟ್ಟು 50 ಬಸ್ಗಳನ್ನು ಬಿಡಲು ಇಲಾಖೆ ನಿರ್ಧರಿಸಿದೆ. ಅದರ ಮೊದಲ ಹಂತದಲ್ಲಿ ರಾಜಧಾನಿ ಬೆಂಗಳೂರು ಮತ್ತು ಮೈಸೂರಿನ ನಡುವೆ ಕೆಎಸ್ಆರ್ಟಿಸಿ ಇವಿ ಪವರ್ ಪ್ಲಸ್ ಬಸ್ ಸಂಚರಿಸಲಿದೆ.
ಈ ಎಲೆಕ್ಟ್ರಿಕ್ ಬಸ್ ಪವರ್ ಪ್ಲಸ್ ವೈ-ಫೈ ಮತ್ತು ಸಿಸಿಟಿವಿ ಕ್ಯಾಮೆರಾಗಳನ್ನು ಹೊಂದಿದೆ.
ಹೈದರಾಬಾದ್ ಮೂಲದ ಒಲೆಕ್ಟ್ರಾ ಗ್ರೀನ್ಟೆಕ್ ಲಿಮಿಟೆಡ್ ಈ ಬಸ್ಗಳನ್ನು ತಯಾರಿಸಿದೆ. ಡಿಸೆಂಬರ್ನಲ್ಲಿ ಮೂಲಮಾದರಿಯ ಇ-ಬಸ್ ಅನ್ನು ವಿತರಿಸಿದೆ. ಇನ್ನು, ಈ ಯೋಜನೆ ಅಡಿಯಲ್ಲಿ ಕೆಎಸ್ಆರ್ಟಿಸಿಯು ರಾಜಧಾನಿ ಬೆಂಗಳೂರನ್ನು ರಾಜ್ಯದ ಬೇರೆ ಬೇರೆ ನಗರಗಳಾದ ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ವಿರಾಜಪೇಟೆ ಮತ್ತು ಮಡಿಕೇರಿಗಳಿಗೆ ಸಂಪರ್ಕಿಸಲು ಇವುಗಳನ್ನು ಬಿಡಲು ಚಿಂತಿಸುತ್ತಿದೆ.

ಭವಿಷ್ಯದಲ್ಲಿ ರಾಜಧಾನಿ ಬೆಂಗಳೂರು ಮತ್ತು ಸಣ್ಣ ಪಟ್ಟಣಗಳ ನಡುವೆ ಹೆಚ್ಚಿನ ಎಲೆಕ್ಟ್ರಿಕ್ ಬಸ್ ಸೇವೆಗಳನ್ನು ಘೋಷಿಸಲಾಗುವುದು ಎಂದು ಕೆಎಸ್ಆರ್ಟಿಸಿ ಪ್ರಕಟಣೆ ತಿಳಿಸಿದೆ.
ನಾಳೆಯಿಂದ ಸಂಚಾರ ಸೇವೆ ನೀಡಲಿರುವ ಈ ಎಲೆಕ್ಟ್ರೀಕ್ ಬಸ್ಗಳ ದರ ಇಂತಿದೆ. ಕೆಎಸ್ಆರ್ಟಿಸಿ ಪ್ರಕಾರ, ಎಸಿ ಬಸ್ ಸೇವೆ ದರವನ್ನು ರೂ. 330 ಮತ್ತು ನಾನ್ ಎಸಿ ಬಸ್ ಸೇವಾ ದರ ರೂ. 240ಗೆ ಇರಿಸಲಾಗಿದೆ. ಎರಡೂ ನಗರಗಳ ನಡುವೆ ಒಟ್ಟು 12 ಬಸ್ಗಳನ್ನು ಬಿಡಲಾಗುತ್ತದೆ. ನಂತರ ಹಂತ ಹಂತವಾಗಿ ಬಸ್ಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದಿದೆ.

ಇದರ ಜೊತೆಗೆ ಬೆಂಗಳೂರು ಮತ್ತು ಮೈಸೂರು ನಡುವಿನ ಎಕ್ಸ್ಪ್ರೆಸ್ವೇ ಫೆಬ್ರವರಿ ವೇಳೆಗೆ ಜನರ ಸೇವೆಗೆ ಲಬ್ಯವಿರುವ ಕಾರಣ, ಈ ಬಸ್ ಸೇವೆಗಳು ಪ್ರಯಾಣದ ಸಮಯವನ್ನು 90 ನಿಮಿಷಗಳಿಗೆ ಕಡಿಮೆ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ.
ಬೆಂಗಳೂರಿನಲ್ಲಿ ಸಾರ್ವಜನಿಕ ಸಾರಿಗೆಯ ಬಳಕೆಯನ್ನು ಹೆಚ್ಚಿಸಲು ಕಳೆದ ವರ್ಷ ಅಕ್ಟೋಬರ್ನಲ್ಲಿ ಬೆಂಗಳೂರು ಮೆಟ್ರೋ ಸಾರಿಗೆ ಸಂಸ್ಥೆ (ಬಿಎಂಟಿಸಿ) 100 ಎಲೆಕ್ಟ್ರಿಕ್ ಬಸ್ಗಳನ್ನು ಪ್ರಾರಂಭಿಸಿತು. ಈ ಬಸ್ಗಳು ವೀಲ್ಚೇರ್ ಸೌಲಭ್ಯವನ್ನು ಹೊಂದಿದ್ದು ಅದು ವಿದ್ಯುತ್ ಚಾಲಿತವಾಗಿದೆ. ಈ ಎಲೆಕ್ಟ್ರಿಕ್ ಬಸ್ಗಳಲ್ಲೂ ಸಹ ಪ್ರಯಾಣಿಕರ ಸುರಕ್ಷತೆಗಾಗಿ ಸಿಸಿಟಿವಿ ಕ್ಯಾಮೆರಾಗಳು, ಎಲ್ಇಡಿ ದೀಪಗಳು ಮತ್ತು ತುರ್ತು ಪ್ಯಾನಿಕ್ ಬಟನ್ಗಳೂ ಇದ್ದವು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications