ಬೆಂಗಳೂರು: ಎಲೆಕ್ಟ್ರಾನಿಕ್ಸಿಟಿ-ಅತ್ತಿಬೆಲೆ ಟೋಲ್ ಶುಲ್ಕ ಹೆಚ್ಚಳ
ಬೆಂಗಳೂರು, ಜೂನ್ 24: ಬೆಂಗಳೂರಿನ ಎಲೆಕ್ಟ್ರಾನಿಕ್ಸಿಟಿ-ಅತ್ತಿಬೆಲೆ ನಡುವಿನ ರಸ್ತೆ ಬಳಕೆ ಶುಲ್ಕವನ್ನು ಹೆಚ್ಚಿಸಲಾಗಿದೆ, ಈ ಪರಿಷ್ಕೃತ ದರವು ಜುಲೈ 1 ರಿಂದ ಜಾರಿಗೆ ಬರಲಿದೆ.
ಟೋಲ್ ಇರುವ ಸುತ್ತಮುತ್ತಲೂ ಐಟಿ ಕಂಪನಿಗಳು, ಹಳವು ಕಾರ್ಖಾನೆಗಳು ಇವೆ, ಕೆಆರ್ ಮಾರುಕಟ್ಟೆಯನ್ನು ಸಿಂಗಸಂಧ್ರಕ್ಕೆ ಸ್ಥಳಾಂತರಿಸಲಾಗಿದೆ, ತರಕಾರಿ ವ್ಯಾಪಾರಿಗಳಿಗೆ ಟೋಲ್ ರಸ್ತೆಯನ್ನೇ ಬಳಸಿ ಹೋಗಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ.
ಮಾಸಿಕ ಪಾಸ್ ದರವನ್ನು 45 ರೂ. ಹೆಚ್ಚಿಸಲಾಗಿದೆ. ದ್ವಿಚಕ್ರ ವಾಹನ ಸವಾರರು ತಿಂಗಳಿಗೆ 625 ರೂ. ಪಾವತಿಸಬೇಕಾಗುತ್ತದೆ. ಜೀಪು, ಕಾರು, ವ್ಯಾನ್, ವಾಹನಗಳ ಬಳಕೆದಾರರು ತಿಂಗಳಿಗೆ 115 ರೂ. ಪಾವತಿಸಬೇಕು. ಅಂದರೆ ಈ ವಾಹನಗಳ ಬಳಕೆ ಶುಲ್ಕವನ್ನು 75ರೂ.ನಿಂದ 80ರೂ.ನಷ್ಟು ಹೆಚ್ಚಿಸಲಾಗಿದ್ದು, ಮಾಸಿಕ ಪಾಸ್ಗೆ 1570ರೂ. ಪಾವತಿಸಬೇಕು.

ಲಘು ವಾಣಿಜ್ಯ ವಾಹನಗಳು
ಲಘು ವಾಣಿಜ್ಯ ವಾಹನಗಳು ಒಂದು ಸದರದಿಗೆ 75ರೂ. ಪಾವತಿಸಬೇಕು, ಈ ದರದಲ್ಲಿ 5 ರೂ ಹೆಚ್ಚಿಸಲಾಗಿದೆ. ಹಿಂದಿರುಗಲು 110 ರೂ. ಪಾವತಿಸಬೇಕಾಗುತ್ತದೆ ಎಂದು ತಿಳಿಸಲಾಗಿದೆ.

ಭಾರಿ ವಾಹನಕ್ಕೆ ಶುಲ್ಕವೆಷ್ಟು
ದ್ವಿಚಕ್ರ ವಾಹನಕ್ಕೆ 20 ರೂ. ನಿಗದಿಯಾಗಿದ್ದು, ಹಿಂತಿರುಗಿ ಬರುವುದಕ್ಕೆ (ಟು ಸೈಡ್) 30 ರೂ. ಶುಲ್ಕ ನಿಗದಿಯಾಗಿದೆ. ಕಾರು, ಜೀಪ್, ವ್ಯಾನ್ಗಳಿಗೆ 50 ರೂ. ಮತ್ತು ಹಿಂತಿರುಗಿ ಬರುವುದಕ್ಕೆ 80 ರೂ. ಶುಲ್ಕ ನಿಗದಿಯಾಗಿದೆ. ಮಿನಿ ಬಸ್, ಲುಘು ವಾಹನಕ್ಕೆ 80 ರೂ. ವಾಪಸ್ ಬಂದರೆ 110 ರೂ. ಚಾರ್ಜ್ ಮಾಡಲಾಗುತ್ತದೆ. ಬಸ್, ಗೂಡ್ಸ್ಗೆ 145 ರೂ. ಹಿಂತಿರುಗಿ ಬಂದರೆ 220 ರೂ. ಟೋಲ್ ದರ ಫಿಕ್ಸ್ ಆಗಿದೆ.
ಭಾರಿ ವಾಹನಕ್ಕೆ 295 ರೂ. ಹಾಗೂ ಹಿಂತಿರುಗಿ ಬಂದರೆ 440 ರೂ. ಟೋಲ್ ಚಾರ್ಜ್ ದರ ನಿಗದಿಯಾಗಿದೆ. ವಾಹನಗಳ ಮಾಸಿಕ ಪಾಸ್ನಲ್ಲಿ ಟೋಲ್ ಶುಲ್ಕ ಭಾರಿ ಹೆಚ್ಚಳವಾಗಿದ್ದು, ಶೇಕಡಾ 75ರಿಂದ 80ರಷ್ಟು ಏರಿಕೆಯಾಗಿದೆ. ದ್ವಿಚಕ್ರ ವಾಹನಗಳಿಗೆ ತಿಂಗಳ ಪಾಸ್ ದರ 625 ರೂಪಾಯಿ, ಕಾರು, ಜೀಪ್, ವ್ಯಾನ್ಸ್ಗೆ ಟೋಲ್ನ ಮಾಸಿಕ ಪಾಸ್ ದರ 1,570 ರೂ. ಲಘು ವಾಹನಗಳಿಗೆ 4,390 ರೂ. ಟ್ರಕ್, ಬಸ್ಗಳಿಗೆ ತಿಂಗಳ ಪಾಸ್ ದರ 4,390 ರೂ. ಭಾರಿ ವಾಹನಗಳ ತಿಂಗಳ ಪಾಸ್ ದರ 8,780 ರೂ. ಆಗಿದೆ.
ಹಲವು ಐಟಿ ಕಂಪನಿಗಳಿವೆ
ಈ ಮಾರ್ಗದಲ್ಲಿ ಹಲವು ಐಟಿ ಕಂಪನಿಗಳಿದ್ದು, ರಸ್ತೆ ಬಳಕೆದಾರರ ಮೇಲೆ ಮತ್ತಷ್ಟು ಹೊರೆ ಬೀಳಲಿದೆ, ಬೊಮ್ಮಸಂದ್ರದಲ್ಲಿಯೂ ನೂರಾರು ಕಂಪನಿಗಳು ಇವೆ. ಅಲ್ಲದೆ, ಕೆಆರ್ ಮಾರುಕಟ್ಟೆಯನ್ನು ಸಿಂಗಸಂದ್ರಕ್ಕೂ ಸ್ಥಳಾಂತರಿಸಲಾಗಿದ್ದು, ಸಾವಿರಾರು ಜನ ಈ ಮಾರ್ಗದ ಮೂಲಕವೇ ಮಾರುಕಟ್ಟೆಗೆ ಹೋಗಬೇಕಾಗಿದೆ.

ಈ ರಸ್ತೆ ಮೂಲಕವೇ ಹೋಗಬೇಕು
''ಕಚೇರಿ ಕೆಲಸಗಳಿಗೆ, ಸರ್ಕಾರಿ ಕಚೇರಿಗಳಿಗೆ ಇದೇ ಮಾರ್ಗದ ಮೂಲಕವೇ ಸಾಗಬೇಕು, ಈಗ ರಸ್ತೆ ಬಳಕೆ ಶುಲ್ಕ ಹೆಚ್ಚಿಸಿರುವುದು ನಮ್ಮ ಸಂಕಷ್ಟವನ್ನು ಹೆಚ್ಚಿಸಿದೆ'' ಎಂದು ಯೋಗರಾಜ್ ಎಂಬುವವರು ಅಸಾಮಾಧಾನ ಹೊರಹಾಕಿದ್ದಾರೆ.
ಸಿಂಗಸಂದ್ರ ಹೋಗಬೇಕೆಂದರೆ ಈ ರಸ್ತೆಯಲ್ಲಿ ಮೇಲ್ಸೇತುವೆಯನ್ನು ಬಳಸಿಕೊಂಡು ಹೋಗಬೇಕು. ಈಗ ಟೋಲ್ ಹೆಚ್ಚಿಸಿರುವುದು ನಮಗೆ ಮತ್ತಷ್ಟು ಹೊರೆ ಎನಿಸಿದೆ ಎಂದು ವ್ಯಾಪಾರಿ ಜಗದೀಶ್ ಹೇಳಿದ್ದಾರೆ.-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ












Click it and Unblock the Notifications