ಬೆಂಗಳೂರು: ವಾಹನ ಸವಾರರಿಗೆ ಸಿಹಿ ಸುದ್ದಿ, ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಜೂನ್ 2023ಕ್ಕೆ ಆರಂಭ
ಬೆಂಗಳೂರು, ಡಿ. 23: ಟೆಕ್ ಹಬ್ ಎಲೆಕ್ಟ್ರಾನಿಕ್ ಸಿಟಿಯನ್ನು ಬೆಂಗಳೂರಿನ ಇತರ ಭಾಗಗಳೊಂದಿಗೆ ಸಂಪರ್ಕಿಸುವ ಹೊಸೂರು ರಸ್ತೆಯಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಅದೊಂದು ಪ್ರಸವ ವೇದನೆಯೇ ಸರಿ.
ಹೊಸೂರು ರಸ್ತೆಯ ಟ್ರಾಫಿಕ್ನಲ್ಲಿ ಸಂಚಾರವೂ ಸಹ ಕಚೇರಿಗೆ ಹೋಗುವವರು ಮತ್ತು ವಿದ್ಯಾರ್ಥಿಗಳಿಗೆ ಕಷ್ಟವೇ ಸರಿ. ಅದರಲ್ಲೂ ವಾರಾಂತ್ಯದಲ್ಲಿ ಖಾಸಗಿ ಬಸ್ ಗಳು ಅಕ್ರಮವಾಗಿ ರಸ್ತೆಗಳಲ್ಲಿ ನಿಲುಗಡೆ ಮಾಡುವುದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಇನ್ನು, ಎಲೆಕ್ಟ್ರಾನಿಕ್ಸ್ ಸಿಟಿಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಸ್ತೆಯ ಮೂಲಕ 50 ಕಿಮೀ ಪ್ರಯಾಣಿಸುವುದು ತುಂಬಾ ಬೇಸರದ ಸಂಗತಿಯಾಗಿದೆ.
ಇದಕ್ಕೆಲ್ಲ ಜೂನ್ 2023 ರಲ್ಲಿ ಸಾರ್ವಜನಿಕರಿಗೆ ಮುಕ್ತವಾಗಲಿದೆ ಎನ್ನಲಾಗಿರುವ, 19 ಕಿಮೀ ಉದ್ದದ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ (ಬೊಮ್ಮಸಂದ್ರ - ಆರ್ವಿ ರಸ್ತೆ ಹಳದಿ ಮಾರ್ಗ) ಹೊಸೂರು ರಸ್ತೆಯ ಜನದಟ್ಟಣೆಯನ್ನು ಕಡಿಮೆ ಮಾಡುತ್ತದೆ. ಹೇಳಿರುವ ಗಡುವನ್ನು ಅನುಸರಿಸಿದರೆ ಪ್ರಯಾಣಿಕರ ಸಮಸ್ಯೆಗೆ ಪರಿಹಾರ ನೀಡಿದಂತಾಗುತ್ತದೆ.

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ಸಹ ಬಸ್ ನಿಲ್ದಾಣಗಳು, ಪಾದಚಾರಿ ಮಾರ್ಗಗಳು, ಫುಟ್ ಬ್ರಿಡ್ಜ್ಗಳು ಮತ್ತು ಮುಂಬರುವ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಒಳಚರಂಡಿಯನ್ನು ನಿರ್ಮಿಸಲು ಯೋಜಿಸುತ್ತಿದೆ.
ಈ ಎಲೆಕ್ಟ್ರಾನಿಕ್ ಸಿಟಿ ಹಳದಿ ಮಾರ್ಗವು ರಾಷ್ಟ್ರೀಯ ವಿದ್ಯಾಲಯ ರಸ್ತೆ, ರಾಗಿಗುಡ್ಡ, ಜಯದೇವ ಆಸ್ಪತ್ರೆ, ಬಿಟಿಎಂ ಲೇಔಟ್, ಸೆಂಟ್ರಲ್ ಸಿಲ್ಕ್ ಬೋರ್ಡ್, ಬೊಮ್ಮನಹಳ್ಳಿ (ಎಚ್ಎಸ್ಆರ್ ಲೇಔಟ್), ಹೊಂಗಸಂದ್ರ (ಆಕ್ಸ್ಫರ್ಡ್ ಕಾಲೇಜು), ಕುಡ್ಲು ಗೇಟ್ (ಮುನೇಶ್ವರ ನಗರ), ಸಿಂಗಸಂದ್ರ (ಚಿಕ್ಕಬೇಗೂರು), ಹೊಸ ರಸ್ತೆ (ಚಿಕ್ಕಬೇಗೂರು), ಹೊಸ ರಸ್ತೆ ( ಬಸಾಪುರ ರಸ್ತೆ), ಬೆರಟೆನ ಅಗ್ರಹಾರ (ಹೊಸ ರಸ್ತೆ), ಎಲೆಕ್ಟ್ರಾನಿಕ್ಸ್ ಸಿಟಿ, ಇನ್ಫೋಸಿಸ್ ಫೌಂಡೇಶನ್ ಕೋನಪ್ಪನ ಅಗ್ರಹಾರ (ಎಲೆಕ್ಟ್ರಾನಿಕ್ಸ್ ಸಿಟಿ - II), ಹುಸ್ಕೂರು ರಸ್ತೆ, ಹೆಬ್ಬಗೋಡಿ ಮತ್ತು ಬೊಮ್ಮಸಂದ್ರ ಮೂಲಕ ಹಾದು ಹೋಗಲಿದೆ.
ಹಳದಿ ಮಾರ್ಗವು 2021 ರಲ್ಲಿ ಪೂರ್ಣಗೊಳ್ಳಬೇಕಿತ್ತು. ನಂತರ ಅದನ್ನು ಡಿಸೆಂಬರ್ 2022 ಕ್ಕೆ ಮುಂದೂಡಲಾಗಿತ್ತು. ಮತ್ತೆ ಅದನ್ನು ಜೂನ್ 2023 ಕ್ಕೆ ವಿಸ್ತರಿಸಲಾಗಿದೆ.

ಹೊಂಗಸಂದ್ರ, ಸಿಂಗಸಂದ್ರ, ಹೊಸ ರಸ್ತೆ, ಎಲೆಕ್ಟ್ರಾನಿಕ್ ಸಿಟಿ ಮತ್ತು ಇನ್ಫೋಸಿಸ್ ಫೌಂಡೇಶನ್ ಕೋನಪ್ಪನ ಅಗ್ರಹಾರ ಮುಂತಾದ ನಿಲ್ದಾಣಗಳಿಗೆ ಹೊಸೂರು ರಸ್ತೆಯ ಫುಟ್ ಬ್ರಿಡ್ಜ್ಗಳ ಮೂಲಕ ಸಂಪರ್ಕಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಮ್ಮ ಮೆಟ್ರೋನ ಹಳದಿ ರೇಖೆಯು ಜಯನಗರ, ಬಿಟಿಎಂ ಲೇಔಟ್ ಮತ್ತು ಎಚ್ಎಸ್ಆರ್ ಲೇಔಟ್ನಂತಹ ಪ್ರದೇಶಗಳ ನಿವಾಸಿಗಳಿಗೆ ಮತ್ತು ಎಲೆಕ್ಟ್ರಾನಿಕ್ ಸಿಟಿ ಮತ್ತು ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ಮಾಡುವವರಿಗೆ ಸಹಾಯ ಮಾಡುತ್ತದೆ.
ಇದಲ್ಲದೆ, ಬೊಮ್ಮಸಂದ್ರ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ನಿಲ್ದಾಣಗಳ ನಡುವಿನ ಮೆಟ್ರೋ ಸಿವಿಲ್ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಎಂಆರ್ಸಿಎಲ್ ದಾಖಲೆಗಳ ಪ್ರಕಾರ, ನವೆಂಬರ್ 2022 ರವರೆಗೆ, ಬೊಮ್ಮಸಂದ್ರ-ಬೆರಟೆನ ಅಗ್ರಹಾರ (ಹೊಸ ರಸ್ತೆ) ಮತ್ತು ಬೆರಟೆನ ಅಗ್ರಹಾರ-ಬೊಮ್ಮನಹಳ್ಳಿಯಲ್ಲಿ ತಲಾ 98. 9% ಸಿವಿಲ್ ಕಾಮಗಾರಿ ಮತ್ತು ಬೊಮ್ಮನಹಳ್ಳಿ-ಆರ್ವಿ ರಸ್ತೆ ವಿಭಾಗಗಳ ಕಾಮಗಾರಿ 96. 2% ಪೂರ್ಣಗೊಂಡಿದೆ. ಅಲ್ಲದೆ ಹೆಬ್ಬಗೋಡಿ ಡಿಪೋದಲ್ಲಿ ಶೇ.87ರಷ್ಟು ಸಿವಿಲ್ ಕಾಮಗಾರಿಯೂ ಮುಗಿದಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಬೆಂಗಳೂರಿನಂತೆ ಇಲ್ಲಿ ಟ್ರಾಫಿಕ್ ಇಲ್ಲ, ನಮ್ಮ ಹೈದರಾಬಾದ್ ಬೆಸ್ಟ್ ಎಂದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications