ಟೋಲ್ ಸಂಕಟ: ಎಲೆಕ್ಟ್ರಾನಿಕ್ಸ್ ಸಿಟಿ ಪ್ರಯಾಣ ದುಬಾರಿ
ಬೆಂಗಳೂರು, ಜೂನ್ 23: ರಾಜಧಾನಿ ಬೆಂಗಳೂರಿಗೆ ಈ ಬಾರಿ ಪೂರ್ವ ದಿಕ್ಕಿನಿಂದ ಟೋಲ್ ಸಂಕಟ ಶುರುವಾಗಲಿದೆ. ಹೌದು ಹೊಸೂರು ರಸ್ತೆಯ ಎಲೆಕ್ಟ್ರಾನಿಕ್ಸ್ ಸಿಟಿ ಪ್ರಯಾಣ ಇದೇ ಜುಲೈನಿಂದ ದುಬಾರಿಯಾಗಲಿದೆ.
ಸಮಯ ಉಳಿತಾಯ ಮತ್ತು ಸುಗಮ ಸಂಚಾರ ಬಯಸಿ ಎಲೆಕ್ಟ್ರಾನಿಕ್ಸ್ ಸಿಟಿ ಮೇಲ್ಸೇತುವೆಯನ್ನು ನಿರ್ಮಾಣ ಮಾಡಲಾಗಿದೆ. ಆದರೆ ಜುಲೈ 1 ರಿಂದ ಈ ಭಾಗದಲ್ಲಿ ಸಂಚರಿಸುವವರಿಗೆ ಇದು ದುಬಾರಿಯಾಗಲಿದೆ. Bangalore Elevated Tollway Limited (BETL) ಈ ದರ ಹೆಚ್ಚಳ ಮಾಡಿದೆ.

ಒಂದು ಬಾರಿ ಪ್ರಯಾಣಕ್ಕೆ ಮತ್ತು ದೈನಂದಿನ ಪಾಸ್ ದರದಲ್ಲಿ 5 ರೂ ಹೆಚ್ಚಳ ಮಾಡಲಾಗಿದೆ. ಇದೀಗ ಎಲೆಕ್ಟ್ರಾನಿಕ್ಸ್ ಸಿಟಿ ಫ್ಲೈ ಓವರ್ ಮೇಲೆ ಪ್ರಯಾಣಿಸಲು ದ್ವಿಚಕ್ರ ವಾಹನದವರು ಮಾಸಿಕ 535 ರೂ. ನಾಲ್ಕು ಚಕ್ರದ ವಾಹನ ಸವಾರರು 1,335 ರೂ ಮತ್ತು ಮಿನಿ ಬಸ್ಸಿಗೆ 1,865 ರೂ ಮಾಸಿಕ ದರ ನಿಗದಿಪಡಿಸಲಾಗಿದೆ. (ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ)
ಇನ್ನು ಸಿಂಗಲ್ ಟ್ರಿಪ್ ಗೆ ದ್ವಿಚಕ್ರ ವಾಹನದವರು 20 ರೂ. ನಾಲ್ಕು ಚಕ್ರದ ವಾಹನ ಸವಾರರು 45 ರೂ ದರ ನಿಗದಿಪಡಿಸಲಾಗಿದೆ. ಇನ್ನು ದೈನಂದಿನ ಪಾಸ್- ದ್ವಿಚಕ್ರ ವಾಹನದವರು 30 ರೂ. ನಾಲ್ಕು ಚಕ್ರದ ವಾಹನ ಸವಾರರು 75 ರೂ ನೀಡಬೇಕಾಗುತ್ತದೆ. (ಬೆಂಗಳೂರು : ಟೋಲ್ ದರ 20 ರೂ ಕಡಿಮೆ ಆಗುತ್ತಾ?)
ಆದರೆ ಎಲೆಕ್ಟ್ರಾನಿಕ್ಸ್ ಸಿಟಿ ಮೇಲ್ಸೇತುವೆಯಿಂದ ಸಂಚಾರ ದಟ್ಟಣೆ ಕಡಿಮೆಯಾಗಿ ಸುಗಮ ಸಂಚಾರ ಕೈಗೊಳ್ಳಬಹುದು ಎಂದು ಭಾವಿಸಿದ್ದವರಿಗೆ ಈಗ ನಿರಾಶೆಯಾಗಿದೆ. ಏಕೆಂದರೆ ಸಿಲ್ಕ್ ಬೋರ್ಡ್ ಜಂಕ್ಷನ್ ಬಳಿ ಮಾತ್ರವೇ ಸಲೀಸಾಗಿದೆ. ಹಾಗಾಗಿ ಈಗ ಟೋಲ್ ದರ ಏರಿಕೆ ವಾಹನ ಸವಾರರಿಗೆ ಬಿಸಿತುಪ್ಪವಾಗಿದೆ. ನಾಲ್ಕು ವರ್ಷಗಳ ಹಿಂದೆ ಈ ಫ್ಲೈ ಓವರ್ ಪ್ರಾರಂಭಾವಾದಾಗ ಪ್ರತಿ ವರ್ಷ ಅಲ್ಪ ಪ್ರಮಾಣದಲ್ಲಿ ಟೋಲ್ ದರ ಹೆಚ್ಚಿಸುವ ಮಾತಿತ್ತು. ಆದರೆ ಇದೀಗ ಅದು ದುಬಾರಿಯಾಗಿ ಪರಿಣಮಿಸುತ್ತಿದೆ ಎಂದು Electronics City Industries Association ಸಿಇಒ ರಮಾ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
Premium Petrol Price: ಭಾರತದಲ್ಲಿ ಪ್ರೀಮಿಯಂ ಪೆಟ್ರೋಲ್ ದರ ಏರಿಕೆ -
Petrol Price: 1947ರಲ್ಲಿ ಕೇವಲ 25 ಪೈಸೆ ಇದ್ದ ಪೆಟ್ರೋಲ್ ಈಗ 100ರ ಗಡಿ ದಾಟಿದ್ದೇಗೆ? ಇಲ್ಲಿದೆ ತೈಲ ದರದ ಕುತೂಹಲಕಾರಿ ಇತಿಹಾಸ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications