ಪರಿಸರ ಸ್ನೇಹಿ ಇ-ಸಿಟಿ ಹಬ್ಬಕ್ಕೆ ಪಲ್ಲವಿ ಗಾಯನದ ಮೆರಗು
ಬೆಂಗಳೂರು, ಆಗಸ್ಟ್ 28: ಎಲೆಕ್ಟ್ರಾನಿಕ್ ಸಿಟಿ ಇಂಡಸ್ಟ್ರಿಯಲ್ ಟೌನ್ಶಿಪ್ ಅಥಾರಿಟಿ (ಎಲ್ಸಿಟಾ) ಯು ಆಗಸ್ಟ್ 31ರಂದು ಎಲೆಕ್ಟ್ರಾನಿಕ್ ಸಿಟಿಯ ಇನ್ಫೋಸಿಸ್ ಮೈದಾನದಲ್ಲಿ ಇ-ಸಿಟಿ ಹಬ್ಬವನ್ನು ಆಯೋಜಿಸಿದೆ.
ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಸಂಸ್ಥೆಗಳಾದ ಇನ್ಫೋಸಿಸ್, ವಿಪ್ರೊ, ಟೆಕ್ ಮಹೀಂದ್ರಾ, ಹಿಕಾಲ್, ಟೆಸಾಲ್ವ್, ಹೆಚ್ಪಿವಿ ಹಾಗೂ ಇತರ ಕಂಪೆನಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉದ್ಯೋಗಿಗಳಿಗೆ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಅವಕಾಶ ಒದಗಿಸುವ ವೇದಿಕೆ ಇದಾಗಿದೆ.
ಸಂಗೀತ, ರಂಗ, ನೃತ್ಯ ಹಾಗೂ ಇತರ ಸಾಂಸ್ಕೃತಿಕ ಮತ್ತು ಕಲಾ ವಿಭಾಗಗಳಲ್ಲಿ ತಮ್ಮ ಪ್ರತಿಭೆಯನ್ನು ಇ-ಸಿಟಿ ಉದ್ಯೋಗಿಗಳು ಸಾದರಪಡಿಸಲಿದ್ದಾರೆ.
ಕನ್ನಡದ ಖ್ಯಾತ ಗಾಯಕಿ ಎಂ. ಡಿ. ಪಲ್ಲವಿ ಹಾಗೂ ಇ-ಸಿಟಿಯ ಜನಪ್ರಿಯ ಮೇಘಧ್ವನಿ ತಂಡದವರು ಈ ಕಾರ್ಯಕ್ರಮದಲ್ಲಿ ಗಾಯನ - ಸಂಗೀತ ಪ್ರಸ್ತುತ ಪಡಿಸಲಿದ್ದಾರೆ. ಇ-ಸಿಟಿ ಹಬ್ಬವು, ಜೀವಭೂಮಿ, ಕ್ವಾಂಟಮ್ ಲೀಪ್ ಗುರು ಹಾಗೂ ಇತರ ಸಂಸ್ಥೆಗಳ ಉತ್ಪನ್ನಗಳ ಪ್ರದರ್ಶನ ಮಳಿಗೆಗಳನ್ನು ಹೊಂದಿರಲಿದೆ.

ವೈವಿಧ್ಯ ಸಾರಲು ಹಾಗೂ ಆರ್ಥಿಕ ಹಾಗೂ ಸಾಮಾಜಿಕ ಬದಲಾವಣೆ ಗುರುತಿಸುವ ಸಲುವಾಗಿ ಎಲ್ಸಿಟಾ ಸಂಸ್ಥೆಯು ಇ-ಸಿಟಿಯ ಉದ್ಯೋಗಿಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸುವ ವೇದಿಕೆ ಕಲ್ಪಿಸಿದೆ. ಪರಿಸರದ ಹಿತವನ್ನು ಕಾಪಾಡುವ ಉದ್ದೇಶದಿಂದ ಈ ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ.
ಉತ್ತಮ ಗುಣಮಟ್ಟದ ಜೀವನ ನಡೆಸಲು ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿ ಎಂಬುದು ಎಲ್ಸಿಟಾ ಸಂಸ್ಥೆಯ ಅಭಿಪ್ರಾಯ. ಕಲಾ ಪ್ರಕಾರಗಳ ಉಳಿವಿಗೆ ಇಂತಹ ಕಾರ್ಯಕ್ರಮಗಳು ಅತ್ಯಗತ್ಯ. ಸಮಾಜ ಮತ್ತು ಕಲೆಯ ನಡುವೆ ಅವಿನಾಭಾವ ಸಂಬಂಧವಿದೆ. ಸಂಸ್ಕೃತಿಯು ಕೇವಲ ವ್ಯಕ್ತಿಕೇಂದ್ರಿತವಲ್ಲ. ಬದಲಿಗೆ ಅದು ಸಮಾಜದ ಬದಲಾವಣೆ- ಬೆಳವಣಿಗೆಗಳ ವಿಕಸಿತ ರೂಪ.
ಇ-ಸಿಟಿಯೊಂದಿಗೆ ಸ್ನೇಹ- ಬಾಂಧವ್ಯ ಬೆಸೆಯುವ ಹಾಗೂ ಒಗ್ಗಟ್ಟಿನ ಮನೋಭಾವ ಬೆಳೆಸುವುದಕ್ಕೆ ಈ ಕಾರ್ಯಕ್ರಮವು ಅವಕಾಶ ಕಲ್ಪಿಸಲಿದೆ. ಇ-ಸಿಟಿಯು ಕೇವಲ ಉದ್ಯೋಗಕ್ಕಾಗಿ ಮೀಸಲಿರುವಂತಹ ಪ್ರದೇಶವಾಗಿ ಮಾತ್ರ ಉಳಿದಿಲ್ಲ. ಹಲವರ ವಾಸಕ್ಕೆ ನೆಲೆ ಒದಗಿಸಿರುವ ಸ್ಥಳವೂ ಹೌದು. ಆದ್ದರಿಂದ ಸಾಂಸ್ಕೃತಿಕ ಹಬ್ಬದ ವಾತಾವರಣ ರೂಪಿಸುವ ಅಗತ್ಯವಿದೆ.
ಇ-ಸಿಟಿ ಹಬ್ಬದ ಸಾಂಸ್ಕೃತಿಕ ಹಾಗೂ ಕಲಾ ವೈಭವವನ್ನು ಸವಿಯಲು ಇಂದೇ ತಮ್ಮ ಹೆಸರನ್ನು ಇಸಿಟಿಹಬ್ಬ.ಇನ್ ನಲ್ಲಿ ನೋಂದಾಯಿಸಬಹುದು.
ಎಲ್ಸಿಟಾ (ಎಲೆಕ್ಟ್ರಾನಿಕ್ ಸಿಟಿ ಇಂಡಸ್ಟ್ರಿಯಲ್ ಟೌನ್ಶಿಪ್ ಅಥಾರಿಟಿ)
2013ರಲ್ಲಿ ಸ್ಥಾಪಿಸಲಾದ ಎಲ್ಸಿಟಾ ಸಂಸ್ಥೆಯು ಇಲೆಕ್ಟ್ರಾನಿಕ್ ಸಿಟಿಯ ನಿರ್ವಹಣೆ ಮಾಡುತ್ತಿದೆ. ಕರ್ನಾಟಕ ಸರಕಾರವು 2013ರಲ್ಲಿ ಇಲೆಕ್ಟ್ರಾನಿಕ್ ಸಿಟಿಯನ್ನು ಕೈಗಾರಿಕಾ ಪ್ರದೇಶ ಎಂದು ಪರಿಗಣಿಸಿ ಇದರ ನಿರ್ವಹಣೆಗಾಗಿ ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ ಆಕ್ಟ್ ಅಡಿಯಲ್ಲಿ ಎಲ್ಸಿಟಾ ಸಂಸ್ಥೆಯನ್ನು ಸ್ಥಾಪಿಸಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications