ಉಕ್ಕಿನ ಸೇತುವೆ ಬದಲು ಎಲಿವೇಟೆಡ್ ರಸ್ತೆ, ಅಳಿಯ ಅಲ್ಲ...!
ಬೆಂಗಳೂರು, ಫೆಬ್ರವರಿ 28 : ಸ್ಟೀಲ್ ಫ್ಲೈಓವರ್ ಯೋಜನೆ ರದ್ದಾಗಿರುವುದು, #SteelFlyoverBeda ಅಭಿಯಾನ ಪ್ರಾರಂಭಿಸಿದ ಬೆಂಗಳೂರಿನ ಜನತೆಯ ಹೋರಾಟಕ್ಕೆ ಸಂದ ಜಯವಾದರೂ, ಈಗಲೇ ಪಟಾಕಿ ಹಾರಿಸಿ, ಸಿಹಿ ಹಂಚಿ ಸಂತಸ ಪಡುವ ಅಗತ್ಯವಿಲ್ಲ.
ಬಸವೇಶ್ವರ ಸರ್ಕಲ್ ನಿಂದ ಹೆಬ್ಬಾಳದ ಎಸ್ಟೀಮ್ ಮಾಲ್ ವರೆಗೆ 6.7 ಕಿ.ಮೀ. ಉದ್ದರ ಉಕ್ಕಿನ ಸೇತುವೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಕುಟುಂಬಕ್ಕೆ 65 ಕೋಟಿ ರುಪಾಯಿ ಕಪ್ಪಕಾಣಿಕೆ ನೀಡಲಾಗಿದೆ ಎಂದು ಬಿಜೆಪಿ ಆರಂಭಿಸಿದ್ದ ಆರೋಪಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಸರಕಾರ ಮತ್ತೊಂದು ಯೋಜನೆಗೆ ಕೈಹಾಕಿದೆ. [ಭ್ರಷ್ಟತನದ ತುಕ್ಕು ಹಿಡಿದಿದ್ದ ಉಕ್ಕಿನ ಸೇತುವೆ ಯೋಜನೆ ರದ್ದು]

ಅದು ಹೆಬ್ಬಾಳದ ಎಸ್ಟೀಮ್ ಮಾಲ್ ನಿಂದ ಬಸವೇಶ್ವರ ವೃತ್ತದವರೆಗೆ ಸ್ಟೀಲ್ ಫ್ಲೈಓವರ್ ಬದಲು ಎಲಿವೇಟೆಡ್ ರಸ್ತೆಯನ್ನು ನಿರ್ಮಿಸುವ ಪ್ಲಾನ್ ಸಿದ್ದರಾಮಯ್ಯ ಹಾಕಿಕೊಂಡಿದೆ. ಅಳಿಯ ಅಲ್ಲ ಮಗಳ ಗಂಡ! ಉಕ್ಕಿನ ಸೇತುವೆ ಯೋಜನೆ ರದ್ದಾಗಿದ್ದರಿಂದ ಕಿಕ್ ಬ್ಯಾಕ್ ಕಥೆಯೇನು ಎಂಬಿತ್ಯಾದಿ ಪ್ರಶ್ನೆಗಳು ಟ್ವಿಟ್ಟರಿನಲ್ಲಿ ಹರಿದಾಡುತ್ತಿವೆ.
ಇದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಾಡಿದ ಹೋರಾಟದ ಫಲ. ಸಂಪೂರ್ಣ ಯಶಸ್ಸು ಅವರಿಗೇ ಸಿಗಬೇಕು ಎಂದು ಕೆಲ ಬಿಜೆಪಿ ಶಾಸಕರು, ಸಂಸದರು ಕ್ರೆಡಿಟ್ ತೆಗೆದುಕೊಳ್ಳಲು ನೋಡುತ್ತಿದ್ದಾರೆ. ಆದರೆ, ಅವರಿಗೆ ನೆನಪಿರಲಿ, ಬೆಂಗಳೂರು ಜನತೆಯ ಹೋರಾಟವೂ ಇದರ ಹಿಂದಿದೆ. [ಏನಿದು ಉಕ್ಕಿನ ಮೇಲ್ಸೇತುವೆ ಯೋಜನೆ? ಏಕೆ ವಿರೋಧ?]

ಸ್ಟೀಲ್ ಫ್ಲೈಓವರ್ ಬೇಡ ಎಂದ ಮಾನವ ಸರಪಳಿ ನಿರ್ಮಿಸಲಾಗಿತ್ತು, ಸಹಿ ಅಭಿಯಾನ ಪ್ರಾರಂಭಿಸಲಾಗಿತ್ತು. ಇದಕ್ಕೆ ಸಹಸ್ರಾರು ಬೆಂಗಳೂರಿನ ನಾಗರಿಕರು ಭಾಗವಹಿಸಿ ತಮ್ಮ ಬೆಂಬಲ ವ್ಯಕ್ತಪಡಿಸಿದ್ದರು. ಸಂಸದ ರಾಜೀವ್ ಚಂದ್ರಶೇಖರ್ ಅವರು ಕೂಡ ಈ ಯೋಜನೆಯ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದರು.
ಸ್ಟೀಲ್ ಫ್ಲೈಓವರ್ ರದ್ದಾಗಿರುವುರಿಂದ, ಆ ದಾರಿಯುತ್ತದ್ದಕ್ಕೂ ಸಾವಿನ ಕ್ಷಣಗಣನೆ ಮಾಡಿಕೊಂಡು ಉಸಿರು ಬಿಗಿಹಿಡಿದು, ತೂಗಾಡುವುದನ್ನೇ ನಿಲ್ಲಿಸಿದ್ದ ವೈವಿಧ್ಯಮಯ ಮರಗಳು ಮತ್ತೆ ಉಸಿರಾಡಲು ಆರಂಭಿಸಿದ್ದವು. ಆದರೆ, ಎಲಿವೇಟೆಡ್ ರಸ್ತೆ ಬರುತ್ತಿರುವುದರಿಂದ ಮತ್ತೆ ಅವುಗಳ ನಾಶಕ್ಕೆ ದಿನಗಣನೆ ಆರಂಭವಾದರೂ ಅಚ್ಚರಿಯಿಲ್ಲ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು










Click it and Unblock the Notifications