80 ಕೋಟಿ ರೂಪಾಯಿ ಮೌಲ್ಯದ ಸರ್ಕಾರಿ ಭೂಮಿ ಭೂಗಳ್ಳರ ಪಾಲು, ಘರ್ಜಿಸಿದ ಜೆಸಿಬಿ! Bengaluru Property
ರಾಜಧಾನಿ ಬೆಂಗಳೂರಲ್ಲಿ ಒಂದು ಸಣ್ಣ ಸೈಟ್ ಖರೀದಿ ಮಾಡುವುದಕ್ಕೆ ಕೂಡ ಬಡವರು ಪರದಾಡುವ ಪರಿಸ್ಥಿತಿ ಇದೆ. ಆದರೆ ಭೂಗಳ್ಳರು ಮಾತ್ರ ನೂರಾರು ಕೋಟಿ ರೂಪಾಯಿ ಬೆಲೆಬಾಳುವ ಎಕರೆ ಎಕರೆ ಜಮೀನು ನುಂಗಿ ಒತ್ತುವರಿ ಮಾಡಿಕೊಂಡಿದ್ದಾರೆ. ಹೀಗಿದ್ದಾಗ ಸರ್ಕಾರ ಭೂಗಳ್ಳರ ವಿರುದ್ಧ ಕಠಿಣ ಕ್ರಮ ಕೈಗೊಂಡು ಒತ್ತುವರಿ ತೆರವು ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಇಂದು ಕೂಡ ಇದೇ ರೀತಿ, ಭೂ ಒತ್ತುವರಿ ಮಾಡಿಕೊಂಡಿದ್ದ ಭೂಗಳ್ಳರ ಎದೆ ನಡುಗಿದೆ. ಬರೋಬ್ಬರಿ 80 ಕೋಟಿ ರೂಪಾಯಿ ಮೌಲ್ಯದ ಸರ್ಕಾರಿ ಜಮೀನು ರಕ್ಷಣೆ ಮಾಡಲಾಗಿದೆ.
ಒಟ್ಟು 16 ಎಕರೆಗೂ ಹೆಚ್ಚು ಭೂಮಿಯನ್ನು ರಕ್ಷಣೆ ಮಾಡಲಾಗಿದ್ದು, ಇದರ ಮಾರುಕಟ್ಟೆ ಮೌಲ್ಯವೇ ಸುಮಾರು 80 ಕೋಟಿ ರೂಪಾಯಿಗೂ ಹೆಚ್ಚಾಗಿದೆ. ಹೀಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರ ನೇತೃತ್ವದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು. ಬೆಂಗಳೂರು ನಗರ ಜಿಲ್ಲೆಯಲ್ಲಿ ವಿವಿಧ ತಾಲೂಕುಗಳ ತಹಸೀಲ್ದಾರ್ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಸರ್ಕಾರಿ ಜಾಗಗಳಾದ ಸ್ಮಶಾನ, ಗುಂಡುತೋಪು, ಡ್ರೈನೇಜ್, ರಾಜಕಾಲುವೆ, ಗೋಮಾಳ, ಕೆರೆ ಜಾಗ, ಸರ್ಕಾರಿ ಗೋಮಾಳ & ಹಿಡುವಳಿ ಸರ್ವೆ ನಂ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ನಡೆಸಿದರು.

ಒಂದೇ ಕಡೆ 7 ಎಕರೆ ಒತ್ತುವರಿ
ಆನೇಕಲ್ ತಾಲೂಕಿನಲ್ಲಿ ಒತ್ತುವರಿ ಕಾರ್ಯಾಚರಣೆ ನಡೆದಿದ್ದು, ಸರ್ಕಾರಿ ಭೂಮಿ ರಕ್ಷಣೆಯಾಗಿದೆ. ಜಗಣಿ ಹೋಬಳಿಯ ಕೊಪ್ಪ ಗ್ರಾಮದ ಸ.ನಂ. 110 ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 7 ಎಕರೆ 0.21 ಗುಂಟೆಗಳಾಗಿದ್ದು, ಅಂದಾಜು 60 ಕೋಟಿ ರೂಪಾಯಿ ಮೌಲ್ಯದ ಜಮೀನು ಒತ್ತುವರಿ ತೆರವು ಮಾಡಲಾಗಿದೆ. ಆನೇಕಲ್ ತಾಲೂಕು ಕಸಬಾ ಹೋಬಳಿ ಮರಸೂರು ಗ್ರಾಮದ ಸ.ನಂ 499ರ ಒತ್ತುವರಿ ತೆರುವ ಮೂಲಕ ಸುಮಾರು 1 ಕೋಟಿ ರೂಪಾಯಿ ಮೌಲ್ಯದ ಜಾಗ ರಕ್ಷಣೆ ಮಾಡಿದ್ದಾರೆ.
ಅತ್ತಿಬೆಲೆ ಹೋಬಳಿ ಇಂಡಬೆಲೆ ಗ್ರಾಮದಲ್ಲಿ ಸರ್ವೆ ನಂಬರ್ 131 ಬಳಿ ರಾಜಕಾಲುವೆ ಒತ್ತುವರಿಯ ತೆರವು ಕಾರ್ಯಾಚರಣೆ ಮೂಲಕ 0.30 ಗುಂಟೆ ಜಾಗ ವಶಕ್ಕೆ ಪಡೆಯಲಾಗಿದೆ. ಹಾಗೂ ಅತ್ತಿಬೆಲೆ ಹೋಬಳಿ ಯಡವನಹಳ್ಳಿ ಗ್ರಾಮದ ಸ.ನಂ. 164 ಸರ್ಕಾರಿ ಜಾಗವನ್ನ ಒತ್ತುವರಿ ಮಾಡಿಕೊಳ್ಳಲಾಗಿತ್ತು, ಅದನ್ನು ಕೂಡ ತೆರವು ಮಾಡಲಾಗಿದೆ. ಅಧಿಕಾರಿಗಳು ಈಗಾಗಲೇ ನೋಟಿಸ್ ಕೊಟ್ಟು ತೆರವು ಕಾರ್ಯಾಚರಣೆ ನಡೆಸಿದ್ದಾರೆ.
ಪೊಲೀಸರಿಂದ ಕಾರ್ಯಾಚರಣೆ ವೇಳೆ ಭದ್ರತೆ
ಇದೇ ರೀತಿಯಾಗಿ ಬೆಂಗಳೂರು ಪೂರ್ವ ತಾಲೂಕು, ಬೆಂಗಳೂರು ದಕ್ಷಿಣ ತಾಲೂಕು, ಬೆಂಗಳೂರು ಉತ್ತರ ತಾಲೂಕು, ಯಲಹಂಕ ತಾಲೂಕು, ಸೇರಿದಂತೆ ಬೆಂಗಳೂರಿನ ಹಲವು ಪ್ರದೇಶದಲ್ಲಿ ಒತ್ತುವರಿ ತೆರವು ಮಾಡಲಾಗಿದೆ. ಒತ್ತುವರಿ ತೆರವು ಸಮಯದಲ್ಲಿ ಪೊಲೀಸರು ಕೂಡ ಅಗತ್ಯ ಭದ್ರತೆ ನೀಡಿದ್ದರು. ಈ ಮೂಲಕ ಬೆಂಗಳೂರು ನಗರದಲ್ಲಿ ಸರ್ಕಾರದ ಜಮೀನು ಒತ್ತುವರಿ ಮಾಡಿಕೊಂಡಿದ್ದವರಿಗೆ ಆಘಾತವೇ ಸಿಕ್ಕಿದೆ. ಕಾರ್ಯಾಚರಣೆ ಮತ್ತಷ್ಟು ವೇಗವಾಗಿ ಮುಂದುವರಿಯಲಿದ್ದು, ಇದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications