ಮದ್ಯ'ರಾತ್ರಿ ಅವಧಿ ವಿಸ್ತರಣೆ ಪೊಲೀಸರಿಗೆ ಸವಾಲು
ಬೆಂಗಳೂರು, ಮಾ.4 : ನೈಟ್ ಲೈಫ್ ಅವಧಿ ವಿಸ್ತರಣೆ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್, 15-20 ದಿನಗಳಲ್ಲಿ ನೈಟ್ ಲೈಫ್ ಅವಧಿ ವಿಸ್ತರಣೆ ಬಗ್ಗೆ ಅಂತಿಮ ಆದೇಶ ಹೊರಬೀಳಲಿದೆ ಎಂದು ತಿಳಿಸಿದ್ದಾರೆ.
ಗೃಹ ಸಚಿವ ಕೆಜೆ ಜಾರ್ಜ್, ಕಾರ್ಪೋರೆಟ್ ಸಂಸ್ಥೆಗಳ ಬಹುದಿನಗಳ ಬೇಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದು, ಮೊದಲ ಹಂತದಲ್ಲಿ ಶುಕ್ರವಾರ ಮತ್ತು ಶನಿವಾರ ಮಾತ್ರ ಮಧ್ಯರಾತ್ರಿ 1 ಗಂಟೆಯವರೆಗೆ ಹೊಟೇಲ್, ಪಬ್, ಬಾರ್, ರೆಸ್ಟೋರೆಂಟ್ಗಳನ್ನು ತೆರೆದಿರಲು ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದ್ದರು. [ನೈಟ್ ಲೈಫ್ ಅವಧಿ ವಿಸ್ತರಣೆಗೆ ಬಿಜೆಪಿ ಅಸಮಾಧಾನ]

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬೆಂಗಳೂರು ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್, ಅಬಕಾರಿ ಮತ್ತು ಪೊಲೀಸ್ ಇಲಾಖೆ ಅಧಿಸೂಚನೆ ಹೊರಡಿಸಿದ ಬಳಿಕ, ನೈಟ್ ಲೈಫ್ ಅವಧಿ ವಿಸ್ತರಣೆ ಅನುಷ್ಠಾನಕ್ಕೆ ಬರಲಿದೆ. ರಾಜ್ಯ ಅಬಕಾರಿ ಮತ್ತು ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದ್ದು, 15-20 ದಿನಗಳಲ್ಲಿ ಈ ಕುರಿತು ಅಂತಿಮ ಆದೇಶ ಹೊರಬರುತ್ತದೆ ಎಂದರು. [ಬೆಂಗಳೂರಿನಲ್ಲಿ ಇನ್ನು ಮದ್ಯರಾತ್ರಿ]
ತಡರಾತ್ರಿ 1 ಗಂಟೆಯ ತನಕ ನೈಟ್ ಲೈಫ್ ಅವಧಿ ವಿಸ್ತರಣೆ ಆಗುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಪೊಲೀಸ್ ಇಲಾಖೆಗೆ ಸವಾಲಾಗಿದೆ. ಸಿಬ್ಬಂದಿ ಕೊರತೆ ಹಿನ್ನಲೆಯಲ್ಲಿ 2 ಸಾವಿರ ಗೃಹ ರಕ್ಷಕ ಸಿಬ್ಬಂದಿ ನಿಯೋಜಿಸಿಕೊಳ್ಳಲು ಚಿಂತನೆ ನಡೆಸಲಾಗುತ್ತಿದೆ. ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಕರವೇ ವಿರೋಧ : ತಡರಾತ್ರಿ 1ಗಂಟೆಯ ವರೆಗೆ ಬಾರ್, ಪಬ್ ಅವಧಿ ವಿಸ್ತರಿಸುವ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಶೆಟ್ಟಿಬಣ) ವಿರೋಧ ವ್ಯಕ್ತಪಡಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರವೇ, ಇತ್ತೀಚೆಗೆ ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು ಮಹಾನಗರಗಳಲ್ಲಿ ಹೆಚ್ಚಾಗುತ್ತಿದೆ. ನಮ್ಮ ಸಂಸ್ಕೃತಿಗೆ ವಿರೋಧವಾದ ಇಂತಹ ನಿರ್ಧಾರವನ್ನು ಸರ್ಕಾರ ಹಿಂಪಡೆಯಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಆರಂಭಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications