ಮದ್ಯ'ರಾತ್ರಿ ಅವಧಿ ವಿಸ್ತರಣೆ ಪೊಲೀಸರಿಗೆ ಸವಾಲು
ಬೆಂಗಳೂರು, ಮಾ.4 : ನೈಟ್ ಲೈಫ್ ಅವಧಿ ವಿಸ್ತರಣೆ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್, 15-20 ದಿನಗಳಲ್ಲಿ ನೈಟ್ ಲೈಫ್ ಅವಧಿ ವಿಸ್ತರಣೆ ಬಗ್ಗೆ ಅಂತಿಮ ಆದೇಶ ಹೊರಬೀಳಲಿದೆ ಎಂದು ತಿಳಿಸಿದ್ದಾರೆ.
ಗೃಹ
ಸಚಿವ
ಕೆಜೆ
ಜಾರ್ಜ್,
ಕಾರ್ಪೋರೆಟ್
ಸಂಸ್ಥೆಗಳ
ಬಹುದಿನಗಳ
ಬೇಡಿಕೆಗೆ
ಮುಖ್ಯಮಂತ್ರಿ
ಸಿದ್ದರಾಮಯ್ಯ
ಒಪ್ಪಿಗೆ
ನೀಡಿದ್ದು,
ಮೊದಲ
ಹಂತದಲ್ಲಿ
ಶುಕ್ರವಾರ
ಮತ್ತು
ಶನಿವಾರ
ಮಾತ್ರ
ಮಧ್ಯರಾತ್ರಿ
1
ಗಂಟೆಯವರೆಗೆ
ಹೊಟೇಲ್,
ಪಬ್,
ಬಾರ್,
ರೆಸ್ಟೋರೆಂಟ್ಗಳನ್ನು
ತೆರೆದಿರಲು
ಅವಕಾಶ
ಮಾಡಿಕೊಡಲಾಗಿದೆ
ಎಂದು
ತಿಳಿಸಿದ್ದರು.
[ನೈಟ್
ಲೈಫ್
ಅವಧಿ
ವಿಸ್ತರಣೆಗೆ
ಬಿಜೆಪಿ
ಅಸಮಾಧಾನ]
ಈ ಕುರಿತು ಪ್ರತಿಕ್ರಿಯೆ ನೀಡಿರುವ ಬೆಂಗಳೂರು ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್, ಅಬಕಾರಿ ಮತ್ತು ಪೊಲೀಸ್ ಇಲಾಖೆ ಅಧಿಸೂಚನೆ ಹೊರಡಿಸಿದ ಬಳಿಕ, ನೈಟ್ ಲೈಫ್ ಅವಧಿ ವಿಸ್ತರಣೆ ಅನುಷ್ಠಾನಕ್ಕೆ ಬರಲಿದೆ. ರಾಜ್ಯ ಅಬಕಾರಿ ಮತ್ತು ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದ್ದು, 15-20 ದಿನಗಳಲ್ಲಿ ಈ ಕುರಿತು ಅಂತಿಮ ಆದೇಶ ಹೊರಬರುತ್ತದೆ ಎಂದರು. [ಬೆಂಗಳೂರಿನಲ್ಲಿ ಇನ್ನು ಮದ್ಯರಾತ್ರಿ]
ತಡರಾತ್ರಿ 1 ಗಂಟೆಯ ತನಕ ನೈಟ್ ಲೈಫ್ ಅವಧಿ ವಿಸ್ತರಣೆ ಆಗುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಪೊಲೀಸ್ ಇಲಾಖೆಗೆ ಸವಾಲಾಗಿದೆ. ಸಿಬ್ಬಂದಿ ಕೊರತೆ ಹಿನ್ನಲೆಯಲ್ಲಿ 2 ಸಾವಿರ ಗೃಹ ರಕ್ಷಕ ಸಿಬ್ಬಂದಿ ನಿಯೋಜಿಸಿಕೊಳ್ಳಲು ಚಿಂತನೆ ನಡೆಸಲಾಗುತ್ತಿದೆ. ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಕರವೇ ವಿರೋಧ : ತಡರಾತ್ರಿ 1ಗಂಟೆಯ ವರೆಗೆ ಬಾರ್, ಪಬ್ ಅವಧಿ ವಿಸ್ತರಿಸುವ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಶೆಟ್ಟಿಬಣ) ವಿರೋಧ ವ್ಯಕ್ತಪಡಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರವೇ, ಇತ್ತೀಚೆಗೆ ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು ಮಹಾನಗರಗಳಲ್ಲಿ ಹೆಚ್ಚಾಗುತ್ತಿದೆ. ನಮ್ಮ ಸಂಸ್ಕೃತಿಗೆ ವಿರೋಧವಾದ ಇಂತಹ ನಿರ್ಧಾರವನ್ನು ಸರ್ಕಾರ ಹಿಂಪಡೆಯಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಆರಂಭಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.