ಬೆಂಗಳೂರು: ಏರ್ಪೋರ್ಟ್ಗೆ ಬಾಂಬ್ ಬೆದರಿಕೆ, ಎಂಜಿನಿಯರಿಂಗ್ ವಿದ್ಯಾರ್ಥಿ ಬಂಧನ
ಬೆಂಗಳೂರು, ಡಿ. 23: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ)ಕ್ಕೆ ಬಾಂಬ್ ಹಾಕುತ್ತೇನೆ ಎಂದು ಟ್ವೀಟ್ ಮಾಡಿದ್ದಕ್ಕಾಗಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು 20 ವರ್ಷದ ವೈಭವ್ ಗಣೇಶ್ ಎಂದು ಗುರುತಿಸಲಾಗಿದ್ದು, ಮೂರನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದಾರೆ. ಬೆಂಗಳೂರಿನ ದಕ್ಷಿಣ ಭಾಗದ ಕೂಡ್ಲು ಗೇಟ್ ನಿವಾಸಿ ಎಂದು ಈಶಾನ್ಯ ಅಪರಾಧ ವಿಭಾಗದ ಪೊಲೀಸರು ತಿಳಿಸಿದ್ದಾರೆ.
ಡಿಸೆಂಬರ್ 10 ರಂದು, ಆರೋಪಿ ತನ್ನ ಅಧಿಕೃತ ಟ್ವಿಟರ್ ಖಾತೆಯಿಂದ "ನಾನು ಬೆಂಗಳೂರು ವಿಮಾನ ನಿಲ್ದಾಣದ ಮೇಲೆ ಬಾಂಬ್ ಹಾಕುತ್ತೇನೆ. ಬಳಿಕ ಅವರು ನಗರಕ್ಕೆ ಹತ್ತಿರದಲ್ಲಿ ಒಂದು ವಿಮಾನ ನಿಲ್ದಾಣವನ್ನು ಮರುನಿರ್ಮಾಣ ಮಾಡಬಹುದು" ಎಂದು ಬರೆದಿದ್ದರು. ಬಳಿಕ ಟ್ವೀಟ್ ಡಿಲೀಟ್ ಆಗಿದ್ದರೂ ಕೂಡ ಹಲವರ ಗಮನ ಸೆಳೆದಿತ್ತು.

ವಿಮಾನ ನಿಲ್ದಾಣದ ಟರ್ಮಿನಲ್ ಮ್ಯಾನೇಜರ್ ದೂರಿನ ಆಧಾರದ ಮೇಲೆ, ಡಿಸೆಂಬರ್ 12 ರಂದು ಕೆಂಪೇಗೌಡ ವಿಮಾನ ನಿಲ್ದಾಣದ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505 ಮತ್ತು 507 ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ದೂರಿನ ಮೇರೆಗೆ ಈಶಾನ್ಯ ವಿಭಾಗದ ಪೊಲೀಸರು ವಿಶೇಷ ತಂಡವನ್ನು ರಚಿಸಿ ಸೈಬರ್ ಕ್ರೈಂ ಪೊಲೀಸರೊಂದಿಗೆ ಕಾರ್ಯಾಚರಣೆ ನಡೆಸಿ, ವೈಭವ್ನನ್ನು ಬಂಧಿಸಲು ತನಿಖೆ ಆರಂಭಿಸಿದ್ದು, ಗುರುವಾರ ಅವರನ್ನು ಬಂಧಿಸಲಾಗಿದೆ. ಟ್ವೀಟ್ ಮಾಡಿದ್ದ ಆತನ ಮೊಬೈಲ್ ಫೋನ್ ಅನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ವಿಚಾರಣೆಯ ಸಮಯದಲ್ಲಿ, ಆರೋಪಿಯು ತನ್ನ ನಿವಾಸ ಮತ್ತು ವಿಮಾನ ನಿಲ್ದಾಣದ ನಡುವೆ ಪ್ರಯಾಣಿಸಲು ಕಷ್ಟವಾಗುತ್ತಿದೆ. ಹೀಗಾಗಿ ಹತಾಶೆಯಿಂದ ಟ್ವೀಟ್ ಮಾಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ.

ಏತನ್ಮಧ್ಯೆ, ಬೆಂಗಳೂರಿನ ಈಶಾನ್ಯ ಸಿಇಎನ್ ವಿಭಾಗದ ಉಪ ಪೊಲೀಸ್ ಕಮಿಷನರ್ (ಡಿಸಿಪಿ) ಅನೂಪ್ ಎ ಶೆಟ್ಟಿ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಕಲಿ ಬಾಂಬ್ ಬೆದರಿಕೆ ಹಾಕಿದ್ದಕ್ಕಾಗಿ ವಿದ್ಯಾರ್ಥಿಯ ಮೇಲೆ ಪ್ರಕರಣ ದಾಖಲಿಸಲಾಗಿದೆ. ಬಾಂಬ್ ಬೆದರಿಕೆ ಎಂಬುದು ತಮಾಷೆಯಲ್ಲ. ದಯವಿಟ್ಟು ಇಂತಹ ಬೆದರಿಕೆ ಹಾಕುವುದನ್ನು ಬಿಟ್ಟುಬಿಡಿ'' ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
ಬೆಂಗಳೂರು ವಿಮಾನ ನಿಲ್ದಾಣವು ದೇವನಹಳ್ಳಿಯಲ್ಲಿದ್ದು, ನಗರದ ಮಧ್ಯಭಾಗದಿಂದ ಸರಿಸುಮಾರು 35 ಕಿಲೋಮೀಟರ್ ದೂರದಲ್ಲಿದೆ. ವಿಮಾನ ನಿಲ್ದಾಣವು ನಗರದ ಹೊರವಲಯದಲ್ಲಿರುವುದರಿಂದ ಮತ್ತು ಕೈಗೆಟುಕುವ ಸಾರಿಗೆ ಕೊರತೆಯಿಂದಾಗಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಲು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಹಲವರು ಹಲವಾರು ಬಾರಿ ದೂರಿದ್ದಾರೆ.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications