Get Updates
Get notified of breaking news, exclusive insights, and must-see stories!

ಬೆಂಗಳೂರಿನ ಇಂಜಿನಿಯರಿಂಗ್‌ ವಿದ್ಯಾರ್ಥಿಗೆ 5 ವರ್ಷದ ಜೈಲು ಶಿಕ್ಷೆ!

ಬೆಂಗಳೂರು, ನವೆಂಬರ್‌ 1: ಪುಲ್ವಾಮಾ ಭಯೋತ್ಪಾದಕ ದಾಳಿಯ ಬಗ್ಗೆ ಅವಹೇಳನಕಾರಿ ಫೇಸ್‌ಬುಕ್ ಪೋಸ್ಟ್‌ ಹಾಕಿದ್ದಕ್ಕಾಗಿ ಬೆಂಗಳೂರಿನ ವಿಶೇಷ ನ್ಯಾಯಾಲಯವು ಇಂಜಿನಿಯರಿಂಗ್ ವಿದ್ಯಾರ್ಥಿಗೆ 5 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2019ರ ಫೆಬ್ರವರಿಯಲ್ಲಿ ಬೆಂಗಳೂರಿನ ಕಚರಕನಹಳ್ಳಿ ನಿವಾಸಿ ಫೈಜ್ ರಶೀದ್‌ಗೆ ಜಾಮೀನು ಅರ್ಜಿ ತಿರಸ್ಕೃತಗೊಂಡ ನಂತರ ಬಂಧನಕ್ಕೊಳಗಾಗಿ ಜೈಲಿನಲ್ಲಿದ್ದಾರೆ ಎಂದು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಸೋಮವಾರ ತಿಳಿಸಿದೆ.

ಮೂರನೇ ಸೆಮಿಸ್ಟರ್ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ಫೈಜ್ ರಶೀದ್ ಅವರನ್ನು ಫೆಬ್ರವರಿ 14, 2019 ರಂದು 40 ಸೆಂಟ್ರಲ್ ರಿಸರ್ವ್ ಪೋಲೀಸರು ಪುಲ್ವಾಮಾ ಭಯೋತ್ಪಾದಕ ಕೃತ್ಯದಲ್ಲಿ ಸತ್ತವರ ಬಗ್ಗೆ ಅವಹೇಳನಕಾರಿಯಾಗಿ ಫೇಸ್‌ಬುಕ್ ಪೋಸ್ಟ್‌ ಹಾಕಿದ್ದಕ್ಕಾಗಿ ಬಂಧಿಸಲಾಯಿತು.

Engineering student OF Bengaluru sentenced to 5 years of jail, what is the reason

ರಶೀದ್‌ ಫೋನ್ ಅನ್ನು ವಶಪಡಿಸಿಕೊಂಡಿರುವ ಪೊಲೀಸರು ಅದನ್ನು ವಿಧಿ ವಿಜ್ಞಾನ ಪ್ರಯೋಗಾಲಯದಿಂದ ತನಿಖೆ ಮಾಡಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ (ಐಪಿಸಿ) 153ಎ (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 124ಎ (ದೇಶದ್ರೋಹ) ಮತ್ತು 201 (ಅಪರಾಧದ ಸಾಕ್ಷ್ಯಗಳು ಕಣ್ಮರೆಯಾಗುವುದು) ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಸೆಕ್ಷನ್ 13 ರ ಕಾಯಿದೆ ಅಡಿಯಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ.

ಫೆಬ್ರವರಿ 14, 2019 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆ ಮೇಲೆ ಭಯೋತ್ಪಾದಕರಿಂದ ದಾಳಿ ನಡೆದಿತ್ತು ಇದರಲ್ಲಿ 40 ಸಿಬ್ಬಂದಿ ಸಾವನ್ನಪ್ಪಿದ್ದರು. ಆತ್ಮಾಹುತಿ ಬಾಂಬರ್‌ ಸ್ಫೋಟಕ ತುಂಬಿದ್ದ ವಾಹನವನ್ನು ಬಸ್‌ಗೆ ಡಿಕ್ಕಿ ಹೊಡೆಸಿದ್ದನು. ಬೆಂಗಾವಲು ಪಡೆ 78 ಬಸ್‌ಗಳನ್ನು ಹೊಂದಿದ್ದು, ಅದರಲ್ಲಿ ಸುಮಾರು 2,500 ಸಿಬ್ಬಂದಿ ಜಮ್ಮುವಿನಿಂದ ಶ್ರೀನಗರಕ್ಕೆ ಪ್ರಯಾಣಿಸುತ್ತಿದ್ದರು.

ದಾಳಿಯ ದಿನಗಳ ನಂತರ, ಫೆಬ್ರವರಿ 26 ರಂದು ಭಾರತೀಯ ವಾಯುಪಡೆಯು ಪಾಕಿಸ್ತಾನದ ಬಾಲಾಕೋಟ್‌ನಲ್ಲಿರುವ ಜೆಇಎಂ ಭಯೋತ್ಪಾದಕ ಶಿಬಿರಗಳ ಮೇಲೆ ಅನೇಕ ವೈಮಾನಿಕ ದಾಳಿಗಳನ್ನು ನಡೆಸಿತ್ತು. ಹಲವು ಭಯೋತ್ಪಾದಕರನ್ನು ಕೊಂದು ಅವರ ಗಮ್ಯಸ್ಥಾನಗಳನ್ನು ನಾಶಪಡಿಸಿತು. ಈ ವರ್ಷದ ಏಪ್ರಿಲ್‌ನಲ್ಲಿ ಗೃಹ ಸಚಿವಾಲಯವು ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ಅಡಿಯಲ್ಲಿ ಭಯೋತ್ಪಾದಕರು ಎಂದು ಘೋಷಿಸಿತ್ತು.

Engineering student OF Bengaluru sentenced to 5 years of jail, what is the reason

ಗೃಹ ಸಚಿವಾಲಯ ಏಪ್ರಿಲ್ 11, 2022 ರಂದು ಹೊರಡಿಸಿದ ಅಧಿಸೂಚನೆಯಲ್ಲಿ, ಜೈಶ್-ಎ-ಮೊಹಮ್ಮದ್‌ನ ಮೊಹಿಯುದ್ದೀನ್ ಔರಂಗಜೇಬ್ ಅಲಂಗೀರ್, ಪುಲ್ವಾಮಾದಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಬೆಂಗಾವಲು ಪಡೆಯ ಮೇಲೆ 2019 ರ ಭಯೋತ್ಪಾದಕ ದಾಳಿಯ ಪ್ರಮುಖ ಸಂಚುಕೋರ ಎಂದು ಗುರುತು ಮಾಡಿದೆ.

ಮೊಹಿಯುದ್ದೀನ್ ಔರಂಗಜೇಬ್ ಅಲಂಗೀರ್ ಭಯೋತ್ಪಾದನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಗುರುತಿಸಿದೆ. ಮೊಹಿಯುದ್ದೀನ್ ಔರಂಗಜೇಬ್ ಅಲಂಗೀರ್ ಎಂಬುವವನನ್ನು ಯುಎಪಿಎ ಕಾಯ್ದೆಯಡಿಯಲ್ಲಿ ಭಯೋತ್ಪಾದಕ ಎಂದು ಘೋಷಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+