ಬಿಬಿಎಂಪಿ: ಈ ವಲಯದಲ್ಲಿ ಅ. 20ರ ತನಕ 'ಉದ್ದಿಮೆ ಪರವಾನಿಗೆ ಮೇಳ'
ಬೆಂಗಳೂರು, ಅಕ್ಟೋಬರ್ 06: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಇಂದಿನಿಂದ ಅಕ್ಟೋಬರ್ 20ರವರೆಗೆ ಆಯಾ ವಾರ್ಡ್ಗಳಲ್ಲಿ ಬೆಳಗ್ಗೆ 10.30 ರಿಂದ ಸಂಜೆ 4.30 ರವರೆಗೆ 'ಉದ್ದಿಮೆ ಪರವಾನಿಗೆಯ ಮೇಳ' ಹಮ್ಮಿಕೊಂಡಿದ್ದೇವೆ ಎಂದು ಬಿಬಿಎಂಪಿ ತಿಳಿಸಿದೆ.
ನಗರದ ಎಲ್ಲಾ ಉದ್ದಿಮೆದಾರರು ಉದ್ದಿಮೆ ಪರವಾನಿಗೆ ಅರ್ಜಿಯನ್ನು ತಮ್ಮ ಕಟ್ಟಡದ ವಿದ್ಯುತ್ ಬಿಲ್ ಮತ್ತು ಬಾಡಿಗೆ ಕರಾರು ಪತ್ರದ ನಕಲುಗಳನ್ನು ನೀಡಿ ಉದ್ದಿಮೆ ಪರವಾನಿಗೆಯನ್ನು ಪಡೆಯಲು ಸೂಚಿಸಲಾಗಿದೆ. ಇನ್ನೂ ಅರ್ಜಿ ಜೊತೆಗೆ ಸುತ್ತಮುತ್ತಲಿನ (ಅಕ್ಕ-ಪಕ್ಕ, ಹಿಂದೆ-ಮುಂದಿನ) ಮನೆಯವರ ನಿರಪೇಕ್ಷಣಾ ಸಹಿಯೊಂದಿಗೆ ಅರ್ಜಿ ಸಲ್ಲಿಸುವಂತೆ ಹಾಗೂ ಸದರಿ ಮೇಳದ ಪ್ರಯೋಜನ ಪಡೆದುಕೊಳ್ಳುವಂತೆ ಉದ್ದಿಮೆದಾರರಿಗೆ ವಲಯ ಜಂಟಿ ಆಯುಕ್ತರಾದ ಡಾ. ಪಿ. ದಾಕ್ಷಾಯಿಣಿ ರವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ವಿದ್ಯುತ್ ಚಿತಾಗಾರ ತಾತ್ಕಾಲಿಕ ಸ್ಥಗಿತ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪಶ್ಚಿಮ ವಲಯ ವ್ಯಾಪ್ತಿಯ ಮೈಸೂರು ರಸ್ತೆ ವಿದ್ಯುತ್ ಚಿತಾಗಾರದಲ್ಲಿ ಟ್ರಾನ್ಸ್ ಫಾರ್ಮರ್ ನ ತುರ್ತು ಕೆಲಸಗಳನ್ನು ಕೈಗೊಳ್ಳಬೇಕಿರುವ ಕಾರಣ ಸದರಿ ಚಿತಾಗಾರವನ್ನು ಅಕ್ಟೋಬರ್ 21ರವರೆಗೆ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗುವುದು ಎಂದು ಸಾರ್ವಜನಿಕರಿಗೆ ಬಿಬಿಎಂಪಿ ತಿಳಿಸಿದೆ.
ಮೈಸೂರು ರಸ್ತೆ ವಿದ್ಯುತ್ ಚಿತಾಗಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಕಾರಣ ಮೃತ ದೇಹದ ದಹನ ಕ್ರಿಯೆಗಾಗಿ ಸಾರ್ವಜನಿಕರು ಸಮೀಪದಲ್ಲಿರುವ ವಿಲ್ಸನ್ ಗಾರ್ಡನ್, ಹರಿಚ್ಚಂದ್ರ ಘಾಟ್ ಚಿತಾಗಾರವನ್ನು ಉಪಯೋಗಿಸಿಕೊಳ್ಳಬೇಕು ಎಂದು ಪಾಲಿಕೆಯ ಕಾರ್ಯಪಾಲಕ ಅಭಿಯಂತರರು (ವಿದ್ಯುತ್-ಪಶ್ಚಿಮ ವಲಯ) ರವರು ಸಾರ್ವಜನಿಕರಲ್ಲಿ ಮನವಿ ಮಾಡಿದೆ.
-
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD











Click it and Unblock the Notifications