Nandi Hills: ರಜೆ ಇದೆ ಅಂತ ಹುಡುಗಿ ಜೊತೆ ನಂದಿ ಬೆಟ್ಟಕ್ಕೆ ಹೋಗಿಬಿಟ್ಟಿರಾ.. ಹುಡುಗರೇ ಪ್ರವೇಶ ಇಲ್ಲ....
ಬೆಂಗಳೂರು ಡಿಸೆಂಬರ್ 26: ಹೊಸ ವರ್ಷ ಬಂತು, ವೀಕೆಂಡ್ ಬಂತು ಅಷ್ಟೇ ಯಾಕೆ ಸಾಲು ಸಾಲು ರಜೆ ಕೂಡ ಇದೆ. ಇಷ್ಟು ಸಾಕು ಅಲ್ವಾ ಸುತ್ತಾಡೋಕೆ, ಮಜಾ ಮಾಡೋಕೆ? ಈ ಬಾರಿ ಹೊಸ ವರ್ಷ ವಾರಾಂತ್ಯ ಕಳೆದು ಸೋಮವಾರಕ್ಕೆ (ಜನವರಿ 1) ಬಂದಿದೆ. ಶನಿವಾರದಿಂದ ಸೋಮವಾರದವರೆಗೂ ಪ್ರವಾಸದಿಂದ ಹಿಡಿದು ನಾನಾ ಕಾರ್ಯಕ್ರಮಗಳನ್ನು ಮಾಡಬಹುದು. ಹೀಗೆ ಹೊಸ ವರ್ಷಕ್ಕೆ ಮೋಜು ಮಸ್ತಿ ಮಾಡುವ ಬೆಂಗಳೂರಿಗರು ನಂದಿ ಬೆಟ್ಟಕ್ಕೂ ಹೋಗುವ ಪ್ಲ್ಯಾನ್ ಮಾಡಿರಬಹುದು.
ನೀವೇನಾದರೂ ಹೀಗೆ ಪ್ಲ್ಯಾನ್ ಮಾಡಿದ್ದರೆ, ಅದಕ್ಕೂ ಮುಂಚೆ ಸ್ವಲ್ಪ ತಡಿರಿ. ಯಾಕೆಂದರೆ ಪ್ರತೀ ಬಾರಿಯಂತೆ ಈ ಬಾರಿಯೂ ಹೊಸ ವರ್ಷಕ್ಕೆ ನಂದಿ ಬೆಟ್ಟಕ್ಕೆ ಹೋಗುವುದಕ್ಕೆ ನಿಷೇಧ ಹೇರಲಾಗಿದೆ. ರಾಜಧಾನಿ ಬೆಂಗಳೂರಿಗೆ ಹತ್ತಿರದಲ್ಲಿರುವ ನಂದಿ ಬೆಟ್ಟ ವಾರಾಂತ್ಯದಲ್ಲಿ ಸಿಲಿಕಾನ್ ಸಿಟಿ ಮಂದಿಗೆ ಹಾಟ್ ಫೇವರಿಟ್ ತಾಣವಾಗಿದೆ. ಆದರೆ ಈ ಭಾನುವಾರ ಸಂಜೆಯಿಂದ ಸೋಮವಾರ ಸಂಜೆವರೆಗೆ ಗಿರಿಧಾಮಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಡಿಸೆಂಬರ್ 31ರ ಸಂಜೆ 6ರಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ಚಿಕ್ಕಬಳ್ಳಾಪುರ ಡಿಸಿ ರವೀಂದ್ರ ಆದೇಶ ಹೊರಡಿಸಿದ್ದಾರೆ. ಹೊಸ ವರ್ಷಾಚರಣೆ ವೇಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾವಾಗಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಇದರಿಂದ ನಂದಿ ಬೆಟ್ಟದಲ್ಲಿ ಹೊಸ ವರ್ಷವನ್ನು ಬರಮಾಡಿಕೊಳ್ಳಲು ಇಚ್ಚಿಸುವವರಿಗೆ ಡಿಸಿ ಆದೇಶ ನಿರಾಸೆ ಮೂಡಿಸಿದೆ. ಕಳೆದ ವರ್ಷವೂ ನಂದಿ ಬೆಟ್ಟ ಹಾಗೂ ಸ್ಕಂದಗಿರಿಯಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿತ್ತು. ಹೀಗಾಗಿ ನೀವೇನಾದ್ರೂ ಈ ವಾರಾಂತ್ಯಕ್ಕೆ ನಂದಿ ಬೆಟ್ಟಕ್ಕೆ ಹೋಗುವ ಪ್ಲ್ಯಾನ್ ಮಾಡಿದ್ದರೆ ನಿಮ್ಮ ಪ್ರಯಾಣದ ಮಾರ್ಗವನ್ನು ಬದಲಾಯಿಸುವುದು ಒಳ್ಳೆಯದು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications