ವಿಧಾನಸೌಧ ಪ್ರವೇಶ ಈಗ ಮತ್ತಷ್ಟು ಸುಲಭ!
ಬೆಂಗಳೂರು, ಜನವರಿ 2 : ಶಕ್ತಿ ಕೇಂದ್ರದ ವಿಧಾನ ಸೌಧದ ಪ್ರವೇಶ ಸಾರ್ವಜನಿಕರಿಗೆ ಇನ್ನಷ್ಟು ಸುಗಮವಾಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಕೆ.ರತ್ನ ಪ್ರಭಾ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ.
ಈವರೆಗೆ ಸಾರ್ವಜನಿಕರಿಗೆ ಮಧ್ಯಾಹ್ನ 3.30ರ ನಂತರ ನೀಡಲಾಗುತ್ತಿದ್ದ ಪ್ರವೇಶವನ್ನು ಇನ್ನುಮುಂದೆ ಮಧ್ಯಾಹ್ನ 2.45 ರಿಂದಲೇ ಪ್ರವೇಶ ನೀಡಲು ರತ್ನಪ್ರಭಾ ನಿರ್ಧರಿಸಿದ್ದಾರೆ. ಈ ಕುರಿತು ಪ್ರಕರಣೆ ನೀಡಿರುವ ಅವರು ಸಾರ್ವಜನಿಕರು ಇನ್ನುಮುಂದೆ ವಿಧಾನ ಸೌಧ ಪ್ರವೇಶಿಸಬೇಕಾದರೆ ಪಾಸ್ ಗಳ ವಿತರಣೆಗೆ ಮಧ್ಯಾಹ್ನದವರೆಗೆ ಕಾಯಬೇಕಿಲ್ಲ. ಬೆಳಗ್ಗೆಯೇ ಪ್ರವೇಶದ ಪಾಸ್ ನ್ನು ಸಂಗ್ರಹಿಸಿಟ್ಟುಕೊಂಡು ಮಧ್ಯಾಹ್ನ ನಂತರ ತಮಗೆ ಬೇಕಾದ ಅಧಿಕಾರಿ ಅಥವಾ ಜನಪ್ರತಿನಿಧಿಗಳನ್ನು ಬೇಟಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಧಾನ ಸೌಧ ಮತ್ತು ವಿಕಾಸ ಸೌಧ ಕಟ್ಟಡಗಳಲ್ಲಿನ ವಿವಿಧ ಕಚೇರಿಗಳಿಗೆ ಭೇಟಿ ನೀಡುವ ಸಂದರ್ಶಕರಿಗೆ ಇದೀಗ ಮಧ್ಯಾಹ್ನ 2.30 ರ ನಂತರ ಪಾಸುಗಳನ್ನು ನೀಡಲಾಗುತ್ತಿದ್ದು, ಇದರಿಂದ ಜನಸಾಮಾನ್ಯರಿಗೆ ತೊಂದರೆಯುಂಟಾಗುತ್ತಿದೆ.
ಪಾಸುಗಳನ್ನು ಪಡೆಯಲು ಸಾರ್ವಜನಿಕರು ಹಲವಾರು ಗಂಟೆಗಳ ಕಾಲ ಬಿಸಿಲು ಮತ್ತು ಮಳೆಯ ಸಂದರ್ಭದಲ್ಲಿ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಇದೆ. ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಈ ಸಂದರ್ಶಕರ ಭೇಟಿಯ ಮಾರ್ಗಸೂಚಿಗಳನ್ನು ಬದಲಾಯಿಸಲಾಗಿದೆ. ಈ ಹಿಂದೆ ನಿಗದಿಪಡಿಸಲಾಗಿದ್ದ ಸಮಯವನ್ನು3.30 ರಿಂದ 5 ಗಂಟೆ ವಿಸ್ತರಿಸಿ, 2.45 ರಿಂದ 5.30 ಕ್ಕೆ ಬದಲಾಯಿಸಲಾಗಿದೆ. ಅಷ್ಟೇ ಅಲ್ಲದೆ ಬೆಳಗ್ಗೆಯಿಂದಲೇ ಪಾಸುಗಳನ್ನು ವಿತರಿಸಲಾಗುತ್ತದೆ.
ಸದ್ಯ ಗೇಟ್ ಸಂಖ್ಯೆ 1 ಹಾಗೂ 3 ರಲ್ಲಿ ಮಾತ್ರ ಪಾಸುಗಳನ್ನು ವಿತರಿಸಲಾಗುತ್ತಿದ್ದು, ವಿಧಾನ ಸೌಧ, ವಿಕಾಸ ಸೌಧ ಕ್ಷೇತ್ರದ ವಿಸ್ತೀರ್ಣ ಹೆಚ್ಚಿರುವುದರಿಂದ ವಿಕಲಚೇತನರು ಹಾಗೂ ವೃದ್ಧರು ಹೆಚ್ಚು ದೂರ ನಡೆಯಬೇಕಾಗಿರುವುದರಿಂದ ಗೇಟ್ 2 ಮತ್ತು 4 ರಲ್ಲಿಯೂ ಪ್ರವೇಶ ಪಡೆಯಲು ಅನುಕೂಲತೆ ಕಲ್ಪಿಸಲಾಗುತ್ತಿದೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications