ಬೆಂಗಳೂರಿನ ಹೊಟೇಲ್ ಗ್ರೀನ್ ಪಾತ್ ನಲ್ಲಿ ಪರಿಸರ ದಿನಾಚರಣೆ
ಬೆಂಗಳೂರು, ಜೂನ್ 5: ಬೆಂಗಳೂರಿನಲ್ಲಿ ಸಾವಯವ ಹಾಗೂ ಸಿರಿಧಾನ್ಯಗಳ ಬಗ್ಗೆ ಅರಿವು ಮೂಡಿಸುತ್ತಿರುವ ಪ್ರಮುಖ ಹೊಟೇಲ್ ಗ್ರೀನ್ ಪಾತ್ ಆಗ್ರ್ಯಾನಿಕ್ ಸ್ಟೇಟ್ನಲ್ಲಿಂದು ವಿಶ್ವ ಪರಿಸರ ದಿನಾಚರಣೆ ಹಸಿರು ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು.
ಪರಿಸರ ಮತ್ತು ಮಾನವೀಯತೆಯ ಉಳಿವಿಗಾಗಿ ನನ್ನ ಸಂಕಲ್ಪ ಧ್ಯೇಯ ವಾಕ್ಯದಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಮಹಿಳಾ ಬರಹಗಾರ್ತಿಯರ ಸಂಘದ ಶ್ರೀಮತಿ ವಸುಂಧರಾ ಭೂಪತಿ, ನಮ್ಮ ಬೆಂಗಳೂರು ಫೌಂಡೇಶನ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಧರ್ ಪಬಿಶೆಟ್ಟಿ, ಟೈಮ್ಸ್ ಆಫ್ ಇಂಡಿಯಾದ ಸಿಟಿ ಎಡಿಟರ್ ಶ್ರೀಮತಿ ಸೀತಾಲಕ್ಷ್ಮಿ, ದ ಗ್ರೀನ್ ಪಾತ್ ಸಂಸ್ಥಾಪಕರಾದ ಹೆಚ್ ಆರ್ ಜಯರಾಂ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಇದೇ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸುಮಾರು ನೂರು ಜನ ಪ್ರಮುಖ ಪರಿಸರವಾದಗಳಿಂದ ಪರಿಸರ ಸಂರಕ್ಷಣೆಯ ಬಗ್ಗೆ ಸಂದೇಶಗಳನ್ನು ದಾಖಲಿಸಲಾಯಿತು.
ಶಂಕರಮಠಸ್ತೆಯಲ್ಲಿ ಪರಿಸರ ದಿನಾಚರಣೆ
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಇಂದು (ಜೂನ್ 5) ಉದ್ಯಾನ ನಗರಿ ಬೆಂಗಳೂರಿನಲ್ಲಿ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಹಲವು ಕಾರ್ಯಕ್ರಮಗಳು ನಡೆಯುತ್ತಿವೆ. ಅದರ ಭಾಗವಾಗಿ ಇಲ್ಲಿನ ಶಂಕರಮಠಸ್ತೆಯ ಮೋಹಲ್ಲಾ ನಿವಾಸಿಗಳಿಂದ 15 ವಿಶೇಷ ಆಯುರ್ವೇದ ಗಿಡಗಳನ್ನು ನೆಡಲಾಯಿತು.
ಹಲವಾರು ದಶಕಗಳಿಂದ ತೋಟಗಾರಿಕೆಯಲ್ಲಿ ಸೇವೆ ಸಲ್ಲಿಸುತ್ತಿರುವ, ಮೊಹಲ್ಲಾದ ಹಿರಿಯರಾದ ತೋಟದ ಕೃಷ್ಣಮೂರ್ತಿಯವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.[ಹಸಿರು ಬೆಂಗಳೂರಿಗಾಗಿ ಅದಮ್ಯ ಚೇತನದಿಂದ 'ಸಸ್ಯಾಗ್ರಹ']

ಮೋಹಲ್ಲಾದ ನಾಗರಿಕರ ಮನೆಯ ಮುಂದೆಯೇ ಗಿಡಗಳನ್ನು ನೆಡಲಾಗಿದ್ದು, ಒಂದೊಂದು ಗಿಡಗಳನ್ನೂ ಒಂದೊಂದು ಮನೆಯ ಸದಸ್ಯರೇ ದತ್ತು ತೆಗೆದು ಕೊಂಡು ಅದನ್ನು ಬೆಳೆಸುವ ಜವಾಬ್ದಾರಿ ಹೊತ್ತಿರುವುದು ವಿಶೇಷ.
ಈ ಕಾರ್ಯಕ್ರಮಕ್ಕೆ ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಡಿ.ಟಿ. ಪ್ರಕಾಶ್ ರವರು, ಖ್ಯಾತ ಆಯುರ್ವೇದ ವೈದ್ಯ ಕಾರ್ತಿಕ್ ಪಂಡಿತ್ , ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಕೆ.ಎಂ. ನಿಶಾಂತ್, ಜ್ಯೋತಿ, ಕಶ್ಯಪ್, ರಂಗನಾಥ್, ಚಾಲನೆ ನೀಡಿದರು. ಮೋಹಲ್ಲಾ ನಿವಾಸಿಗಳೆಲ್ಲ ಅತ್ಯಂತ ಆಸಕ್ತಿಯಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications