ಬೆಂಗಳೂರಿನ ಹೊಟೇಲ್ ಗ್ರೀನ್ ಪಾತ್ ನಲ್ಲಿ ಪರಿಸರ ದಿನಾಚರಣೆ
ಬೆಂಗಳೂರು, ಜೂನ್ 5: ಬೆಂಗಳೂರಿನಲ್ಲಿ ಸಾವಯವ ಹಾಗೂ ಸಿರಿಧಾನ್ಯಗಳ ಬಗ್ಗೆ ಅರಿವು ಮೂಡಿಸುತ್ತಿರುವ ಪ್ರಮುಖ ಹೊಟೇಲ್ ಗ್ರೀನ್ ಪಾತ್ ಆಗ್ರ್ಯಾನಿಕ್ ಸ್ಟೇಟ್ನಲ್ಲಿಂದು ವಿಶ್ವ ಪರಿಸರ ದಿನಾಚರಣೆ ಹಸಿರು ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು.
ಪರಿಸರ ಮತ್ತು ಮಾನವೀಯತೆಯ ಉಳಿವಿಗಾಗಿ ನನ್ನ ಸಂಕಲ್ಪ ಧ್ಯೇಯ ವಾಕ್ಯದಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಮಹಿಳಾ ಬರಹಗಾರ್ತಿಯರ ಸಂಘದ ಶ್ರೀಮತಿ ವಸುಂಧರಾ ಭೂಪತಿ, ನಮ್ಮ ಬೆಂಗಳೂರು ಫೌಂಡೇಶನ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಧರ್ ಪಬಿಶೆಟ್ಟಿ, ಟೈಮ್ಸ್ ಆಫ್ ಇಂಡಿಯಾದ ಸಿಟಿ ಎಡಿಟರ್ ಶ್ರೀಮತಿ ಸೀತಾಲಕ್ಷ್ಮಿ, ದ ಗ್ರೀನ್ ಪಾತ್ ಸಂಸ್ಥಾಪಕರಾದ ಹೆಚ್ ಆರ್ ಜಯರಾಂ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಇದೇ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸುಮಾರು ನೂರು ಜನ ಪ್ರಮುಖ ಪರಿಸರವಾದಗಳಿಂದ ಪರಿಸರ ಸಂರಕ್ಷಣೆಯ ಬಗ್ಗೆ ಸಂದೇಶಗಳನ್ನು ದಾಖಲಿಸಲಾಯಿತು.
ಶಂಕರಮಠಸ್ತೆಯಲ್ಲಿ ಪರಿಸರ ದಿನಾಚರಣೆ
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಇಂದು (ಜೂನ್ 5) ಉದ್ಯಾನ ನಗರಿ ಬೆಂಗಳೂರಿನಲ್ಲಿ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಹಲವು ಕಾರ್ಯಕ್ರಮಗಳು ನಡೆಯುತ್ತಿವೆ. ಅದರ ಭಾಗವಾಗಿ ಇಲ್ಲಿನ ಶಂಕರಮಠಸ್ತೆಯ ಮೋಹಲ್ಲಾ ನಿವಾಸಿಗಳಿಂದ 15 ವಿಶೇಷ ಆಯುರ್ವೇದ ಗಿಡಗಳನ್ನು ನೆಡಲಾಯಿತು.
ಹಲವಾರು ದಶಕಗಳಿಂದ ತೋಟಗಾರಿಕೆಯಲ್ಲಿ ಸೇವೆ ಸಲ್ಲಿಸುತ್ತಿರುವ, ಮೊಹಲ್ಲಾದ ಹಿರಿಯರಾದ ತೋಟದ ಕೃಷ್ಣಮೂರ್ತಿಯವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.[ಹಸಿರು ಬೆಂಗಳೂರಿಗಾಗಿ ಅದಮ್ಯ ಚೇತನದಿಂದ 'ಸಸ್ಯಾಗ್ರಹ']

ಮೋಹಲ್ಲಾದ ನಾಗರಿಕರ ಮನೆಯ ಮುಂದೆಯೇ ಗಿಡಗಳನ್ನು ನೆಡಲಾಗಿದ್ದು, ಒಂದೊಂದು ಗಿಡಗಳನ್ನೂ ಒಂದೊಂದು ಮನೆಯ ಸದಸ್ಯರೇ ದತ್ತು ತೆಗೆದು ಕೊಂಡು ಅದನ್ನು ಬೆಳೆಸುವ ಜವಾಬ್ದಾರಿ ಹೊತ್ತಿರುವುದು ವಿಶೇಷ.
ಈ ಕಾರ್ಯಕ್ರಮಕ್ಕೆ ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಡಿ.ಟಿ. ಪ್ರಕಾಶ್ ರವರು, ಖ್ಯಾತ ಆಯುರ್ವೇದ ವೈದ್ಯ ಕಾರ್ತಿಕ್ ಪಂಡಿತ್ , ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಕೆ.ಎಂ. ನಿಶಾಂತ್, ಜ್ಯೋತಿ, ಕಶ್ಯಪ್, ರಂಗನಾಥ್, ಚಾಲನೆ ನೀಡಿದರು. ಮೋಹಲ್ಲಾ ನಿವಾಸಿಗಳೆಲ್ಲ ಅತ್ಯಂತ ಆಸಕ್ತಿಯಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications