ಗಾರ್ಮೆಂಟ್ಸ್ ಉದ್ಯೋಗಿಗಳಿಗೆ ಪ್ರತಿಭಟನೆ ಏಕೆ ಎಂದು ಗೊತ್ತಿತ್ತೆ?
ಬೆಂಗಳೂರು, ಏಪ್ರಿಲ್ 20 : ಕೇಂದ್ರ ಸರ್ಕಾರದ ನೂತನ ಭವಿಷ್ಯ ನಿಧಿ (ಪಿಎಫ್) ನೀತಿ ಖಂಡಿಸಿ ಮಂಗಳವಾರ ನಡೆದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆಯಿತು. ಯಾವುದೇ ನಾಯಕರಿಲ್ಲದೇ, ಸಂಘಟನೆಗಳ ಬೆಂಬಲವಿಲ್ಲದೇ ಈ ಬೃಹತ್ ಹೋರಾಟ ನಡೆಯಿತು.
ಆಸಕ್ತಿಕರ ಸಂಗತಿ ಎಂದರೆ ಮಂಗಳವಾರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಶೇ 60ರಷ್ಟು ನೌಕರರಿಗೆ ಏಕೆ ನಾವು ಹೋರಾಟ ಮಾಡುತ್ತಿದ್ದೇವೆ? ಎಂಬುದು ತಿಳಿದಿರಲಿಲ್ಲ. ಮೊದಲು ಪ್ರತಿಭಟನೆ ನಡೆಸುತ್ತಿದ್ದ ಜನರು ನಂತರ ಬಸ್ಸುಗಳಿಗೆ ಬೆಂಕಿ ಹಚ್ಚಿದರು, ಕಲ್ಲು ತೂರಾಟ ನಡೆಸಿದರು. [ಗಾರ್ಮೆಂಟ್ಸ್ ನೌಕರರ ಗೋಳಿನ ಕಥೆ ಬಿಚ್ಚಿಟ್ಟ ಸಾವಿತ್ರಿ]

ರಾಜಕೀಯ ಪ್ರೇರಿತ : ಕರ್ನಾಟಕ ಬಿಜೆಪಿ ಇದೊಂದು ರಾಜಕೀಯ ಪ್ರೇರಿತ ಪ್ರತಿಭಟನೆ ಎಂದು ಹೇಳಿದೆ. ಕಾಂಗ್ರೆಸ್ ಆಡಳಿತವಿರುವ ರಾಜ್ಯದಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ನೀತಿಯನ್ನು ಖಂಡಿಸಿ ನಡೆದ ಬೃಹತ್ ಪ್ರತಿಭಟನೆ ಇದಾಗಿದೆ. ರಾಜಕೀಯ ಪ್ರೇರಿತವಾಗಿ ನಡೆದ ಹೋರಾಟವಿದು ಎಂದು ಬಿಜೆಪಿ ನಾಯಕರು ದೂರಿದ್ದಾರೆ. ಈ ಪ್ರತಿಭಟನೆ ಹಿಂದೆ ಯಾರಿದ್ದಾರೆ? ಎಂದು ಪೊಲೀಸರು ಇನ್ನೂ ಆಲೋಚಿಸುತ್ತಿದ್ದಾರೆ. [ಮಂಗಳವಾರ ಬೆಂಗಳೂರ ಶಾಂತಿ ಕದಡಿದವರು ಯಾರು?]
ಕೇಸು ವಾಪಸ್ ಪಡೆಯಿರಿ : 'ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದೆವು. ಹಿಂಸಾಚಾರ ನಡೆಸುವ ಉದ್ದೇಶ ನಮಗೆ ಇರಲಿಲ್ಲ. ಗಾರ್ಮೆಂಟ್ಸ್ ಉದ್ಯೋಗಿಗಳ ಮೇಲೆ ಹಾಕಿರುವ ಕೇಸ್ಗಳನ್ನು ವಾಪಸ್ ಪಡೆಯಿರಿ. ಹಿಂಸಾಚಾರದ ಹಿಂದೆ ಬೇರೆ ವ್ಯಕ್ತಿಗಳ ಕೈವಾಡವಿದೆ. ಬಸ್ಸಿಗೆ ಬೆಂಕಿ ಹಚ್ಚಿದ್ದು, ಕಾರ್ಮಿಕರಲ್ಲ' ಎಂದು ಗಾರ್ಮೆಂಟ್ಸ್ ನೌಕರರ ಸಂಘದವರು ಹೇಳಿದ್ದಾರೆ. [ಪಿಎಫ್ ವಿಥ್ ಡ್ರಾ ನಿಯಮಕ್ಕೆ ಜುಲೈ 31ರ ತನಕ ಬ್ರೇಕ್]
ಈ ಪ್ರತಿಭಟನೆ ಹಿಂದೆ ರಾಜಕೀಯ ಕೈವಾಡವಿದೆ. ರಾತ್ರೋರಾತ್ರಿ ಕಾರ್ಮಿಕರು ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಆದರೆ, ಪೊಲೀಸರು ಸರಿಯಾದ ಕ್ರಮ ತೆಗೆದುಕೊಳ್ಳಲಿಲ್ಲ. ಸರ್ಕಾರ ಈ ಪ್ರತಿಭಟನೆ ಹಿಂದೆ ಭಾಗಿಯಾಗಿದೆ. ಗೃಹ ಸಚಿವ ಪರಮೇಶ್ವರ ಅವರು ಪರಿಸ್ಥಿತಿ ನಿಯಂತ್ರಿಸಲು ಸಂಪೂರ್ಣವಾಗಿ ವಿಫಲವಾಗಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. [ಗಾರ್ಮೆಂಟ್ಸ್ ನೌಕರರ ಪ್ರತಿಭಟನೆಯ ಸಚಿತ್ರ ವಿವರ]
ಪ್ರತಿಭಟನೆ ಕುರಿತು ಹೇಳಿಕೆ ನೀಡಿರುವ ಸಚಿವ ಪರಮೇಶ್ವರ ಅವರು, 'ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ಕೈಗೊಂಡರು. ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡ ಕಾರಣ, ಪೊಲೀಸರು ಲಾಠಿ ಚಾರ್ಜ್ ಮಾಡಲು ಸಾಧ್ಯವಾಗಿಲ್ಲ. ಈ ಪ್ರತಿಭಟನೆ ನಡೆಸಲು ಯಾವ ಸಂಘಟನೆಯವರು ಅನುಮತಿ ಪಡೆದಿರಲಿಲ್ಲ' ಎಂದು ಹೇಳಿದ್ದಾರೆ. [ಬೆಂಗಳೂರು ಪೊಲೀಸರ ಮೂರ್ಖತನ ಇದೇ ಮೊದಲಲ್ಲ]
'ಪ್ರತಿಭಟನೆ ನಡೆಸುತ್ತಿದ್ದವರು ಹೆಬ್ಬಗೋಡಿ ಪೊಲೀಸ್ ಠಾಣೆ ಮೇಲೆ ಏಕೆ ದಾಳಿ ಮಾಡಿದರು? ಎಂಬುದು ನಮಗೂ ತಿಳಿದಿಲ್ಲ. ತನಿಖೆಯ ನಂತರ ಮಾತ್ರ ಈ ಕುರಿತು ತಿಳಿಯಲಿದೆ. ಹೊರಗೆ 7 ಸಾವಿರಕ್ಕೂ ಅಧಿಕ ಜನರು ಪ್ರತಿಭಟನೆ ನಡೆಸುತ್ತಿದ್ದರು. ಠಾಣೆಯಲ್ಲಿ 20 ಪೊಲೀಸರಿದ್ದರು. ಆಗ ಪರಿಸ್ಥಿತಿ ನಿಯಂತ್ರಿಸುವುದು ಕಷ್ಟವಾಗಿತ್ತು' ಎಂದು ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು












Click it and Unblock the Notifications