ಗಾರ್ಮೆಂಟ್ಸ್ ಉದ್ಯೋಗಿಗಳಿಗೆ ಪ್ರತಿಭಟನೆ ಏಕೆ ಎಂದು ಗೊತ್ತಿತ್ತೆ?
ಬೆಂಗಳೂರು, ಏಪ್ರಿಲ್ 20 : ಕೇಂದ್ರ ಸರ್ಕಾರದ ನೂತನ ಭವಿಷ್ಯ ನಿಧಿ (ಪಿಎಫ್) ನೀತಿ ಖಂಡಿಸಿ ಮಂಗಳವಾರ ನಡೆದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆಯಿತು. ಯಾವುದೇ ನಾಯಕರಿಲ್ಲದೇ, ಸಂಘಟನೆಗಳ ಬೆಂಬಲವಿಲ್ಲದೇ ಈ ಬೃಹತ್ ಹೋರಾಟ ನಡೆಯಿತು.
ಆಸಕ್ತಿಕರ ಸಂಗತಿ ಎಂದರೆ ಮಂಗಳವಾರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಶೇ 60ರಷ್ಟು ನೌಕರರಿಗೆ ಏಕೆ ನಾವು ಹೋರಾಟ ಮಾಡುತ್ತಿದ್ದೇವೆ? ಎಂಬುದು ತಿಳಿದಿರಲಿಲ್ಲ. ಮೊದಲು ಪ್ರತಿಭಟನೆ ನಡೆಸುತ್ತಿದ್ದ ಜನರು ನಂತರ ಬಸ್ಸುಗಳಿಗೆ ಬೆಂಕಿ ಹಚ್ಚಿದರು, ಕಲ್ಲು ತೂರಾಟ ನಡೆಸಿದರು. [ಗಾರ್ಮೆಂಟ್ಸ್ ನೌಕರರ ಗೋಳಿನ ಕಥೆ ಬಿಚ್ಚಿಟ್ಟ ಸಾವಿತ್ರಿ]

ರಾಜಕೀಯ ಪ್ರೇರಿತ : ಕರ್ನಾಟಕ ಬಿಜೆಪಿ ಇದೊಂದು ರಾಜಕೀಯ ಪ್ರೇರಿತ ಪ್ರತಿಭಟನೆ ಎಂದು ಹೇಳಿದೆ. ಕಾಂಗ್ರೆಸ್ ಆಡಳಿತವಿರುವ ರಾಜ್ಯದಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ನೀತಿಯನ್ನು ಖಂಡಿಸಿ ನಡೆದ ಬೃಹತ್ ಪ್ರತಿಭಟನೆ ಇದಾಗಿದೆ. ರಾಜಕೀಯ ಪ್ರೇರಿತವಾಗಿ ನಡೆದ ಹೋರಾಟವಿದು ಎಂದು ಬಿಜೆಪಿ ನಾಯಕರು ದೂರಿದ್ದಾರೆ. ಈ ಪ್ರತಿಭಟನೆ ಹಿಂದೆ ಯಾರಿದ್ದಾರೆ? ಎಂದು ಪೊಲೀಸರು ಇನ್ನೂ ಆಲೋಚಿಸುತ್ತಿದ್ದಾರೆ. [ಮಂಗಳವಾರ ಬೆಂಗಳೂರ ಶಾಂತಿ ಕದಡಿದವರು ಯಾರು?]
ಕೇಸು ವಾಪಸ್ ಪಡೆಯಿರಿ : 'ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದೆವು. ಹಿಂಸಾಚಾರ ನಡೆಸುವ ಉದ್ದೇಶ ನಮಗೆ ಇರಲಿಲ್ಲ. ಗಾರ್ಮೆಂಟ್ಸ್ ಉದ್ಯೋಗಿಗಳ ಮೇಲೆ ಹಾಕಿರುವ ಕೇಸ್ಗಳನ್ನು ವಾಪಸ್ ಪಡೆಯಿರಿ. ಹಿಂಸಾಚಾರದ ಹಿಂದೆ ಬೇರೆ ವ್ಯಕ್ತಿಗಳ ಕೈವಾಡವಿದೆ. ಬಸ್ಸಿಗೆ ಬೆಂಕಿ ಹಚ್ಚಿದ್ದು, ಕಾರ್ಮಿಕರಲ್ಲ' ಎಂದು ಗಾರ್ಮೆಂಟ್ಸ್ ನೌಕರರ ಸಂಘದವರು ಹೇಳಿದ್ದಾರೆ. [ಪಿಎಫ್ ವಿಥ್ ಡ್ರಾ ನಿಯಮಕ್ಕೆ ಜುಲೈ 31ರ ತನಕ ಬ್ರೇಕ್]
ಈ ಪ್ರತಿಭಟನೆ ಹಿಂದೆ ರಾಜಕೀಯ ಕೈವಾಡವಿದೆ. ರಾತ್ರೋರಾತ್ರಿ ಕಾರ್ಮಿಕರು ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಆದರೆ, ಪೊಲೀಸರು ಸರಿಯಾದ ಕ್ರಮ ತೆಗೆದುಕೊಳ್ಳಲಿಲ್ಲ. ಸರ್ಕಾರ ಈ ಪ್ರತಿಭಟನೆ ಹಿಂದೆ ಭಾಗಿಯಾಗಿದೆ. ಗೃಹ ಸಚಿವ ಪರಮೇಶ್ವರ ಅವರು ಪರಿಸ್ಥಿತಿ ನಿಯಂತ್ರಿಸಲು ಸಂಪೂರ್ಣವಾಗಿ ವಿಫಲವಾಗಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. [ಗಾರ್ಮೆಂಟ್ಸ್ ನೌಕರರ ಪ್ರತಿಭಟನೆಯ ಸಚಿತ್ರ ವಿವರ]
ಪ್ರತಿಭಟನೆ ಕುರಿತು ಹೇಳಿಕೆ ನೀಡಿರುವ ಸಚಿವ ಪರಮೇಶ್ವರ ಅವರು, 'ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ಕೈಗೊಂಡರು. ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡ ಕಾರಣ, ಪೊಲೀಸರು ಲಾಠಿ ಚಾರ್ಜ್ ಮಾಡಲು ಸಾಧ್ಯವಾಗಿಲ್ಲ. ಈ ಪ್ರತಿಭಟನೆ ನಡೆಸಲು ಯಾವ ಸಂಘಟನೆಯವರು ಅನುಮತಿ ಪಡೆದಿರಲಿಲ್ಲ' ಎಂದು ಹೇಳಿದ್ದಾರೆ. [ಬೆಂಗಳೂರು ಪೊಲೀಸರ ಮೂರ್ಖತನ ಇದೇ ಮೊದಲಲ್ಲ]
'ಪ್ರತಿಭಟನೆ ನಡೆಸುತ್ತಿದ್ದವರು ಹೆಬ್ಬಗೋಡಿ ಪೊಲೀಸ್ ಠಾಣೆ ಮೇಲೆ ಏಕೆ ದಾಳಿ ಮಾಡಿದರು? ಎಂಬುದು ನಮಗೂ ತಿಳಿದಿಲ್ಲ. ತನಿಖೆಯ ನಂತರ ಮಾತ್ರ ಈ ಕುರಿತು ತಿಳಿಯಲಿದೆ. ಹೊರಗೆ 7 ಸಾವಿರಕ್ಕೂ ಅಧಿಕ ಜನರು ಪ್ರತಿಭಟನೆ ನಡೆಸುತ್ತಿದ್ದರು. ಠಾಣೆಯಲ್ಲಿ 20 ಪೊಲೀಸರಿದ್ದರು. ಆಗ ಪರಿಸ್ಥಿತಿ ನಿಯಂತ್ರಿಸುವುದು ಕಷ್ಟವಾಗಿತ್ತು' ಎಂದು ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ.












Click it and Unblock the Notifications