ರಾಜ್ಯದಲ್ಲಿ ಮಹಿಳೆಯರ ನವೋದ್ಯಮಕ್ಕೆ ಪ್ರೋತ್ಸಾಹ ಎಂದ ಸಚಿವ ಸುಧಾಕರ್
ಬೆಂಗಳೂರು, ಮಾರ್ಚ್ 15: ಕರ್ನಾಟಕದ ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರಿಗೆ ಉತ್ತೇಜನ ನೀಡುವ ಅಗತ್ಯವಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಎಫ್ ಕೆಸಿಸಿಐ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಯಾವುದೇ ಸಮಾಜವು ಅಭಿವೃದ್ಧಿ ಕಾಣಬೇಕಾದರೆ ಮಹಿಳೆಯರಿಗೂ ಸಮಾನ ಹಕ್ಕು ಮತ್ತು ಅವಕಾಶಗಳನ್ನು ನೀಡಬೇಕು ಎಂದರು.
ಮಹಿಳೆ ಬಾಲ್ಯದಿಂದಲೇ ಹೋರಾಟ ಶುರುವಾಗುತ್ತದೆ. ಸಮಾಜದಲ್ಲಿ ಲಿಂಗ ಸಮಾನತೆಗಾಗಿ ಹೋರಾಟ, ಕೆಲವು ಸಂದರ್ಭದಲ್ಲಿ ಕುಟುಂಬದಲ್ಲೂ ಹಕ್ಕುಗಳಿಗಾಗಿ ಹೋರಾಟ ಸೇರಿದಂತೆ ಮಹಿಳೆಯ ಹೋರಾಟ ನಿರಂತರವಾಗಿ ಇರುತ್ತದೆ. ಆದರೆ ಯಾವುದೇ ಸಮಾಜ ಸಂಪೂರ್ಣ ಅಭಿವೃದ್ಧಿ ಕಾಣಬೇಕೆಂದರೆ ಮಹಿಳೆಯರಿಗೆ ಸಂಪೂರ್ಣ ಅವಕಾಶ, ಹಕ್ಕುಗಳನ್ನು ನೀಡಬೇಕಾಗುತ್ತದೆ ಎಂದು ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.

ಮಹಿಳೆಯರ ಜನಸಂಖ್ಯೆಯಲ್ಲಿ ಗಣನೀಯ ಏರಿಕೆ:
ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ಬಚಾವೋ, ಭೇಟಿ ಪಡಾವೋ ಕಾರ್ಯಕ್ರಮ ಆರಂಭಿಸಿದರು. ಇದರ ಜೊತೆ ಭೇಟಾ ಸಮ್ಜಾವೋ ಎಂಬುದನ್ನೂ ಸೇರಿಸಲಾಯಿತು. ಇದು ಲಿಂಗ ಅಸಮಾನತೆ ನಿವಾರಿಸಲು ನೆರವಾಗಿದೆ. 2015-16 ರಲ್ಲಿ 1,000 ಪುರುಷರಿಗೆ ಮಹಿಳೆಯರ ಸಂಖ್ಯೆ 840 ಇತ್ತು. 2020ರಲ್ಲಿ ಈ ಸಂಖ್ಯೆ 1,040-1,050 ಆಗಿದೆ. ಅಂದರೆ ಐದು ವರ್ಷಗಳಲ್ಲಿ ಹೆಣ್ಣುಮಕ್ಕಳ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ. ದೇಶವು ಸರಿಯಾದ ದಿಕ್ಕಿನಲ್ಲಿ ಚಲಿಸುತ್ತಿದೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ.
ಮಹಿಳಾ ನವೋದ್ಯಮಗಳಿಗೆ ಉತ್ತೇಜನ:
ರಾಜ್ಯದಲ್ಲಿ ಮಹಿಳಾ ಉದ್ಯಮಿಗಳ ಸಂಖ್ಯೆ ಹೆಚ್ಚಿದೆ. ಮಹಿಳಾ ನವೋದ್ಯಮಗಳು ಕಂಡು ಬರುತ್ತಿದ್ದರೂ, ಅತಿ ಕಡಿಮೆ ಪ್ರಮಾಣದಲ್ಲಿವೆ. ಇದರಲ್ಲಿ ಇನ್ನಷ್ಟು ಪ್ರಗತಿ ಸಾಧಿಸಬೇಕಿದೆ. ಈ ನಿಟ್ಟಿನಲ್ಲಿ ಮಹಿಳೆಯರ ಉದ್ಯಮ ಪ್ರಾರಂಭಕ್ಕೆ ಉತ್ತೇಜನ ನೀಡಬೇಕಾಗುತ್ತದೆ ಎಂದಿದ್ದಾರೆ. ಮಹಿಳೆಯರು ಕೈಗಾರಿಕಾ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಇಚ್ಛಾಶಕ್ತಿ, ಜ್ಞಾನಶಕ್ತಿ ಹಾಗೂ ಕರ್ಮಶಕ್ತಿ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಹಿಳೆಯರು ಉದ್ಯಮಕ್ಕೆ ಬರಲು ಪ್ರೋತ್ಸಾಹ ನೀಡುವುದು. ನಂತರ ಸೂಕ್ತ ಮಾಹಿತಿ ನೀಡುವುದು ಹಾಗೂ ಎಲ್ಲರೂ ಸೇರಿ ಅವರಿಗೆ ನೆರವು ನೀಡುವುದನ್ನು ಇದು ಒಳಗೊಂಡಿದೆ. ಉದ್ಯಮಗಳಲ್ಲಿ ಮಹಿಳೆಯರು ಮುಂಚೂಣಿಗೆ ಬರಲು ಇದೇ ಮೂರು ಪ್ರಮುಖ ಆಧಾರಗಳಾಗಿವೆ ಎಂದರು.
ಶುಶ್ರೂಷಕಿಯರ ಬಗ್ಗೆ ಸಚಿವಲ ಶ್ಲಾಘನೆ:
ಮಹಿಳೆಯರನ್ನು ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ತರಲು ಉತ್ತಮ ಕಾರ್ಯಕ್ರಮ ರೂಪಿಸಬೇಕಿದೆ. ಆರೋಗ್ಯ ಇಲಾಖೆಯಲ್ಲೂ ಮಹಿಳಾ ಸಬಲೀಕರಣ ಮಾಡಲಾಗಿದೆ. ರಾಜ್ಯದಲ್ಲಿ 45 ಸಾವಿರ ಆಶಾ ಕಾರ್ಯಕರ್ತೆಯರಿದ್ದು, ಕೊವಿಡ್-19 ಸಂದರ್ಭದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಶುಶ್ರೂಷಕಿಯರು ಕೂಡ ರೋಗಿಗಳನ್ನು ತಮ್ಮ ಕುಟುಂಬದಂತೆ ಪರಿಗಣಿಸಿ ಸೇವೆ ಸಲ್ಲಿಸಿದ್ದಾರೆ ಎಂದು ಶ್ಲಾಘಿಸಿದರು.
-
Summer Alert: ಬೇಸಿಗೆಯಲ್ಲಿ ಫ್ರಿಜ್ ನೀರು ಕುಡಿಯುತ್ತಿದ್ದೀರಾ? ಮೊದಲು ಈ ವಿಷಯ ತಿಳಿದುಕೊಳ್ಳಿ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
ವಾಸ್ತು ಮಾತ್ರ ಸಾಲದು! ನಿಮ್ಮ ಜಾತಕವೇ ಯಶಸ್ಸನ್ನು ನಿರ್ಧರಿಸುತ್ತದೆ -
ಸ್ವಾವಲಂಬಿ ಬದುಕಿಗೆ ರಾಮಲಿಂಗಾ ರೆಡ್ಡಿ ಸಾಥ್: ಮಂಗಳಮುಖಿಯರು ಮತ್ತು ಮಹಿಳೆಯರಿಗೆ 20 EV ಆಟೋ ಭಾಗ್ಯ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ












Click it and Unblock the Notifications