ರಾಜ್ಯದಲ್ಲಿ ಮಹಿಳೆಯರ ನವೋದ್ಯಮಕ್ಕೆ ಪ್ರೋತ್ಸಾಹ ಎಂದ ಸಚಿವ ಸುಧಾಕರ್
ಬೆಂಗಳೂರು, ಮಾರ್ಚ್ 15: ಕರ್ನಾಟಕದ ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರಿಗೆ ಉತ್ತೇಜನ ನೀಡುವ ಅಗತ್ಯವಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಎಫ್ ಕೆಸಿಸಿಐ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಯಾವುದೇ ಸಮಾಜವು ಅಭಿವೃದ್ಧಿ ಕಾಣಬೇಕಾದರೆ ಮಹಿಳೆಯರಿಗೂ ಸಮಾನ ಹಕ್ಕು ಮತ್ತು ಅವಕಾಶಗಳನ್ನು ನೀಡಬೇಕು ಎಂದರು.
ಮಹಿಳೆ ಬಾಲ್ಯದಿಂದಲೇ ಹೋರಾಟ ಶುರುವಾಗುತ್ತದೆ. ಸಮಾಜದಲ್ಲಿ ಲಿಂಗ ಸಮಾನತೆಗಾಗಿ ಹೋರಾಟ, ಕೆಲವು ಸಂದರ್ಭದಲ್ಲಿ ಕುಟುಂಬದಲ್ಲೂ ಹಕ್ಕುಗಳಿಗಾಗಿ ಹೋರಾಟ ಸೇರಿದಂತೆ ಮಹಿಳೆಯ ಹೋರಾಟ ನಿರಂತರವಾಗಿ ಇರುತ್ತದೆ. ಆದರೆ ಯಾವುದೇ ಸಮಾಜ ಸಂಪೂರ್ಣ ಅಭಿವೃದ್ಧಿ ಕಾಣಬೇಕೆಂದರೆ ಮಹಿಳೆಯರಿಗೆ ಸಂಪೂರ್ಣ ಅವಕಾಶ, ಹಕ್ಕುಗಳನ್ನು ನೀಡಬೇಕಾಗುತ್ತದೆ ಎಂದು ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.

ಮಹಿಳೆಯರ ಜನಸಂಖ್ಯೆಯಲ್ಲಿ ಗಣನೀಯ ಏರಿಕೆ:
ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ಬಚಾವೋ, ಭೇಟಿ ಪಡಾವೋ ಕಾರ್ಯಕ್ರಮ ಆರಂಭಿಸಿದರು. ಇದರ ಜೊತೆ ಭೇಟಾ ಸಮ್ಜಾವೋ ಎಂಬುದನ್ನೂ ಸೇರಿಸಲಾಯಿತು. ಇದು ಲಿಂಗ ಅಸಮಾನತೆ ನಿವಾರಿಸಲು ನೆರವಾಗಿದೆ. 2015-16 ರಲ್ಲಿ 1,000 ಪುರುಷರಿಗೆ ಮಹಿಳೆಯರ ಸಂಖ್ಯೆ 840 ಇತ್ತು. 2020ರಲ್ಲಿ ಈ ಸಂಖ್ಯೆ 1,040-1,050 ಆಗಿದೆ. ಅಂದರೆ ಐದು ವರ್ಷಗಳಲ್ಲಿ ಹೆಣ್ಣುಮಕ್ಕಳ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ. ದೇಶವು ಸರಿಯಾದ ದಿಕ್ಕಿನಲ್ಲಿ ಚಲಿಸುತ್ತಿದೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ.
ಮಹಿಳಾ ನವೋದ್ಯಮಗಳಿಗೆ ಉತ್ತೇಜನ:
ರಾಜ್ಯದಲ್ಲಿ ಮಹಿಳಾ ಉದ್ಯಮಿಗಳ ಸಂಖ್ಯೆ ಹೆಚ್ಚಿದೆ. ಮಹಿಳಾ ನವೋದ್ಯಮಗಳು ಕಂಡು ಬರುತ್ತಿದ್ದರೂ, ಅತಿ ಕಡಿಮೆ ಪ್ರಮಾಣದಲ್ಲಿವೆ. ಇದರಲ್ಲಿ ಇನ್ನಷ್ಟು ಪ್ರಗತಿ ಸಾಧಿಸಬೇಕಿದೆ. ಈ ನಿಟ್ಟಿನಲ್ಲಿ ಮಹಿಳೆಯರ ಉದ್ಯಮ ಪ್ರಾರಂಭಕ್ಕೆ ಉತ್ತೇಜನ ನೀಡಬೇಕಾಗುತ್ತದೆ ಎಂದಿದ್ದಾರೆ. ಮಹಿಳೆಯರು ಕೈಗಾರಿಕಾ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಇಚ್ಛಾಶಕ್ತಿ, ಜ್ಞಾನಶಕ್ತಿ ಹಾಗೂ ಕರ್ಮಶಕ್ತಿ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಹಿಳೆಯರು ಉದ್ಯಮಕ್ಕೆ ಬರಲು ಪ್ರೋತ್ಸಾಹ ನೀಡುವುದು. ನಂತರ ಸೂಕ್ತ ಮಾಹಿತಿ ನೀಡುವುದು ಹಾಗೂ ಎಲ್ಲರೂ ಸೇರಿ ಅವರಿಗೆ ನೆರವು ನೀಡುವುದನ್ನು ಇದು ಒಳಗೊಂಡಿದೆ. ಉದ್ಯಮಗಳಲ್ಲಿ ಮಹಿಳೆಯರು ಮುಂಚೂಣಿಗೆ ಬರಲು ಇದೇ ಮೂರು ಪ್ರಮುಖ ಆಧಾರಗಳಾಗಿವೆ ಎಂದರು.
ಶುಶ್ರೂಷಕಿಯರ ಬಗ್ಗೆ ಸಚಿವಲ ಶ್ಲಾಘನೆ:
ಮಹಿಳೆಯರನ್ನು ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ತರಲು ಉತ್ತಮ ಕಾರ್ಯಕ್ರಮ ರೂಪಿಸಬೇಕಿದೆ. ಆರೋಗ್ಯ ಇಲಾಖೆಯಲ್ಲೂ ಮಹಿಳಾ ಸಬಲೀಕರಣ ಮಾಡಲಾಗಿದೆ. ರಾಜ್ಯದಲ್ಲಿ 45 ಸಾವಿರ ಆಶಾ ಕಾರ್ಯಕರ್ತೆಯರಿದ್ದು, ಕೊವಿಡ್-19 ಸಂದರ್ಭದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಶುಶ್ರೂಷಕಿಯರು ಕೂಡ ರೋಗಿಗಳನ್ನು ತಮ್ಮ ಕುಟುಂಬದಂತೆ ಪರಿಗಣಿಸಿ ಸೇವೆ ಸಲ್ಲಿಸಿದ್ದಾರೆ ಎಂದು ಶ್ಲಾಘಿಸಿದರು.
-
ನಿಮ್ಮ ಮನೆ ದಿಕ್ಕು ಸರಿಯೇ? ರಾಶಿ ಪ್ರಕಾರ ವಾಸ್ತು ಸೂಚನೆಗಳು ಇಲ್ಲಿವೆ -
ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ಕರಿದ ತಿಂಡಿ, ಟೀ-ಕಾಫಿ ಬ್ಯಾನ್: ಸಿರಿಧಾನ್ಯಗಳಿಗೆ ಆದ್ಯತೆ ನೀಡುವಂತೆ ಆರೋಗ್ಯ ಇಲಾಖೆ ಸೂಚನೆ -
Akshaya Tritiya 2026: ಅಕ್ಷಯ ತೃತೀಯ ವಿಶೇಷ: ಪುರುಷರು ಮತ್ತು ಮಹಿಳೆಯರಿಬ್ಬರಿಗೂ ಒಪ್ಪುವ ಟಾಪ್ 5 ಆಭರಣಗಳ ಬಗ್ಗೆ ತಿಳಿಯಿರಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು












Click it and Unblock the Notifications