'ನಮ್ಮ ಮೆಟ್ರೋ' ಸಿಬ್ಬಂದಿ ವಿರುದ್ಧ ESMA ಜಾರಿಗೆ ಸರ್ಕಾರ ನಿರ್ಧಾರ?
ಪ್ರತಿಭಟನೆ ನಿರತ ನಮ್ಮ ಮೆಟ್ರೋ ಸಿಬ್ಬಂದಿ ಮೇಲೆ ಎಸ್ಮಾ ಜಾರಿಗೆ ರಾಜ್ಯ ಸರ್ಕಾರದ ಚಿಂತನೆ. ನಮ್ಮ ಮೆಟ್ರೋ ಸಿಬ್ಬಂದಿ ಹಾಗೂ ಕೆಎಸ್ ಐಎಸ್ಎಫ್ ಸಿಬ್ಬಂದಿ ನಡುವೆ ಜಗಳ. ಮೆಟ್ರೋ ಸಿಬ್ಬಂದಿ ಬಂಧನ ಮಾಡಿರುವ ಕೆಎಸ್ ಐಎಸ್ಎಫ್.
ಬೆಂಗಳೂರು, ಜುಲೈ 7: ಹಲಸೂರು ಪೊಲೀಸರಿಂದ ಬಂಧನಕ್ಕೊಳಗಾಗಿರುವ ಮೆಟ್ರೋ ಸಿಬ್ಬಂದಿಯ ಬಿಡುಗಡೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಬೆಂಗಳೂರು ಮೆಟ್ರೋ ರೈಲು ನಿಗಮದ ಸಿಬ್ಬಂದಿ ವಿರುದ್ಧ ರಾಜ್ಯ ಸರ್ಕಾರ ಗರಂ ಆಗಿದೆ.
ಸಿಬ್ಬಂದಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ಶುಕ್ರವಾರ (ಜುಲೈ 7) ಮೆಟ್ರೋ ರೈಲು ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡು ಲಕ್ಷಾಂತರ ಪ್ರಯಾಣಿಕರಿಗೆ ತೊಂದರೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಅಗತ್ಯ ಸೇವಾ ಪೂರೈಕೆ ನಿರ್ವಹಣಾ ಕಾಯ್ದೆ (ಏಸ್ಮಾ) ಜಾರಿಗೊಳಿಸಲು ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

ರೈಲು ಪ್ರಯಾಣಕ್ಕಾಗಿ ಸೆಂಟ್ರಲ್ ಕಾಲೇಜು ನಿಲ್ದಾಣವಾದ ಸರ್.ಎಂ. ವಿಶ್ವೇಶ್ವರಯ್ಯ ನಿಲ್ದಾಣಕ್ಕೆ ಕೆಎಸ್ ಐಎಸ್ಎಫ್ ಆಗಮಿಸಿದ್ದಾಗ, ಮೆಟ್ರೋ ಸಿಬ್ಬಂದಿ ಎಂದಿನಂತೆ ತಪಾಸಣೆಗೆ ಮುಂದಾಗಿದ್ದರು.
ಆದರೆ, ತಪಾಸಣೆಗೆ ಕೆಎಸ್ ಐಎಸ್ಎಫ್ ಸಿಬ್ಬಂದಿ ನಿರಾಕರಿಸಿದ ಹಿನ್ನೆಲೆಯಲ್ಲಿ ಜಗಳ ಶುರುವಾಗಿದೆ. ಇದು ವಿಕೋಪಕ್ಕೆ ತಿರುಗಿ, ಕೆಎಸ್ ಐಎಸ್ಎಫ್ ಹಾಗೂ ಮೆಟ್ರೋ ಸಿಬ್ಬಂದಿಯ ನಡುವೆ ತಳ್ಳಾಟವೂ ನಡೆದ್ದು, ದೊಡ್ಡ ಗಲಾಟೆಯೇ ಆಯಿತು. ತಮ್ಮ ಮೇಲೆ ಹಲ್ಲೆ ಮಾಡಿದರೆಂದು ಆರೋಪಿಸಿರುವ ಕೆಎಸ್ ಐಎಸ್ಎಫ್ ಸಿಬ್ಬಂದಿ, ನಮ್ಮೆ ಮೆಟ್ರೋದ ಕೆಲ ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಇದು ಮೆಟ್ರೋ ಸಿಬ್ಬಂದಿಯ ವಿವಾದಕ್ಕೆ ಕಾರಣವಾಗಿದೆ.
ಈ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಎಂದಿನಂತೆ ಜುಲೈ 7ರಂದು ಬೆಳಗ್ಗೆ 5 ಗಂಟೆಗೆ ಆರಂಭವಾಗಬೇಕಿದ್ದ ಮೆಟ್ರೋ ಸೇವೆ ನಿಂತು ಹೋಗಿದೆ. ಈ ಬಗ್ಗೆ ಮೆಟ್ರೋ ಸಂಸ್ಥೆಯ ಅಧಿಕಾರಿಗಳು ಪ್ರತಿಭಟನೆಯ ಸ್ಥಳಕ್ಕಾಗಮಿಸಿ ಸಂಧಾನ ಮಾಡಲೆತ್ನಿಸಿದರೂ, ಅದು ಫಲ ನೀಡಿಲ್ಲ.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications