ಮೆಟ್ರೋ 2ನೇ ಹಂತ: ಯುರೋಪಿಯನ್ ಇನ್ವೆಸ್ಟ್ಮೆಂಟ್ ಬ್ಯಾಂಕ್ 4000 ಕೋಟಿ ಹೂಡಿಕೆ
ಬೆಂಗಳೂರು, ಜನವರಿ 11: ಮೆಟ್ರೋ 2ನೆ ಹಂತದ ಯೋಜನೆಯಲ್ಲಿ ಯುರೋಪಿಯನ್ ಇನ್ವೆಸ್ಟ್ ಮೆಂಟ್ ಬ್ಯಾಂಕ್ 500 ಮಿಲಿಯನ್ ಯುರೋ ಹೂಡಿಕೆ ಮಾಡಲು ಮುಂದೆ ಬಂದಿದ್ದು, ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಪರಮೇಶ್ವರ್ ಅವರ ಸಮ್ಮುಖದಲ್ಲಿ 200 ಮಿಲಿಯನ್ ಯುರೋ ಯೋಜನಾ ಒಪ್ಪಂದಕ್ಕೆ ಸಹಿ ಮಾಡಲಾಯಿತು.
ಯೂರೋಪಿಯನ್ ಇನ್ವೆಸ್ಟ್ಮೆಂಟ್ ಬ್ಯಾಂಕ್ ನೀಡುತ್ತಿರುವ ನೆರವಿಗೆ ಸರ್ಕಾರ ಆಭಾರಿಯಾಗಿದೆ. ಬೆಂಗಳೂರು ನಗರದಲ್ಲಿ 11 ಮಿಲಿಯನ್ ಜನಸಂಖ್ಯೆ ಇದ್ದು, ಪರಿಸರ ಮಾಲಿನ್ಯಕ್ಕೆ ನೀಡುತ್ತಿರುವ ಕೊಡುಗೆಯನ್ನು ಹಾಗೂ ವಾಹನ ದಟ್ಟಣೆ ಕಡಿಮೆ ಮಾಡುವ, ಹಾಗೂ ಜನ ಸಾಮಾನ್ಯರ ಜೀವನ ಮಟ್ಟ ಉತ್ತಮ ಪಡಿಸುವ ನಿಟ್ಟಿನಲ್ಲಿ ಮೆಟ್ರೋ ಯೋಜನೆ ಸಹಕಾರಿಯಾಗಿದೆ ಎಂದು ಸಿಎಂ ಹೇಳಿದರು.
2ನೇ ಹಂತದ ಮೆಟ್ರೋ: ನಗರಾಭಿವೃದ್ಧಿ ಇಲಾಖೆ ಎಚ್ಚರಿಕೆ ಏನು?
ಮೊಟ್ರೋ 2ನೇ ಹಂತದ ಯೋಜನೆಯ ಅಂದಾಜು ಮೊತ್ತ 26,405 ಕೋಟಿ ರೂ. ಗಳಾಗಿದ್ದು, ಈ ಪೈಕಿ 12,141 ಕೋಟಿ ರು.ಗಳು ಸಾಲದ ಅಗತ್ಯ ವಿದೆ.ಇ ಐ ಬಿ 500 ಮಿಲಿಯನ್ ಯೂರೋಗಳನ್ನು ಅಂದರೆ ಸುಮಾರು 4000 ಕೋಟಿ ರೂ. ಗಳ ನೆರವನ್ನು ಒದಗಿಸುತ್ತಿರುವುದು ಅಭಿನಂದನೀಯ ಎಂದು ಮುಖ್ಯಮಂತ್ರಿ ಗಳು ತಿಳಿಸಿದರು. ಈ ಸಾಲದ ನೆರವನ್ನು ಇ.ಐ.ಬಿ ತಮ್ಮ ಪರಿಸರ ಸೌಲಭ್ಯ ಯೋಜನೆಯಡಿ ಕೈಗೊಂಡಿರುವುದಾಗಿ ಅವರು ತಿಳಿಸಿದರು.

ಮೆಟ್ರೊ ಎರಡನೇ ಬಿ ಹಂತದ ನಿರ್ಮಾಣಕ್ಕೆ ನಿನ್ನೆಯಷ್ಟೆ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಅದರ ಬೆನ್ನಲ್ಲೆ ಇಂದು ಹೂಡಿಕೆಗೆ ಮೊದಲ ಹಂತದ ಒಪ್ಪಂದ ಮಾಡಿಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ಯುರೋಪಿಯನ್ ಇನ್ವೆಸ್ಟ್ ಮೆಂಟ್ ಬ್ಯಾಂಕ್ ನ ನಿರ್ದೇಶಕಿ ಮರಿಯಾ, ಉಪನಿರ್ದೇಶಕಿ ಸುನೀತಾ ,ಬಿ.ಎಂ.ಆರ್.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications