ಮತ ಪ್ರಚಾರಕ ಬೆನ್ನಿ ಹಿನ್ ಬೆಂಗಳೂರು ಭೇಟಿ ಖಚಿತ

ಇದರ ಜತೆಗೆ, ಜ.15ರಂದು ನಿಗದಿ ಕಾರ್ಯಕ್ರಮ ಎಂದಿನಂತೆ ನಡೆಯಲಿದೆ. ಜ.15ರಿಂದ ಜ.17ರ ತನಕ ಇದ್ದ ಕಾರ್ಯಕ್ರಮದಲ್ಲಿ ಬದಲಾವಣೆ ನಿಶ್ಚಿತವಾಗಿದ್ದು, ಜ.15ರಂದು ಬೆಂಗಳೂರಿಗೆ ಬರಲಿರುವ ಬೆನ್ನಿಹಿನ್ ಅಂದೇ ರಾತ್ರಿ ವಿಮಾನ ಹತ್ತಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಸೋಮವಾರ(ಜ.13) ಬೆನ್ನಿ ಹಿನ್ ಅವರ ಬೆಂಗಳೂರು ಭೇಟಿ ಬಗ್ಗೆ ಆಯೋಜಕರಿಂದ ಸುದ್ದಿಗೋಷ್ಠಿ ನಿಗದಿಯಾಗಿತ್ತು. ಆದರೆ, ಇಂದು ಸುದ್ದಿಗೋಷ್ಠಿ ರದ್ದಾದ ಕಾರಣ ಬೆನ್ನಿ ಹಿನ್ ಬರುವಿಕೆ ಬಗ್ಗೆ ನಾನಾ ಊಹಾಪೋಹಗಳು ಹರಿದಾಡಿತ್ತು.[ಬೆನ್ನಿಹಿನ್ ಭೇಟಿಗೆ ಬಿಜೆಪಿ ವಿರೋಧ]
ಈ ನಡುವೆ ಬೆಂಗಳೂರಿನ ಪ್ರಾರ್ಥನಾ ಸಭೆಯನ್ನು ವಿರೋಧಿಸಿ ಹುಬ್ಬಳ್ಳಿಯಲ್ಲಿ ಧರಣಿ ನಡೆಸುತ್ತಿದ್ದ ಭಾರತ ಕ್ರಾಂತಿ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ನಡೆದಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.[ಬೆನ್ನಿಹಿನ್ ಭೇಟಿಗೆ ಅವಕಾಶ ನೀಡಿದ ಹೈಕೋರ್ಟ್]
ಪವಾಡ ಪುರುಷ, ಕ್ರೈಸ್ತ ಪಾದ್ರಿ ಬೆನ್ನಿಹಿನ್ ಆಯೋಜಿಸಿರುವ ಸಾಮೂಹಿಕ ಚಿಕಿತ್ಸಾ ಪ್ರಾರ್ಥನೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಶ್ರೀರಾಮ ಸೇವೆ ಹೈಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಭೇಟಿಗೆ ಅವಕಾಶ ನೀಡಿದೆ. ಇದರಿಂದ ಬೆನ್ನಿಹಿನ್ ಕಾರ್ಯಕ್ರಮಕ್ಕೆ ಕಾನೂನಿನ ಒಪ್ಪಿಗೆ ದೊರಕಿದ್ದು, ಜ.15ರಿಂದ ಬೆನ್ನಿಹಿನ್ ಬೆಂಗಳೂರಿನಲ್ಲಿ ಪ್ರಾರ್ಥನಾ ಸಭೆ ನಡೆಸಲಿದ್ದಾರೆ.
ಜನವರಿ 15ರಿಂದ ಜ.17ರವರೆಗೆ ಇಸ್ರೇಲ್ ಮೂಲದ ಬೈಬಲ್ ಶಿಕ್ಷಕ ಬೆನ್ನಿ ಹಿನ್ ಬೆಂಗಳೂರಿನ ಯಲಹಂಕದಲ್ಲಿರುವ ಸೂಪರ್ ನೋವಾ ಅರೀನಾ ಪ್ರದೇಶದಲ್ಲಿ ಕ್ರಿಶ್ಚಿಯನ್ ಪ್ರಾರ್ಥನಾ ಸಮ್ಮೇಳವನ್ನು ಹಮ್ಮಿಕೊಂಡಿದ್ದಾನೆ. ಪ್ರತಿದಿನ ಸಂಜೆ 4ರಿಂದ 9 ಗಂಟೆಯವರೆಗೆ ಪ್ರಾರ್ಥನಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಪ್ರವೇಶ ದರ ನಿಗದಿ ಪಡಿಸಲಾಗಿದ್ದು, ವಿವರಗಳಿಗೆ ಬೆನ್ನಿ ಹಿನ್ ವೆಬ್ ತಾಣ ನೋಡಬಹುದು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications