ಡಿಸೆಂಬರ್ ಅಂತ್ಯಕ್ಕೆ ಎಲ್ಲರಿಗೂ ಕೊರೊನಾ ಲಸಿಕೆ: ಸುಧಾಕರ್
ಬೆಂಗಳೂರು, ಜೂನ್ 21: ಡಿಸೆಂಬರ್ ಅಂತ್ಯದ ವೇಳೆಗೆ ರಾಜ್ಯದ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಿ, ರಾಜ್ಯವನ್ನು ಕೊರೊನಾ ಮುಕ್ತಗೊಳಿಸುವ ಗುರಿ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
Recommended Video
ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜಿನಲ್ಲಿ ಲಸಿಕಾ ಮಹಾ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.
ನಂತರ ಮಾತನಾಡಿದ ಸಚಿವರು, ಅಂತಾರಾಷ್ಟ್ರೀಯ ಯೋಗ ದಿನದಂದೇ ಪ್ರಧಾನಿ ನರೇಂದ್ರ ಮೋದಿಯವರು ಕೋವಿಡ್ ಲಸಿಕೆ ಅಭಿಯಾನ ನಡೆಸಲು ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಒಂದೇ ದಿನ ಸುಮಾರು 7 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಇದೆ. 18-44 ವರ್ಷದವರಿಗೆ ಲಸಿಕೆ ಹಾಗೂ ಎರಡನೇ ಡೋಸ್ ಪಡೆಯುವವರಿಗೂ ಲಸಿಕೆ ನೀಡಲಾಗುತ್ತಿದೆ. ಡಿಸೆಂಬರ್ ಅಂತ್ಯದ ವೇಳೆಗೆ ರಾಜ್ಯದ ಪ್ರತಿಯೊಬ್ಬರಿಗೂ ಲಸಿಕೆ ನೀಡಿ, ರಾಜ್ಯವನ್ನು ಕೊರೊನಾ ಮುಕ್ತಗೊಳಿಸುವ ಉದ್ದೇಶ ಹೊಂದಲಾಗಿದೆ ಎಂದರು.
ಈ ವರ್ಷ 'ಬಿ ವಿತ್ ಯೋಗ', 'ಯೋಗ ಫಾರ್ ವೆಲ್ ನೆಸ್' ಎಂಬ ಘೋಷವಾಕ್ಯವಿದೆ. ದೊಡ್ಡ ಸಮಾರಂಭ ಇಟ್ಟುಕೊಳ್ಳದೆ ಕೋವಿಡ್ ಮಾರ್ಗಸೂಚಿ ಪಾಲಿಸಿ ಯೋಗ ದಿನ ಆಚರಿಸಲಾಗುತ್ತಿದೆ. ಯೋಗ ಕೇವಲ ದೈಹಿಕ ಮಾತ್ರವಲ್ಲದೆ, ಮಾನಸಿಕ, ಸಾಮಾಜಿಕ ಆರೋಗ್ಯಕ್ಕೆ ಅಗತ್ಯ. ಪ್ರಧಾನಿಗಳು ವಿಶ್ವಸಂಸ್ಥೆಯಲ್ಲಿ ಇದನ್ನು ಪ್ರಸ್ತಾಪ ಮಾಡಿದ್ದು, ನಂತರ ಇಡೀ ಜಗತ್ತು ಯೋಗ ದಿನ ಆಚರಿಸುತ್ತಿದೆ ಎಂದರು.

'ಯೋಗ ಫಾರ್ ವೆಲ್ ನೆಸ್' ಎಂಬ ಘೋಷವಾಕ್ಯ
ನಮ್ಮ ದೇಹ ರಥದಂತೆ ಎಂದು ಭಗವದ್ಗೀತೆಯಲ್ಲಿ ಹೇಳಲಾಗಿದೆ. ರಥದ ಕುದುರೆ ಇಂದ್ರಿಯ, ಸಾರಥಿ ಮನಸ್ಸು ಎನ್ನಲಾಗಿದೆ. ಮನಸ್ಸು ಸರಿ ಇದ್ದರೆ ಕುದುರೆಗಳು ಸರಿಯಾಗಿ ಓಡುತ್ತವೆ. ಇದೆಲ್ಲ ಸಾಧ್ಯವಾಗಲು ಯೋಗ ಮಾಡಬೇಕು. ಶ್ವಾಸಕೋಶಕ್ಕೆ ಉತ್ತಮ ವ್ಯಾಯಾಮವಾದ ಪ್ರಾಣಾಯಾಮ, ಧ್ಯಾನ ಮಾಡಬೇಕು. ಇದು ಕೇವಲ ಚಿಕಿತ್ಸೆ ಅಲ್ಲದೆ, ರೋಗ ನಿರೋಧಕ ಶಕ್ತಿ ಹೆಚ್ಚಿಸುವ ವಿಧಾನವಾಗಿದೆ ಎಂದರು.

1.86 ಕೋಟಿ ಲಸಿಕೆ
15 ಲಕ್ಷಕ್ಕೂ ಅಧಿಕ ಕೋವಿಶೀಲ್ಡ್ ಹಾಗೂ 6-7 ಲಕ್ಷ ಕೋವ್ಯಾಕ್ಸಿನ್ ಲಸಿಕೆ ರಾಜ್ಯದಲ್ಲಿ ಸಂಗ್ರಹವಿದೆ. 1.86 ಕೋಟಿ ಜನರಿಗೆ ಈಗಾಗಲೇ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ 13 ಸಾವಿರ ಲಸಿಕಾ ಕೇಂದ್ರಗಳಿವೆ. ಒಂದು ಕೇಂದ್ರದಲ್ಲಿ 70-80 ಜನರಿಗೆ ಲಸಿಕೆ ನೀಡಿದರೂ ನಾವು ಗುರಿ ಮುಟ್ಟಲು ಸಾಧ್ಯವಿದೆ. ಇದಕ್ಕೆ ಜನರ ಸಂಪೂರ್ಣ ಸಹಕಾರ ಬೇಕಿದೆ. ಸ್ಪುಟ್ನಿಕ್ ಲಸಿಕೆ ನೀಡಲು ಅನುಮತಿ ಇದ್ದು, ಈ ಲಸಿಕೆಯ ಲಭ್ಯತೆ ಬಗ್ಗೆ ನೋಡಬೇಕಿದೆ ಎಂದರು.

ರಾಜ್ಯದ ಜನರಿಗೆ ಹೆಚ್ಚು ಜಾಗೃತಿ ಇದೆ
ಕೋವಿಡ್ ಲಸಿಕೆ ಬಗ್ಗೆ ರಾಜ್ಯದ ಜನರಿಗೆ ಹೆಚ್ಚು ಜಾಗೃತಿ ಇದೆ. ಆರಂಭಿಕ ಹಂತದಲ್ಲಿ ಕೆಲ ಪಕ್ಷಗಳು ಲಸಿಕೆ ಬಗ್ಗೆ ಜನರ ಮನಸ್ಸಿನಲ್ಲಿ ಅಂಜಿಕೆ ಉಂಟುಮಾಡಿದ್ದವು. ಆದರೆ ಕ್ರಮೇಣ ಜನರಿಗೆ ನಂಬಿಕೆ ಬಂದಿದೆ. ಲಸಿಕೆಯೊಂದೇ ಕೊರೊನಾ ನಿವಾರಣೆಗೆ ಸೂಕ್ತ ಪರಿಹಾರ ಎಂಬುದು ಅರಿವಾಗಿದೆ ಎಂದರು.

ಅಂಕಿ ಅಂಶ ನೀಡುವಲ್ಲಿ ರಾಜ್ಯ ಮಾದರಿಯಾಗಿದೆ
ಕೋವಿಡ್ ಸಂಬಂಧಿ ಅಂಕಿ ಅಂಶ ನೀಡುವಲ್ಲಿ ರಾಜ್ಯ ಮಾದರಿಯಾಗಿದೆ ಎಂದು ಕೇಂದ್ರ ಸರ್ಕಾರವೇ ಶ್ಲಾಘಿಸಿದೆ. ನಮ್ಮ ಸರ್ಕಾರ ಯಾವುದೇ ಮಾಹಿತಿ ಮುಚ್ಚಿಡುತ್ತಿಲ್ಲ. ಕಪ್ಪು ಶಿಲೀಂಧ್ರಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. ಕೋವಿಡ್ ಬಿಡುಗಡೆಗೆ ಹೊಸ ಮಾರ್ಗಸೂಚಿಯನ್ನೂ ತರಲಾಗಿದೆ ಎಂದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications