Breaking News: ರೇಪ್ ಕೇಸ್, ಎಐಎಡಿಎಂಕೆ ಮಾಜಿ ಸಚಿವ ಬಂಧನ
ಬೆಂಗಳೂರು, ಜೂನ್ 20: ಎಐಎಡಿಎಂಕೆ ಮಾಜಿ ಸಚಿವ ಎಂ ಮಣಿಕಂಠನ್ ಅವರನ್ನು ಚೆನ್ನೈ ಪೊಲೀಸರು ಬೆಂಗಳೂರಿನಲ್ಲಿಂದು ಬಂಧಿಸಿರುವ ಸುದ್ದಿ ಬಂದಿದೆ.
Recommended Video
ಮಲೇಷ್ಯಾದ ಮಹಿಳೆಯೊಬ್ಬರನ್ನು ವಂಚಿಸಿ, ಅತ್ಯಾಚಾರ ಎಸಗಿದ ಆರೋಪ ಹೊತ್ತುಕೊಂಡಿದ್ದಾರೆ. ಮಣಿಕಂಠನ್ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಪಕ್ಕಕ್ಕೆ ತಳ್ಳಿತ್ತು.
ಅಡ್ಯಾರ್ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಐಪಿಸಿ ಸೆಕ್ಷನ್ 376, 323, 417, 323, 506, ಐಟಿ ಕಾಯ್ದೆಯಡಿಯಲ್ಲಿ ಮಣಿಕಂಠನ್ ವಿರುದ್ಧ ಪ್ರಕರಣ ದಾಖಲಾಗಿದೆ.

''ಕಳೆದ ಐದು ವರ್ಷಗಳಿಂದ ನಾನು ಲಿವ್ ಇನ್ ಸಂಬಂಧದಲ್ಲಿದ್ದೆ, ನನ್ನನ್ನು ಮದುವೆಯಾಗುವುದಾಗಿ ನಂಬಿಸಿ, ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ, ಮೂರು ಬಾರಿ ಗರ್ಭಧರಿಸಿದ್ದೆ, ಬಲವಂತವಾಗಿ ಗರ್ಭಪಾತ ಮಾಡಿಸಿದರು,'' ಎಂದು ಮಲೇಷ್ಯಾ ಮೂಲದ ಭಾರತೀಯ ಮಹಿಳೆ ಶಾಂತಿನಿ ದೇವಾ(theva) ಆರೋಪಿಸಿದ್ದಾರೆ.
ಎಐಎಡಿಎಂಕೆ ಸರ್ಕಾರದಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಖಾತೆ ಸಚಿವರಾಗಿದ್ದ ಮಣಿಕಂಠನ್ಗೆ 2017ರಲ್ಲಿ ಶಾಂತಿನಿ ಪರಿಚಯವಾಗಿದೆ. ದಕ್ಷಿಣ ಏಷ್ಯಾದ ಪ್ರವಾಸಿ ರಾಯಭಾರಿಯಾಗಿದ್ದ ಶಾಂತಿನಿಗೆ ಮಲೇಷ್ಯಾದಲ್ಲಿ ಹೂಡಿಕೆ ಸಂಬಂಧ ಮಾತುಕತೆ ಮಾಡಲು ಮಣಿಕಂಠನ್ ಕರೆಸಿಕೊಂಡಿದ್ದರು.
ರಾಮನಾಥಪುರಂ ಕ್ಷೇತ್ರದಿಂದ 2016ರಿಂದ 2019ರ ತನಕ ಶಾಸಕರಾಗಿ ಆಯ್ಕೆಯಾಗಿರುವ ಮಣಿಕಂಠನ್ ಈಗಾಗಲೇ ಮದುವೆಯಾಗಿದೆ. ಆದರೂ ಶಾಂತಿನಿ ಜೊತೆ ಮಣಿಕಂಠನ್ ಲಿವ್ ಇನ್ ಸಂಬಂಧದಲ್ಲಿದ್ದರು. ಮದುವೆಯಾಗುವಂತೆ ಬೇಡಿಕೆ ಒಡ್ಡಿದರೆ, ಬೆದರಿಕೆ ಹಾಕುತ್ತಿದ್ದರು ಎಂದು ಶಾಂತಿನಿ ಆರೋಪ ಮಾಡಿದ್ದಾರೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications