ಬಿಜೆಪಿ ಸರ್ಕಾರದಿಂದ ರೈತರ ಬೆನ್ನಿಗೆ ಚೂರಿ; ಕುಮಾರಸ್ವಾಮಿ
ಬೆಂಗಳೂರು, ಏಪ್ರಿಲ್ 11: ರೈತಪರ ಸರ್ಕಾರ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಸಗೊಬ್ಬರ ಬೆಲೆ ಏರಿಕೆ ಮೂಲಕ ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಸರ್ಕಾರ ಮತ್ತು ರಸಗೊಬ್ಬರ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ. ಅಧಿಕಾರಕ್ಕೆ ಬಂದ ಕೆಲವೇ ಗಂಟೆಗಳಲ್ಲಿ ರೈತರ ಮೇಲೆ ಗೋಲಿಬಾರ್ ನಡೆಸಿದ್ದ ಬಿಜೆಪಿ ಸರಕಾರ, ರೈತರ ಬಗ್ಗೆ ಮೃದು ಮಾತಾಡುತ್ತಲೇ ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿದೆ. ಇದೀಗ ರಸಗೊಬ್ಬರ ದರವನ್ನು ಶೇಕಡ 60ರಷ್ಟು ಹೆಚ್ಚಳ ಮಾಡಿದೆ ಎಂದು ಟ್ವೀಟ್ ಮಾಡಿದ್ದಾರೆ.
ಕೇಂದ್ರದ ರಸಗೊಬ್ಬರ ಸಚಿವ ಡಿವಿ ಸದಾನಂದ ಗೌಡರು ರಸಗೊಬ್ಬರ ಕಂಪನಿಗಳ ಪ್ರತಿನಿಧಿಗಳ ಜತೆ ಸಭೆ ನಡೆಸುವುದರಿಂದ ಈ ಸಮಸ್ಯೆ ಬಗೆಹರಿಯುವುದಿಲ್ಲ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಬಾರದು. ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಸದಾನಂದ ಗೌಡರು ಮಾತನಾಡಿ ರಸಗೊಬ್ಬರಕ್ಕಾಗಿ ನೀಡುತ್ತಿದ್ದ 1.5ಲಕ್ಷ ಕೋಟಿಯಷ್ಟು ಸಬ್ಸಿಡಿ ಮುಂದುವರೆಸುವಂತೆ ಮನವರಿಕೆ ಮಾಡಿಕೊಡಬೇಕು. ಈಗ ಅದನ್ನು ಶೇ.50ರಷ್ಟು ಕಡಿತ ಮಾಡಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಸರ್ಕಾರಕ್ಕೆ ಕುಮಾರಸ್ವಾಮಿ ಸಲಹೆ:
"ಬಾಯಿ ಮಾತಿನಿಂದ ರೈತರ ಬಾಳು ಬೆಳಗಲು ಸಾಧ್ಯವಿಲ್ಲ. ರೈತರ ಮತಗಳ ಮೇಲೆ ಕಣ್ಣಿಟ್ಟು ಎಷ್ಟು ದಿನ ಸುಳ್ಳಿನ ಅರಮನೆ ಕಟ್ಟುತ್ತೀರಿ? ಇನ್ನಾದರೂ ರೈತರಿಗೆ ಸಹನೀಯ ಬದುಕು ಕಟ್ಟಿಕೊಳ್ಳಲು ಅವಕಾಶ ಕೊಡಿ. ರಸಗೊಬ್ಬರದ ಮೇಲಿನ ದರ ಹೆಚ್ಚಳ ವಾಪಸ್ ಪಡೆಯಿರಿ" ಎಂದು ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.
Recommended Video
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications