ಎಚ್ಡಿಕೆಗೆ ಅಪಮಾನ; ಟ್ರೋಲ್ ಮಗ ಪೇಜ್ ಅಡ್ಮಿನ್ ವಿರುದ್ಧ ದೂರು
ಬೆಂಗಳೂರು,ಜು.20: ನಟ ದರ್ಶನ್ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಡುವಿನ ವಾಕ್ಸಮರ ಟ್ರೋಲಿಗರಿಗೆ ಆಹಾರವಾಗಿದೆ. ಇಂದ್ರಜಿತ್ ಲಂಕೇಶ್ ಜತೆಗೆ ಇದೀಗ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಸಾಮಾಜಿಕ ಜಾಲ ತಾಣದಲ್ಲಿ ಟ್ರೋಲ್ ಮಾಡಿರುವುದು ವೈರಲ್ ಆಗಿದೆ. ಕುಮಾರಸ್ವಾಮಿ ಹಾಗೂ ಇಂದ್ರಜಿತ್ ಲಂಕೇಶ್ ಪೋಟೋಗಳನ್ನು ಹಾಕಿ ಸೂತ್ರಧಾರಿ ಕರಿ ಇಡ್ಲಿ, ಪಾತ್ರಧಾರಿ ಬಿಳಿ ಬಾಂಡ್ಲಿ ಎಂದು ಹಂಗಿಸಿ ಟ್ರೋಲ್ ಮಾಡಲಾಗಿದೆ.
ಇಂದ್ರಜಿತ್ ಲಂಕೇಶ್ ನಿನ್ನೆಯಷ್ಟೇ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ನಟ ದರ್ಶನ್ ಹಿಂಬಾಲಕರು ನನಗೆ ಬೆದರಿಕೆ ಹಾಕುತ್ತಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನ ಮಾಡಲಾಗುತ್ತಿದೆ. ನನ್ನ ಮೊಬೈಲ್ಗೆ ನಿರಂತರ ಕರೆ ಮಾಡುವ ಮೂಲಕ ಹಿಂಸೆ ನೀಡುತ್ತಿದ್ದಾರೆ ಎಂದು ದೂರು ನೀಡಿದ್ದರು. ಇದೀಗ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೆಸರನ್ನು ಬಳಸಿ ಟ್ರೋಲ್ ಮಾಡಿರುವ ಟ್ರೋಲ್ ಮಗ ಪೇಜ್ ಅಡ್ಮಿನ್ ವಿರುದ್ಧ ಜೆಡಿಎಸ್ ಕಾನೂನು ಘಟಕದಿಂದ ದೂರು ನೀಡಲಾಗಿದೆ.

Recommended Video
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೆಸರನ್ನು ಈ ಪ್ರಕರಣದಲ್ಲಿ ಎಳೆದು ತಂದು ತೇಜೋವಧೆ ಮಾಡಲಾಗುತ್ತಿದೆ. ಸೂತ್ರಧಾರಿ ಎಂಬ ಪೋಸ್ಟ್ನಲ್ಲಿ ಅವಾಚ್ಯ ಪದ ಬಳಿಸಿ ಅಪಹಾಸ್ಯ ಮಾಡಲಾಗಿದೆ. ಕುಮಾರಸ್ವಾಮಿ ಅವರ ಭಾವಚಿತ್ರವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಎನಿಸಿಕೊಂಡಿರುವ ಕುಮಾರಸ್ವಾಮಿ ಅವರಿಗೆ ಅಗೌರವ ತೋರಿ ತೇಜೋವಧೆ ಮಾಡಿರುವ ಟ್ರೋಲ್ ಮಗ ಪೇಜ್ ವಿರುದ್ಧ ಐಟಿ ಕಾಯ್ದೆ ಅಡಿ ಕೇಸು ದಾಖಲಿಸಿ ಕ್ರಮ ಜರುಗಿಸುವಂತೆ ಜೆಡಿಎಸ್ ಕಾನೂನು ಘಟಕದ ಕಾರ್ಯದರ್ಶಿ ಪ್ರದೀಪ್ ದೂರಿನಲ್ಲಿ ಮನವಿ ಮಾಡಿದ್ದಾರೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು











Click it and Unblock the Notifications