ಶಶಿಕಲಾಗೆ ರಾಜಾತಿಥ್ಯ ನೀಡುವಲ್ಲಿ ಪರಮೇಶ್ವರ್ ಕೈವಾಡ?
ಬೆಂಗಳೂರು, ಜುಲೈ 19: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಶಿಕಲಾಗೆ ರಾಜಾತಿಥ್ಯ ನೀಡಲು ಕಾರಾಗೃಹ ಅಧಿಕಾರಿಗಳ ಜೊತೆ ಮಾಜಿ ಗೃಹ ಸಚಿವ, ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಕೂಡಾ ಭಾಗಿಯಾಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ತಮಿಳುನಾಡಿನ ಎಐಎಡಿಎಂಕೆಯ ಒ. ಪನ್ನೀರ್ ಸೆಲ್ವಂ ಬಣದ ನಾಯಕರೇ ಈ ಆರೋಪ ಮಾಡಿದ್ದಾರೆ. ಈ ಕುರಿತು ಎಐಎಡಿಎಂಕೆಯ ಕರ್ನಾಟಕ ಯುವ ಕಾರ್ಯದರ್ಶಿ ಆರ್ ಅನ್ಬುವೆಲ್ ಕುಮಾರ್ ಹೇಳಿಕೆ ನೀಡಿದ್ದಾರೆ.

"ಶಶಿಕಲಾ ಆಪ್ತ ವಿ. ಪುಗವೆಂದಿ ಮಾಜಿ ಗೃಹ ಸಚಿವ ಪರಮೇಶ್ವರ್ ಜತೆ ಉತ್ತಮ ಸಂಪರ್ಕ ಇಟ್ಟುಕೊಂಡಿದ್ದಾರೆ. ಪುಗವೆಂದಿ ಪರಮೇಶ್ವರ್ ಅವರಿಗೂ ಆಪ್ತರಾಗಿದ್ದು ಯಾವತ್ತೂ ಪರಮೇಶ್ವರ್ ಮನೆಯಲ್ಲೇ ಇರುತ್ತಾರೆ. ಈ ವಿಚಾರದಲ್ಲಿ ಅವರು ಖಂಡಿತ ಸಹಾಯ ಮಾಡಿರುತ್ತಾರೆ." ಎಂದಿದ್ದಾರೆ.
ಅಷ್ಟೇ ಅಲ್ಲದೆ, "ಈ ಬಗ್ಗೆ ನಾವು ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದು ತನಿಖೆಗೆ ಆಗ್ರಹಿಸುತ್ತೇವೆ," ಎಂದು ಅನ್ಬುವೆಲ್ ಕುಮಾರ್ ಹೇಳಿದ್ದಾರೆ.
ಜೈಲಿನ ಸಮೀಪ ಮನ್ನಾರ್ ಗುಡಿ ಗ್ಯಾಂಗ್
"ಇನ್ನು ಶಶಿಕಲಾ ಜೈಲಿಗೆ ಬಂದ ನಂತರ ಅವರ ಮನ್ನಾರು ಗುಡಿ ಕುಟುಂಬ ಪರಪ್ಪನ ಆಗ್ರಹಾರದ ಬಳಿಯೇ ಫ್ಲ್ಯಾಟ್ ಖರೀದಿ ಮಾಡಿದ್ದಾರೆ. ಅಲ್ಲಿಯೇ ಶಿಫ್ಟ್ ಆಗಿದ್ದಾರೆ. ಶಶಿಕಲಾ ರಾತ್ರಿ ಅಲ್ಲಿಯೇ ಮಲಗೋದಕ್ಕೆ ತೆರಳುತ್ತಾರೆ ಅನ್ನುವ ಸುದ್ದಿಯೂ ಇದೆ," ಎಂದಿರುವ ಅನ್ಬುವೆಲ್ ಕುಮಾರ್ ಈ ಬಗ್ಗೆಯೂ ತನಿಖೆಗೆ ಪತ್ರ ಬರೆಯುತ್ತೇವೆ ಎಂದಿದ್ದಾರೆ.
ಆಧಾರ ರಹಿತ ಆರೋಪ - ಪರಮೇಶ್ವರ್
ಆದರೆ ಈ ಆರೋಪವನ್ನು ಪರಮೇಶ್ವರ್ ಸರಾಸಗಟಾಗಿ ತಳ್ಳಿ ಹಾಕಿದ್ದಾರೆ. "ಆರೋಪ ಆಧಾರ ರಹಿತ. ನಾನು ಗೃಹ ಮಂತ್ರಿಯಾಗಿದ್ದಾಗ ಜೈಲಿನ ಅಧಿಕಾರಿಗಳು ಜೈಲು ಕೈಪಿಡಿಯಂತೆಯೇ ಕೆಲಸ ಮಾಡಿದ್ದಾರೆ. ನಾನು ಅವರ ಕೆಲಸದಲ್ಲಿ ಮಧ್ಯಪ್ರವೇಶವೂ ಮಾಡಿಲ್ಲ, ಪ್ರಭಾವವೂ ಬೀರಿಲ್ಲ. ಹೀಗಿದ್ದೂ ವಿವರವಾದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸತ್ಯ ಮತ್ತು ನ್ಯಾಯ ಹೊರಬರಲಿದೆ," ಎಂದು ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications