ಬಿಜೆಪಿಗೆ ಸೇರುವ ವದಂತಿಗೆ ತೆರೆ ಎಳೆದ ಜಿಟಿಡಿ: ಅಷ್ಟಕ್ಕೂ ಅವರಂದಿದ್ದೇನು?
Recommended Video
ಬೆಂಗಳೂರು, ಸೆಪ್ಟೆಂಬರ್ 9: "ನನಗೆ ಇದುವರೆಗೂ ಬಿಜೆಪಿಗೆ ಬರುವಂತೆ ಯಾರೂ ಕರೆದಿಲ್ಲ. ನಾನು ಸಹ ಎಲ್ಲಿಯೂ ಬಿಜೆಪಿಗೆ ಹೋಗುತ್ತೇನೆ ಎಂದು ತಿಳಿಸಿಲ್ಲ" ಎಂದು ಹೇಳಿಕೆ ಕೊಡುವ ಮೂಲಕ ಮಾಜಿ ಸಚಿವ ಜಿ.ಟಿ ದೇವೇಗೌಡ ಬಿಜೆಪಿ ಸೇರ್ಪಡೆ ಕುರಿತ ಊಹಾಪೋಹಕ್ಕೆ ತೆರೆ ಎಳೆದಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಚಾಮುಂಡೇಶ್ವರಿ ಕ್ಷೇತ್ರದ ಕಾಮಗಾರಿಗಳಿಗೆ ತಡೆಯಾಗಿದೆ. ಹೀಗಾಗಿ ಸಿಎಂ ಬಿಎಸ್ ವೈ ಭೇಟಿಯಾಗಿ ಮಾಹಿತಿ ನೀಡಿದ್ದೇನೆ. ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ" ಎಂದು ತಿಳಿಸಿದರು.

ಈ ಮಧ್ಯೆ ಜಿಟಿಡಿ ಬಿಜೆಪಿ ಸೇರುತ್ತಾರೆ ಎಂಬ ಸುದ್ದಿಗೆ ಪ್ರತಿಕ್ರಿಯಿಸಿರುವ ಅವರು, "ನಾನು ಬಿಜೆಪಿಗೆ ಹೋಗುತ್ತೇನೆ ಎಂದು ಹೇಳಿಲ್ಲ. ನನಗೆ ತುಂಬಾ ನೋವಾಗಿದೆ. ಹೀಗಾಗಿ ಪಕ್ಷದ ಕಾರ್ಯಕ್ರಮಗಳಿಂದ ದೂರ ಉಳಿದಿದ್ಧೇನೆ. ಮೂರೂವರೆ ವರ್ಷಗಳ ತನಕ ನಾನು ಏನನ್ನೂ ಹೇಳುವುದಿಲ್ಲ. ಬೇರೆ ಪಕ್ಷ ಸೇರ್ಪಡೆಯಾಗುವ ವಿಚಾರವೇ ಇಲ್ಲ. ಜನರು ವೋಟು ಕೊಟ್ಟು ಬೆಳೆಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಯಾಗಿಲ್ಲ. ಹೀಗಾಗಿ ಕೆಲಸ ಮಾಡುತ್ತೇನೆ. ಅದಕ್ಕಾಗಿ ಸಿಎಂ ಭೇಟಿಯಷ್ಟೇ" ಎಂದರು.

"ಮಾಜಿ ಸಚಿವ ಡಿ.ಕೆ ಶಿವಕುಮಾರ್ ಕಾನೂನಾತ್ಮಕವಾಗಿ ವ್ಯವಹಾರ ಮಾಡಿದ್ದಾರೆ. ಹೀಗಾಗಿ ಅವರು ಹೊರಬರುವ ವಿಶ್ವಾಸವಿದೆ. ಡಿಕೆಶಿ ಪರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತೇನೆ" ಎಂದು ಮಾಜಿ ಸಚಿವ ಜಿ.ಟಿ ದೇವೇಗೌಡ ತಿಳಿಸಿದರು.
ಹುಣಸೂರಿನಲ್ಲಿ ತಮ್ಮಮಗ ಸ್ಪರ್ಧಿಸುವ ವಿಚಾರದ ಕುರಿತು ಮಾತನಾಡಿ, "ನನ್ನ ಮಗ ಯಾವ ಕ್ಷೇತ್ರದಿಂದಲೂ ಸ್ಪರ್ಧಿಸುತ್ತಿಲ್ಲ. ವಿ.ಸೋಮಣ್ಣ ನನ್ನ ಸ್ನೇಹಿತರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ. ಹೀಗಾಗಿ ಭೇಟಿಯಾಗಿದೆ. ಇದಕ್ಕೆ ಬೇರೆ ಅರ್ಥ ಬೇಡ" ಎಂದರು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications