ಮೇಟಿ ವಿವಾದ, ಸಿದ್ದರಾಮಯ್ಯ ದುಪ್ಪಟ ಎಳೆದಿದ್ದು ಏನಾಯ್ತು?: ಕಟ್ಟಾ ಪ್ರಶ್ನೆ
ಬೆಂಗಳೂರು, ಮಾರ್ಚ್ 6: ತಮ್ಮ ವಿರುದ್ಧ ಅವಹೇಳನಾಕಾರಿ ಮತ್ತು ಸುಳ್ಳು ಮಾಹಿತಿಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ಆರು ಸಚಿವರು ಕೋರ್ಟ್ ಮೆಟ್ಟಿಲೇರಿರುವ ನಡೆಯನ್ನು ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಸಮರ್ಥಿಸಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ಸಚಿವರಿಗೆ ಅವರ ಭಯ ಅವರಿಗೆ ಇರುತ್ತದೆ. ಯಾರು ಯಾವ ರೀತಿ ಸಿಡಿಗಳಲ್ಲಿ ಎಲ್ಲಿ ಇಟ್ಟಿರುತ್ತಾರೋ ಯಾರಿಗೆ ಗೊತ್ತು? ನಕಲಿ ಸಿ.ಡಿ, ಒರಿಜಿನಲ್ ಯಾವುದು ಎಂದು ನಮಗೆ ಗೊತ್ತಿಲ್ಲವಲ್ಲ. ಅದಕ್ಕೋಸ್ಕರ ಕೋರ್ಟ್ಗೆ ಹೋಗಿದ್ದಾರೆ ಎಂದು ಹೇಳಿದರು.
ರಮೇಶ್ ಜಾರಕಿಹೊಳಿ ಅವರದು ಒರಿಜಿನಲ್ ಅಲ್ಲ, ನಕಲಿ ಸಿಡಿ ಎಂದು ಈಗ ಗೊತ್ತಾಗಿದೆಯಲ್ಲ. ಹೀಗಾಗಿ ತಮ್ಮ ಮೇಲೂ ಈ ರೀತಿಯ ನಕಲಿ ಸಿಡಿ ಮಾಡಿಸಿರಬಹುದು ಎಂದು ಆರು ಮಂದಿ ಕೋರ್ಟಿಗೆ ಹೋಗಿದ್ದಾರೆ. ಅವರ ರಾಜಕೀಯ ವಿರೋಧಿಗಳು, ಅವರ ಮೇಲೆ ಷಡ್ಯಂತ್ರ ಮಾಡುವವರು ಈ ಕೃತ್ಯ ಮಾಡಿರಬಹುದು' ಎಂದು ಕಟ್ಟಾ ಅಭಿಪ್ರಾಯಪಟ್ಟರು.
ಯಾರು ಹೆದರಿಸಿರುತ್ತಾರೋ..
'ಪ್ರತಿಯೊಬ್ಬರಿಗೂ ಒಂದೊಂದು ರೀತಿಯ ಸಂಕಷ್ಟ ಬರುತ್ತದೆ. ಅವರನ್ನು ಯಾರು, ಯಾವ ರೀತಿ ಹೆದರಿಸಿರುತ್ತಾರೋ, ಬ್ಲಾಕ್ಮೈಲ್ ಮಾಡಿರುತ್ತಾರೋ ಯಾರಿಗೆ ಗೊತ್ತು? ಅದಕ್ಕಾಗಿಯೇ ನ್ಯಾಯಾಲಯಕ್ಕೆ ಹೋಗಿದ್ದಾರೆ' ಎಂದು ಕಟ್ಟಾ ಸುಬ್ರಮಣ್ಯ ನಾಯ್ಡು ಹೇಳಿದರು.

ರಾಜೀನಾಮೆ ವಾಪಸ್ ಆಗಲಿದೆ
'ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ಕೊಟ್ಟಿದ್ದು ಸರಿಯಾಗಿದೆ. ಅದರ ನಂತರದ ಕ್ರಮದ ಬಗ್ಗೆ ಯಡಿಯೂರಪ್ಪ, ಕೇಂದ್ರದ ನಾಯಕರು ಯೋಚನೆ ಮಾಡುತ್ತಾರೆ. ಮುಂದೆ ಆ ರಾಜೀನಾಮೆಯನ್ನು ವಾಪಸ್ ತೆಗೆದುಕೊಳ್ಳುತ್ತಾರೆ' ಎಂದು ಭರವಸೆ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಮೇಲೂ ಆರೋಪ
ಎಲ್ಲರ ಕಾಲದಲ್ಲೂ ಈ ರೀತಿ ಆರೋಪ ಬಂದಿವೆ ಮತ್ತು ಅವರು ದೋಷ ಮುಕ್ತರಾಗಿದ್ದಾರೆ. ಮೇಟಿ ಅವರ ಪ್ರಕರಣ ಸಿದ್ದರಾಮಯ್ಯ ಕಾಲದಲ್ಲಿ ಬಂದಿತ್ತು. ಸಿದ್ದರಾಮಯ್ಯ ದುಪ್ಪಟ ಎಳೆದರು ಏನಾಯ್ತು? ಸರ್ಕಾರಗಳಲ್ಲಿ ಈ ರೀತಿಯ ಆರೋಪಗಳು ಬಂದಿವೆ, ಎಲ್ಲರೂ ನಿರ್ದೋಷಿಗಳೆಂದು ಹೊರಬಂದಿದ್ದಾರೆ. ರಮೇಶ್ ಅವರೂ ನಿರ್ದೋಷಿಯೆಂದು ಹೊರಬರುತ್ತಾರೆ. ಇದರ ಬಗ್ಗೆ ಜಾಸ್ತಿ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ತಿಳಿಸಿದರು.

ಆತ್ಮರಕ್ಷಣೆ ಅವರೇ ಮಾಡಿಕೊಳ್ಳಬೇಕಿದೆ
ನ್ಯಾಯಾಲಯಕ್ಕೆ ಹೋಗದೆ ಇನ್ನು ಏನು ಮಾಡೋಕೆ ಆಗುತ್ತದೆ? ಅವರವರ ರಕ್ಷಣೆಯನ್ನು ಅವರೇ ಮಾಡಿಕೊಳ್ಳುವ ಕಾಲ ಬಂದಿದೆ. ಯಾರು ಬೇಕಾದರೂ ನಕಲಿ ಸಿಡಿ ಮಾಡುತ್ತಾರೆ. ಇಲ್ಲಿ ಒಬ್ಬರ ಮೇಲೊಬ್ಬರು ಕೆಸರೆರಚಾಟ ಮಾಡಲು ಸಿದ್ದರಾಗಿದ್ದಾರೆ. ಹೀಗಾಗಿ ಅವರು ಕೂಡ ಮೊದಲೇ ಸಿದ್ಧರಾಗಿ ಕೋರ್ಟಿಗೆ ಹೋಗಿದ್ದಾರೆ. ಅವರ ಮೇಲೂ ಇಂತಹ ನಕಲಿ ಸಿಡಿ ಇವೆ ಎಂದು ಯಾರಾದರೂ ಹೇಳಿರುತ್ತಾರೆ. ಅದಕ್ಕಾಗಿ ಹೋಗಿರಬಹುದು ಎಂದು ಸಚಿವರನ್ನು ಸಮರ್ಥಿಸಿಕೊಂಡರು.
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್












Click it and Unblock the Notifications