ನಾಗರ ಪಂಚಮಿ ಮಾಡುತ್ತಾ, ಹಬ್ಬದಲ್ಲೆಲ್ಲಾ ನಲಿಯುತ್ತಾ
ಬೆಂಗಳೂರು, ಆಗಸ್ಟ್, 19 : ನಾಗರ ಪಂಚಮಿ ಆಹ..ಆಹ..ನಾರಿಯರೆಲ್ಲಾ ಓಹೋ..ಓಹೋ..ನಲಿ ನಲಿಯುತಲಿ ಓಹೋ..ಓಹೋ..ಈ ಹಾಡನ್ನು ನೀವು ಕೇಳಿಯೇ ಇರ್ತಿರಾ..ಹೌದು ಇದು ನಾಗರ ಪಂಚಮಿ ಕುರಿತಾದ ನಮ್ಮ ಅಪ್ಪಟ್ಟ ಕನ್ನಡ ಹಾಡು...
ನಾಗರ ಪಂಚಮಿ ಹಾಗೂ ಹಬ್ಬ ಹರಿದಿನಗಳಲ್ಲಿ ಮುಂಚೂಣಿಯಲ್ಲಿರುವ ನಾರಿಯರ ಸಂಭ್ರಮ ಕುರಿತಾದ ಸೊಗಸಾದ ಗಾಯನ. ನಮ್ಮ ನಾಡಲ್ಲಿ ಶ್ರಾವಣ ಮಾಸದ ಮೊದಲ ಹಬ್ಬವೇ ನಾಗರ ಪಂಚಮಿ. ನಾಗರ ಹಾವು, ಹುತ್ತಗಳಿಗೆ ಹಾಲು ಎರೆದು ಪೂಜೆ ಮಾಡುವುದರ ಮೂಲಕ ಬಹಳ ವಿಶೇಷವಾಗಿ ಈ ಹಬ್ಬ ಆಚರಿಸಲಾಗುತ್ತದೆ.
ಶ್ರಾವಣ ಶುಕ್ಲ ಪಂಚಮಿ ತಿಥಿಯಂದು ಆರಂಭವಾಗುವ ನಾಗರ ಪಂಚಮಿಯ ವಿಶೇಷ, ವಿಭಿನ್ನತೆಗಳನ್ನು ನೀವು ತಿಳಿದುಕೊಳ್ಳಬೇಕಾ? ಹಾಗಾದರೆ ಈ ಲೇಖನ ಓದಿ..ಪಂಚಮಿ ಸಂಭ್ರಮದಲ್ಲಿ ನೀವು ಪಾಲ್ಗೊಳ್ಳಿ...[ಸರ್ಪದೋಷ ಪರಿಹಾರ ಪೂಜೆ ಯಾವ ದೇವಾಲಯಗಳಲ್ಲಿ?]

ಪಂಚಮಿ ಇತಿಹಾಸವೇನು ?
ಆಸ್ತಿಕ ಋಷಿಯು ಸರ್ಪಯಜ್ಞ ಮಾಡುವ ಜನಮೇಜಯ ರಾಜನನ್ನು ಪ್ರಸನ್ನಗೊಳಿಸಿಕೊಂಡನು. ಆಗ ಜನಮೇಜಯ ರಾಜನು ವರವನ್ನು ಕೇಳು ಎಂದು ನುಡಿಯುತ್ತಾನೆ. ಆ ಸಂದರ್ಭದಲ್ಲಿ ಆಸ್ತಿಕನು ಸರ್ಪ ಯಜ್ಞವನ್ನು ನಿಲ್ಲಿಸಬೇಕು ಎಂದು ಕೇಳುತ್ತಾನೆ. ಜನಮೇಜಯನು ಸರ್ಪಯಜ್ಞವನ್ನು ನಿಲ್ಲಿಸಿದ ದಿನ ಪಂಚಮಿ ಹಬ್ಬವಾಗುತ್ತದೆ.
ಏನಿದು ನಾಗರ ಪಂಚಮಿ?
ನಾಗರ ಪಂಚಮಿ ಸಾತ್ವಿಕತೆ ಗ್ರಹಿಸಲು ಉಪಯುಕ್ತ ಕಾಲ ಪಂಚಪ್ರಾಣಗಳೇ ಪಂಚನಾಗಗಳಾಗಿವೆ. ನಾಗರ ಪಂಚಮಿಯ ದಿನದಲ್ಲಿ ವಾತಾವರಣವು ಸ್ಥಿರವಾಗಿರುತ್ತದೆ. ಸಾತ್ವಿಕತೆಯನ್ನು ಗ್ರಹಿಸಲು ಈ ಕಾಲವು ಅತ್ಯಂತ ಯೋಗ್ಯ ಮತ್ತು ಬಹಳ ಉಪಯುಕ್ತವಾಗಿದೆ.
ಏನೆಂದು ಪ್ರಾರ್ಥನೆ ಮಾಡಬೇಕು?
ಈ ದಿನದಂದು ಶೇಷನಾಗ ಮತ್ತು ಶ್ರೀ ವಿಷ್ಣುವಿಗೆ ಮುಂದಿನಂತೆ ಪ್ರಾರ್ತನೆ ಮಾಡಬೇಕು. ತಮ್ಮ ಕೃಪೆಯಿಂದ ಈ ದಿನದಂದು ಶಿವ ಲೋಕದಿಂದ ಪ್ರಕ್ಷೇಪಿತನಾಗುವ ಲಹರಿಗಳು ನನ್ನಿಂದ ಹೆಚ್ಚೆಚ್ಚು ಗ್ರಹಣವಾಗಲಿ. ನನ್ನ ಆಧ್ಯಾತ್ಮಿಕ ಪ್ರಗತಿಗೆ ಎದುರಾಗುವ ಎಲ್ಲ ಅಡಚಣೆಗಳೂ ನಾಶವಾಗಲಿ,. ದೇವತೆಗಳ ಶಕ್ತಿಯೂ ನನ್ನ ಪಂಚಪ್ರಾಣಗಳಲ್ಲಿ ಸಂಗ್ರಹವಾಗಿ ಅದು ಈಶ್ವರ ಪ್ರಾಪ್ತಿಗಾಗಿ ಮತ್ತು ರಾಷ್ಟ್ರ ರಕ್ಣಣೆಗಾಗಿ ಉಪಯೋಗವಾಗಲಿ. ನನ್ನ ಪಂಚಪ್ರಾಣ ಶುದ್ದಿಯಾಗಲಿ.
ನಾಗದೇವತೆಯು ಸಂಪೂರ್ಣ ಬ್ರಹ್ಮಾಂಡ ಕುಂಡಲಿಯಾಗಿದ್ದಾನೆ. ಪಂಚಪ್ರಾಣವೆಂದರೆ ಪಂಚಬೌತಿಕ ತತ್ತ್ವದಿಂದ ಉಂಟಾದ ಶರೀರದ ಸೂಕ್ಷಕಮ ರೂಪವಾಗಿದೆ. ಸ್ಥೂಲದೇಹವು ಪ್ರಾಣ ಹೀನವಾಗಿದೆ ಮತ್ತು ಸ್ಥೂಲ ದೇಹದಲ್ಲಿ ಚಲಿಸುವ ಪ್ರಾಣವಾಯುವು ಪಂಚಪ್ರಾಣದಿಂದ ಬರುತ್ತದೆ.
ನಾಗರಪಂಚಮಿಯಂದು ಮಾಡುವ ಉಪವಾಸದ ಮಹತ್ವವೇನು?
ಐದು ಯುಗಗಳ ಹಿಂದೆ ಸತ್ಯೇಶ್ವರಿ ಎಂಬ ಹೆಸರಿನ ದೇವಿಯಿದ್ದಳು. ಸತ್ಯೇಶ್ವರ ಅವಳ ಸಹೋದರನಾಗಿದ್ದನು. ಸತ್ಯೇಶ್ವರನು ನಾಗರ ಪಂಚಮಿಯ ಹಿಂದಿನ ದಿನ ಮೃತ್ಯು ಹೊಂದಿದನು. ಆಗ ಸಹೋದರನ ಮೃತ್ಯುವಿನ ಶೋಕದಲ್ಲಿ ಸತ್ಯೇಶ್ವರಿ ಆಹಾರ ಸ್ವೀಕರಿಸುವುದಿಲ್ಲ. ಆದುದರಿಂದ ಆ ದಿನ ಸ್ತ್ರೀಯರು ಸಹೋದರನ ಹೆಸರಿನಲ್ಲಿ ಉಪವಾಸ ಮಾಡುತ್ತಾರೆ.
ಸಹೋದರನಿಗೆ ಸಖಂಡ ಆಯುಷ್ಯವು ದೊರಕಲಿ, ಅನೇಕ ಆಯುಧಗಳು ಪ್ರಾಪ್ತವಾಗಲಿ ಮತ್ತು ಅವನು ದುಃಖ ಸಂಕಟಗಳಿಂದ ಪಾರಾಗಲಿ ಎನ್ನುವುದು ಸಹ ಈ ಉಪವಾಸದ ಹಿಂದಿನ ಕಾರಣವಾಗಿದೆ. ನಾಗರ ಪಂಚಮಿ ದಿನದಂದು ಪ್ರತಿಯೊಬ್ಬ ಸಹೋದರಿ ದೇವರಲ್ಲಿ ಮೊರೆ ಇಡುವುದರಿಂದ ಅವಳ ಸಹೋದರನಿಗೆ ಲಾಭವಾಗುತ್ತದೆ ಮತ್ತು ಅವನ ರಕ್ಷಣೆಯಾಗುತ್ತದೆ. ಹಾಗಾಗಿ ಇದು ರಕ್ಷಾ ಬಂಧನದಂತೆ ಇದನ್ನು ಅಣ್ಣ ತಂಗಿಯರ ಹಬ್ಬವೆಂದೇ ಭಾವಿಸುವುದುಂಟು.
ನಾಗ ಪೂಜೆಯ ಹಿಂದಿನ ಶಾಸ್ತ್ರವೇನು?
ಸತ್ಯೇಶ್ವರಿಗೆ ಅವಳ ಸಹೋದರನು ನಾಗನ ರೂಪದಲ್ಲಿ ಕಂಡನು. ಆಗ ಅವಳು ಆ ನಾಗರೂಪವನ್ನು ತನ್ನ ಸಹೋದರನೆಂದು ಭಾವಿಸಿದಳು. ಆಗ ನಾಗಬದೇವನು, ನನ್ನನ್ನು ಸಹೋದರನೆಂದು ಭಾವಿಸಿ ಪೂಜೆ ಮಾಡಿದ ಸಹೋದರಿಯ ರಕ್ಷಣೆಯನ್ನು ನಾನು ಮಾಡುವೆನು ಎಂದು ಅವಳಿಗೆ ವಚನ ನೀಡಿದನು. ಹಾಗಾಗಿ ಸ್ತ್ರೀಯರು ನಾಗರ ಪಂಚಮಿಯನ್ನು ಆಚರಿಸುತ್ತಾರೆ.[ನಾಗರ ಪಂಚಮಿ ನಿಮಿತ್ತ ಆಶ್ಲೇಷ ಬಲಿ, ನಾಗ ತನು ತರ್ಪಣ]

ನಾಗನ ಮಹಾತ್ಮೆ?
1. ಶೇಷನಾಗನು ಪಾತಾಳದಲ್ಲಿ ವಾಸಿಸುತ್ತಾನೆ. ಅವನು ತನ್ನ ಹೆಡೆಯ ಮೇಲೆ ಪೃಥ್ವಿಯನ್ನು ಧರಿಸಿದ್ದಾನೆ. ಅವನಿಗೆ ಸಹಸ್ರ ಹೆಡೆಗಳಿವೆ. ಪ್ರತಿಯೊಂದು ಹೆಡೆಯ ಮೇಲೆ ಒಂದು ವಜ್ರವಿದೆ. ಅವನು ಶ್ರೀ ವಿಷ್ಣುವಿನ ತಮೋಗುಣದಿಂದ ಉತ್ಪನ್ನವಾಗಿದ್ದಾನೆ.
ಪ್ರತಿಯೊಂದು ಕಲ್ಪದ ಅಂತ್ಯದಲ್ಲಿ ಶ್ರೀ ವಿಷ್ಣು ಮಹಾಸಾಗರದಲ್ಲಿ ಶೇಷಾಸನದ ಮೇಲೆ ಶಯನ ಮಾಡುತ್ತಾನೆ. ತ್ರೇತಾಯುಗದಲ್ಲಿ ಶ್ರೀ ವಿಷ್ಣು ರಾಮನಾಗಿ, ಶೇಷನು ಲಕ್ಷ್ಮಣನಾಗಿ ಅವತಾರ ತೆಗೆದುಕೊಂಡರು. ದ್ವಾಪರ ಮತ್ತು ಕಲಿಯುಗದ ಸಂಧಿಕಾಲದಲ್ಲಿ ಕೃಷ್ಣನ ಅವತಾರವಾದಾಗ ಶೇಷನು ಬಲರಾಮನಾದನು.
2. ಶ್ರೀ ಕೃಷ್ಣನು ಯಮುನಾ ನದಿಯ ಆಳದಲಿದ್ದ ಕಾಳಿಂಗ ನಾಗನನ್ನು ಮರ್ದನ ಮಾಡಿದನು. ಆ ದಿನವು ಶ್ರಾವಣ ಶುಕ್ಲ ಪಂಚಮಿಯಾಗಿತ್ತು.
3. ನಾಗಗಳಲ್ಲಿ ಶ್ರೇಷ್ಠನಾದ ಅನಂತನೇ ನಾನು, ಎಂದು ಗೀತೆಯಲ್ಲಿ (10.20) ಶ್ರೀಕೃಷ್ಣ ತನ್ನ ವಿಭೂತಿಯನ್ನು ಹೇಳುತ್ತಾನೆ.
ಅನಂತಂ ವಾಸುಕಿಂ ಶೇಷಂ ಪದ್ಮನಾಭಂ ಚ ಕಂಬಲಮ್ |
ಶಂಖಪಾಲಂ ಧೃತರಾಷ್ಟ್ರಂ ತಕ್ಷಕಂ, ಕಾಲಿಯಂ ತಥಾ | |
ಅನಂತ ವಾಸುಕೀ, ಶೇಷ ಪದ್ಮನಾಭ ಕಂಬಲ, ಶಂಖಪಾಲ, ಧೃತರಾಷ್ಟ್ರ, ತಕ್ಷಕ ಮತ್ತು ಕಾಲಿಯಾ ಹೀಗೆ 9 ರೀತಿಯ ನಾಗಗಳ ಆರಾಧನೆ ಮಾಡುತ್ತಾರೆ. ಇದರಿಂದ ಸರ್ಪ ಭಯವಿರುವುದಿಲ್ಲ ಮತ್ತು ವಿಷದಿಂದ ತೊಂದರೆಯಾಗುವುದಿಲ್ಲ.
ಪೂಜೆ ಹೇಗೆ ಮಾಡುವುದು?
ನಾಗರ ಪಂಚಮಿಯ ದಿನ ಅರಿಶಿನ ಅಥವಾ ರಕ್ತ ಚಂದನದಿಂದ ಮಣೆಯ ಮೇಲೆ ನವನಾಗಗಳ ಆಕೃತಿಗಳನ್ನು ಬಿಡಿಸಿ ಅವುಗಳ ಪೂಜೆಯನ್ನು ಮಾಡಿ ಹಾಲು ಮತ್ತು ಅರಳಿನ ನೈವೇದ್ಯವನ್ನು ಅರ್ಪಿಸಬೇಕು. ನವನಾಗಗಳು ಪವಿತ್ರಕಗಳ ಒಂಬತ್ತು ಪ್ರಮುಖ ಗುಂಪುಗಳಾಗಿವೆ. ಪವಿತ್ರಕಗಳೆಂದರೆ ಸೂಕ್ಷ್ಮಾತಿಸೂಕ್ಷ್ಮ ದೈವೀ ಕಣಗಳು (ಚೈತನ್ಯ ಕಣಗಳು).
ಜಗತ್ತಿನಲ್ಲಿರುವ ಎಲ್ಲ ಜೀವ ಜಂತುಗಳು ಜಗತ್ತಿನ ಕಾರ್ಯಕ್ಕಾಗಿ ಪೂರಕವಾಗಿದೆ. ನಾಗರ ಪಂಚಮಿ ದಿನ ನಾಗಗಳನ್ನು ಪೂಜೆ ಮಾಡುವುದರಿಂದ ಭಗವಂತನು ಅವುಗಳ ಮೂಲಕ ಎಲ್ಲಾ ಕಾರ್ಯವನ್ನು ಮಾಡುತ್ತಿದ್ದಾನೆ ಎಂಬ ನಂಬಿಕೆ ಇದೆ.
ನಿಷೇಧ :
ನಾಗರ ಪಂಚಮಿ ದಿನ ಯಾವುದೇ ಪದಾರ್ಥಗಳನ್ನು ಹೆಚ್ಚಬಾರದು, ಕೊಯ್ಯಬಾರದು, ತಿಂಡಿಗಳನ್ನು ಕರಿಯಬಾರದು, ಒಲೆ ಮೇಲೆ ತವೆ ಇಡಬಾರದು, ಭೂಮಿ ಅಗೆಯಬಾರದು ಹೀಗೆ ಈ ದಿನ ಮುಂತಾದ ನಿಯಮಗಳನ್ನು ಪಾಲಿಸಲಾಗುತ್ತದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications