ಮಲ್ಲೇಶ್ವರಂ ಜನರ ಸಮಸ್ಯೆಗೆ ಸ್ಪಂದಿಸಲು ವೆಬ್ಸೈಟ್
ಬೆಂಗಳೂರು, ಆ.20 : ಮಲ್ಲೇಶ್ವರಂ ಕ್ಷೇತ್ರದಲ್ಲಿ ಸಮಸ್ಯೆಗಳಿವೆಯೇ ತಕ್ಷಣ ವೆಬ್ಸೈಟ್ಗೆ ಭೇಟಿ ಕೊಟ್ಟು ದೂರು ನೀಡಿ. ಹೌದು ಕ್ಷೇತ್ರದ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಮಲ್ಲೇಶ್ವರಂ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಮಲ್ಲೇಶ್ವರಂ.ಸಹಾಯ.ಇನ್ ವೆಬ್ಸೈಟ್ ಆರಂಭಿಸಿದ್ದಾರೆ.
ಮಂಗಳವಾರ ಈ ನೂತನ ವೆಬ್ಸೈಟ್ಗೆ ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಸಂತೋಷ್ ಚಾಲನೆ ನೀಡಿದ್ದಾರೆ. ಆಧುನಿಕ ಕಾಲಘಟ್ಟದಲ್ಲಿ ಜನರಿಗೆ ಕಚೇರಿಗೆ ತೆರಳಿ, ಮನವಿ ಪತ್ರ ಸಲ್ಲಿಸಲು ಸಮಯದ ಕೊರತೆ ಇದೆ. ಆದ್ದರಿಂದ ವೆಬ್ಸೈಟ್ ವ್ಯವಸ್ಥೆ ಜನರಿಗೆ ಸಹಕಾರಿಯಾಗಲಿದೆ ಎಂದು ಸಂತೋಷ್ ಹೇಳಿದರು.

ಜನರು ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ವೆಬ್ಸೈಟ್ ಆರಂಭಿಸಲಾಗಿದೆ ಎಂದು ಡಾ.ಸಿ.ಎನ್.ಅಶ್ವತ್ಥನಾರಾಯಣ್ ಹೇಳಿದ್ದಾರೆ. ಜನರು ಬಿಬಿಎಂಪಿ ಸಮಸ್ಯೆ ಬಗ್ಗೆ ಜಲಮಂಡಳಿಗೆ ದೂರು ನೀಡುತ್ತಾರೆ ಆದ್ದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಇದನ್ನು ತಪ್ಪಿಸಲು ವೆಬ್ಸೈಟ್ ವ್ಯವಸ್ಥೆ ರೂಪಿಸಲಾಗಿದೆ ಎಂದು ತಿಳಿಸಿದರು. [ಮಲ್ಲೇಶ್ವರಂ.ಸಹಾಯ.ಇನ್ ವೆಬ್ ಸೈಟ್]
ದೂರು ನೀಡುವುದು ಹೇಗೆ ? : ದೂರು ನೀಡಬೇಕಾದ ಜನರು ಮೊದಲು ವೆಬ್ಸೈಟ್ ಭೇಟಿ ನೀಡಿ ಲಾಗಿನ್ ಆಗಬೇಕು. ನಂತರ ತಮ್ಮ ವಾರ್ಡ್, ಸಮಸ್ಯೆ ಯಾವುದು, ಯಾವ ಇಲಾಖೆಗೆ ಸಂಬಂಧಿಸಿದ್ದು ಮುಂತಾದ ವಿವರಗಳನ್ನು ಒದಗಿಸಬೇಕು. ಸಮಸ್ಯೆಯ ಬಗ್ಗೆ ಛಾಯಾಚಿತ್ರಗಳನ್ನು ಇಲ್ಲಿ ಹಾಕಲು ಅವಕಾಶವಿದೆ. ಈ ದೂರನ್ನು ಸಂಬಂಧಿಸಿದ ಅಧಿಕಾರಿಗೆ ಕಳುಹಿಸುವ ವ್ಯವಸ್ಥೆ ಇದೆ. ಸಮಸ್ಯೆ ಬಗೆಹರಿಯುವ ತನಕ ಅದರ ಬಗ್ಗೆ ಗಮನ ಇಡುವ ವ್ಯವಸ್ಥೆಯನ್ನು ರೂಪಿಸಲಾಗಿದೆ.
ನಾಗರಿಕರು ಸಮಸ್ಯೆ ಬಗೆಹರಿಯದೆ ಇದ್ದಲ್ಲಿ ಮತ್ತೆ ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅಶ್ವತ್ಥನಾರಾಯಣ್ ಹೇಳಿದ್ದಾರೆ. ಆರಂಭಿಕ ಹಂತದಲ್ಲಿ ಬಿಬಿಎಂಪಿ, ಜಲಮಂಡಳಿಯ ಸೇವೆಗಳನ್ನು ವೆಬ್ಸೈಟ್ನಲ್ಲಿ ಒದಗಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ












Click it and Unblock the Notifications