10 ಲಕ್ಷಕ್ಕೂ ಹೆಚ್ಚು ಅಗರಬತ್ತಿ ಉದ್ಯಮೆದಾರರಿಗೆ ಬಿಗ್ ರಿಲೀಫ್..!
ಬೆಂಗಳೂರು, ಮೇ 27: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಅಖಿಲ ಭಾರತೀಯ ಅಗರಬತ್ತಿ ಉತ್ಪಾದಕರು ಕೃತಜ್ಞತೆ ಸಲ್ಲಿಸಿದ್ದಾರೆ. ಅಗರಬತ್ತಿ ಉದ್ಯಮಕ್ಕೆ ಬಳಸುತ್ತಿದ್ದ ಬಿದಿರು ಕಡ್ಡಿಗಳನ್ನ 'ಪ್ಲಾಂಟ್ ಕ್ವಾರಂಟೇನ್' ಪರೀಕ್ಷೆಗೆ ಒಳಪಡಿಸಬೇಕಾದ ಪರಿಣಾಮ, ಅಗರಬತ್ತಿ ಉದ್ಯಮಕ್ಕೆ ಅಗತ್ಯವಾದ ಬಿದಿರು ಕಡ್ಡಿಗಳು ತಕ್ಕ ಸಮಯಕ್ಕೆ ಸರಿಯಾಗಿ ಪೂರೈಕೆಯಾಗದೆ ಸಮಸ್ಯೆ ಅನುಭವಿಸುವಂತಾಗಿತ್ತು. ಈ ಸಮಸ್ಯೆಯಿಂದ 10 ಲಕ್ಷಕ್ಕೂ ಹೆಚ್ಚು ಅಗರಬತ್ತಿ ಉದ್ಯಮ ಜನರಿಗೆ ಪೆಟ್ಟುಬಿದ್ದಿದ್ದರಿಂದ ಅಗರಬತ್ತಿ ಉದ್ಯಮಕ್ಕೆ ಅಗತ್ಯದ ವಿನಾಯಿತಿಯ್ತಿ ಕೋರಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರ ಬರೆದು ಮನವಿ ಸಲ್ಲಿಸಲಾಗಿತ್ತು.
ಅಖಿಲ ಭಾರತೀಯ ಅಗರಬತ್ತಿ ಉತ್ಪಾದಕರ ಸಮಸ್ಯೆಗೆ ಸ್ಪಂದಿಸಿ ಅಗರಬತ್ತಿ ಉದ್ಯಮದ ಸಮಸ್ಯೆಯನ್ನು ಮನಗಂಡ ಕೇಂದ್ರ ಸಚಿವೆ ತಕ್ಷಣವೇ ಕೇಂದ್ರ ಕೃಷಿ ಇಲಾಖೆಯ ಪ್ಲಾಂಟ್ ಕ್ವಾರಂಟೈನ್ ವಿಭಾಗಕ್ಕೆ ಸೂಚನೆ ನೀಡಿ, ಅಗರಬತ್ತಿ ಉದ್ಯಮಕ್ಕೆ ಅಗತ್ಯದ ವಿನಾಯಿತಿಯನ್ನು ನೀಡುವಂತೆ ಆದೇಶಿಸಿದರು. ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆಯವರ ಸೂಚನೆಯಂತೆ ಕೇಂದ್ರ ಕೃಷಿ ಇಲಾಖೆಯು 6.00mm ಕೆಳಗಿನ ಬಿದಿರು ಕಡ್ಡಿಗಳಿಗೆ ಪ್ಲಾಂಟ್ ಕ್ವಾರಂಟೈನ್ ಪ್ರಕ್ರಿಯೆಯಿಂದ ವಿನಾಯ್ತಿ ನೀಡಿದ್ದರಿಂದ ಅಗರಬತ್ತಿ ಉದ್ದಿಮೆದಾರರು ಖುಷಿಯಾಗಿದ್ದಾರೆ.

ಕಾರ್ಮಿಕ ಆಧಾರಿತ ಉದ್ಯಮವಾದ ಅಗರಬತ್ತಿ ನಿರ್ಮಾಣಕ್ಕೆ ಅಗತ್ಯದ ಕಚ್ಚಾ ವಸ್ತುವಾದ ಬಿದಿರು ಕಡ್ಡಿ ಹೊರದೇಶದಿಂದ ಅಮದುಗೊಳ್ಳುತ್ತಿತ್ತು. ಆದರೆ ಕೇಂದ್ರ ಸರಕಾರದ ಆಮದು ನಿಯಮಗಳ ಪ್ರಕಾರ ಈ ಬಿದಿರು ಕಡ್ಡಿಗಳು 'ಪ್ಲಾಂಟ್ ಕ್ವಾರಂಟೇನ್' ಪರೀಕ್ಷೆಗೆ ಒಳ ಪಡಬೇಕಾದ ಅನಿವಾರ್ಯತೆಯಿಂದ ಸರಿಯಾದ ಸಮಯಕ್ಕೆ ಬಿದಿರು ಸಿಗದ ಕಾರಣ ಅಗರಬತ್ತಿ ಉದ್ಯಮದಲ್ಲಿ ಸಮಸ್ಯೆಗೆ ಉಂಟಾಗಿತ್ತು. ಈ ಸಮಸ್ಯೆಯಿಂದ ಸುಮಾರು 10 ಲಕ್ಷಕ್ಕೂ ಹೆಚ್ಚಿನ ಜನರು ಅಗರಬತ್ತಿ ಉದ್ಯಮ ಕಚ್ಚಾವಸ್ತುವಿನ ಕೊರತೆಗೆ ತುತ್ತಾಗಿದ್ದರು.

ಸದ್ಯ ಕೇಂದ್ರ ಕೃಷಿ ಇಲಾಖೆಯಿಂದ ಅಗರಬತ್ತಿ ಉದ್ಯಮಕ್ಕೆ ವಿನಾಯ್ತಿ ಸಿಕ್ಕಿದ್ದರಿಂದ ಫುಲ್ ಖುಷಿಯಾಗಿದ್ದಾರೆ. ತಮ್ಮ ಮನವಿಗೆ ಸ್ಪಂದಿಸಿದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಅಖಿಲ ಭಾರತೀಯ ಅಗರಬತ್ತಿ ಉತ್ಪಾದಕರ ಸಂಘ ಕೃತಜ್ಞತೆ ಸಲ್ಲಿಸಿದ್ದಾರೆ.
Recommended Video
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications