ಫಿಡಿಲಿಟಸ್ ಗ್ಯಾಲರಿಯಲ್ಲಿ 'ಮಿಸ್ಟಿಕ್ ಜರ್ನಿ' ಚಿತ್ರ ಪ್ರದರ್ಶನ ಆರಂಭ
ಬೆಂಗಳೂರು, ಸೆಪ್ಟೆಂಬರ್ 03: ನಗರದ ಬನಶಂಕರಿಯ ಫಿಡೆಲಿಟಸ್ ಗ್ಯಾಲರಿಯಲ್ಲಿ ಖ್ಯಾತ ಚಿತ್ರ ಕಲಾವಿದ ರವಿ ಕೋಟೆಗದ್ದೆಯವರ ವಿಭಿನ್ನ ಕಲಾ ಕೃತಿಗಳ ಚಿತ್ರ ಪ್ರದರ್ಶನ ಪ್ರಾರಂಭವಾಗಿದ್ದು ಚಿತ್ರ ಪ್ರದರ್ಶನವನ್ನು ಫ್ರೀಡಂ ಆಪ್ ಸಂಸ್ಥಾಪಕರಾದ ಸಿ.ಎಸ್ ಸುಧೀರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸುಧೀರ್ "ಪ್ರತಿಯೊಬ್ಬರಿಗೂ ಕೂಡಾ ಬೇರೆ ಬೇರೆ ರೀತಿಯ ಕಲ್ಪನೆಗಳು ಇರುತ್ತವೆ. ಆದರೆ ಕಲ್ಪನೆಗಳಿಗೂ ಮೀರಿದ ಯೋಚನೆಗಳು ಬರುವುದು ರವಿ ಕೋಟೆಗದ್ದೆಯವರಿಂದ ಮಾತ್ರ. ಕಲಾವಿದ ತನ್ನ ಕೃತಿಗಳ ಅಂದಕ್ಕಿಂತ ತನ್ನ ಕಲ್ಪನೆಗಳನ್ನು ಜಗತ್ತಿಗೆ ಸಾರುವ ಪರಿಯೇ ಬೇರೆ ಇರುತ್ತದೆ. ಹಾಗಾಗಿಯೇ ಮೆದುಳಿನ ಬೆಳವಣಿಗೆ ಹಾಗೂ ಏಕಾಗ್ರತೆಗೆ ಇಂತಹ ಕಲಾಕೃತಿಗಳು ಸಹಾಯಕವಾಗುತ್ತವೆ. ಇದರಿಂದಲೇ ಈತರದ ಕಲಾ ಕೃತಿಗಳನ್ನು ಶಾಲಾ ಮಟ್ಟದಲ್ಲೇ ಮಕ್ಕಳಿಗೆ ಪ್ರದರ್ಶಿಸಿ ಅವುಗಳ ಬಗ್ಗೆ ಯೋಚನೆ ಮಾಡಿಸಿ ಮಕ್ಕಳ ಯೋಚನಾ ಶಕ್ತಿಯನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಿದೆ. ಮಾತ್ರವಲ್ಲದೇ ಇಂತಹ ಅದ್ಭುತ ಕಲಾವಿದರನ್ನು ಮತ್ತು ಅವರ ಕಲೆಗಳನ್ನು ಸಂಘ ಸಂಸ್ಥೆಗಳು ಮತ್ತು ಸರಕಾರಗಳು ಹೆಚ್ಚು ಉತ್ತೇಜನ ನೀಡಿ ಬೆಳೆಸಬೇಕಿದೆ " ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸುಮಂತ್ & ಅಸೋಸಿಯೇಟ್ಸ್ ಇದರ ವ್ಯವಸ್ಥಾಪಕ ನಿರ್ದೇಶಕ ಸುಮಂತ್ ಅಶೋಕ್, ಗುಲಾಬ್ ಪ್ರೊಡಕ್ಷನ್ಸ್ ನಿರ್ಮಾಪಕ ಕೆ.ಆರ್ ಕೃಷ್ಣ, ಹಿರಿಯ ಚಿತ್ರ ಕಲಾವಿದರೂ ಚಿತ್ರ ವಿಮರ್ಶಕರೂ ಆಗಿರುವ ಚಿ.ಸು ಕೃಷ್ಣ ಸೆಟ್ಟಿ ಫಿಡಿಲಿಟಸ್ ಸಂಸ್ಥೆಯ ಸಂಸ್ಥಾಪಕರಾದ ಅಚ್ಚುತ್ ಗೌಡ, ಹಾಗೂ ಇತರರು ಭಾಗವಹಿಸಿದ್ದರು.
ಇನ್ನು ಇಂದು ಆರಂಭಗೊಂಡ ಚಿತ್ರ ಪ್ರದರ್ಶನ ಸೆಪ್ಟೆಂಬರ್ 12ರ ತನಕ ಪ್ರತಿದಿನ ಬೆಳಗ್ಗೆ 10ರಿಂದ ಸಂಜೆ 7ರ ತನಕ ನಡೆಯಲಿದೆ. ಕಲಾಕೃತಿಗಳನ್ನು ಕೊಂಡುಕೊಳ್ಳಲು ಇಚ್ಛಿಸುವವರು ಹಾಗೂ ಚಿತ್ರ ಪ್ರೇಮಿಗಳು ಪ್ರದರ್ಶನ ವೀಕ್ಷಣೆಗೆ ಬನಶಂಕರಿ ಎರಡನೇ ಹಂತದಲ್ಲಿರುವ ಫಿಡಿಲಿಟಸ್ ಗ್ಯಾಲರಿಗೆ ಭೇಟಿ ನೀಡಬಹುದು.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications