ಬೆಳ್ಳಂದೂರು, ವರ್ತೂರು ಕೆರೆಗಳ ಪರಿಶೀಲನೆ ಪೂರ್ಣ: ಏ.20ಕ್ಕೆ ವರದಿ ಸಾಧ್ಯತೆ
ಬೆಂಗಳೂರು, ಏಪ್ರಿಲ್ 16: ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಸೂಚನೆ ಹಿನ್ನೆಲೆಯಲ್ಲಿ ಬೆಳ್ಳಂದೂರು ಸೇರಿ ಇತರೆ ಕೆರೆಗಳ ವಸ್ತುಸ್ಥಿತಿ ಅಧ್ಯಯನ ನಡೆಸಿರುವ ಹಿರಿಯ ವಕೀಲ ರಾಜ್ ಪಂಜ್ವಾನಿ ನೇತೃತ್ವದ ತಜ್ಞರ ಸಮಿತಿ ಏ.20ರೊಳಗೆ ವರದಿ ಸಲ್ಲಿಸುವ ಸಾಧ್ಯತೆ ಇದೆ.
ಮೇ.11ರ ವರದಿ ಸಲ್ಲಿಕೆಗೆ ಅವಕಾಶವಿದೆಯಾದರೂ ಏ.20ರೋಳಗೆ ಪೂರ್ಣ ಪ್ರಮಾಣದ ವರದಿ ಸಿದ್ಧಪಡಿಸುವ ಗುರಿಯನ್ನು ರಾಜ್ ಪಂಜ್ವಾನಿ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಭಾನುವಾರ ವರ್ತೂರು ಕೆರೆ ಸೇರಿ ಕೆಲವು ಕಡೆಗಳಲ್ಲಿ ಪರಿಶೀಲನೆ ನಡೆಸಿದ ಸಮಿತಿ, ಬಿಡಿಎ ಕಚೇರಿಯಲ್ಲಿ ಸ್ಥಳೀಯ ಪ್ರಾಧಿಕಾರಗಳು ಮತ್ತು ಸ್ಥಳೀಯರೊಂದಿಗೆ ಪ್ರತ್ಯೇಕ ಸಭೆಗಳನ್ನು ನಡೆಸಿ ದೂರುಗಳನ್ನು ಸ್ವೀಕರಿಸಿದೆ. ಎನ್ ಜಿಟಿ ಸ್ಥಳೀಯ ಪ್ರಾಧಿಕಾರಗಳು ಸಲ್ಲಿಸಿರುವ ಕ್ರಿಯಾ ಯೋಜನೆಯಲ್ಲಿರುವ ಅಂಶಗಳು ಮತ್ತು ಕೆರೆಯಲ್ಲಿನ ವಸ್ತು ಸ್ಥಿತಿಯನ್ನು ತಂಡ ತನ್ನ ವರದಿ ಮೂಲಕ ನ್ಯಾಯಪೀಠದ ಮುಂದುವರಿಸಲಿದೆ.

ಕೆರೆ ವಿಚಾರವಾಗಿ ಈಗಾಗಲೇ ಎನ್ ಜಿಟಿ ಕೆಂಗಣ್ಣಿಗೆ ಗುರಿಯಾಗಿರುವ ಸ್ಥಳೀಯ ಪ್ರಾಧಿಕಾರಗಳಿಗೆ ಸಮಿತಿಯ ಪರಿಶೀಲನೆ ಮತ್ತಷ್ಟು ಆತಂಕ ತರಿಸಿದೆ. ವಸ್ತುಸ್ಥಿತಿ ಮತ್ತು ಕ್ರಿಯಾಯೋಜನೆಯಲ್ಲಿನ ಅಂಶಗಳಿಗೆ ಹೋಲಿಕೆಯಾಗುತ್ತಿಲ್ಲ. ಸ್ಥಳೀಯ ಪ್ರಾಧಿಕಾರಗಳು ಸುಳ್ಳು ಹೇಳಿ ದಾರಿ ತಪ್ಪಿಸುತ್ತಿವೆ ಎಂದು ಭಾವಿಸಿರಲಿಲ್ಲ ಎಂದು ನೇರವಾಗಿಯೇ ನ್ಯಾಯಪೀಠ ಅಸಮಾಧಾನ ಹೊರಹಾಕಿತ್ತು.
ಈ ನಡುವೆ ತಂಡ ಪರಿಶೀಲನೆ ನಡೆಸುತ್ತಿದ್ದ ವೇಳೆಯೂ ಹಲವು ಸಂಗತಿಗಳನ್ನು ಸ್ಥಳೀಯರು ಬಿಚ್ಚಿಟ್ಟಿರುವುದು ಅಧಿಕಾರಿಗಳಲ್ಲಿ ನ್ಯಾಯಾಂಗ ತೂಗುಗತ್ತಿ ಭೀತಿ ಶುರುವಾಗಿದೆ. ರಾಜ್ ಪಂಜ್ವಾನಿ ಯಾವೆಲ್ಲ ಅಂಶಗಳನ್ನು ನಮೂದಿಸಲಿದ್ದಾರೆ ಎಂಬುದು ವಿಚಾರಣೆಯಲ್ಲಿ ಬಹಿರಂಗವಾಗಲಿದೆ.
-
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications