Get Updates
Get notified of breaking news, exclusive insights, and must-see stories!

ಬೆಳ್ಳಂದೂರು, ವರ್ತೂರು ಕೆರೆಗಳ ಪರಿಶೀಲನೆ ಪೂರ್ಣ: ಏ.20ಕ್ಕೆ ವರದಿ ಸಾಧ್ಯತೆ

ಬೆಂಗಳೂರು, ಏಪ್ರಿಲ್ 16: ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಸೂಚನೆ ಹಿನ್ನೆಲೆಯಲ್ಲಿ ಬೆಳ್ಳಂದೂರು ಸೇರಿ ಇತರೆ ಕೆರೆಗಳ ವಸ್ತುಸ್ಥಿತಿ ಅಧ್ಯಯನ ನಡೆಸಿರುವ ಹಿರಿಯ ವಕೀಲ ರಾಜ್ ಪಂಜ್ವಾನಿ ನೇತೃತ್ವದ ತಜ್ಞರ ಸಮಿತಿ ಏ.20ರೊಳಗೆ ವರದಿ ಸಲ್ಲಿಸುವ ಸಾಧ್ಯತೆ ಇದೆ.

ಮೇ.11ರ ವರದಿ ಸಲ್ಲಿಕೆಗೆ ಅವಕಾಶವಿದೆಯಾದರೂ ಏ.20ರೋಳಗೆ ಪೂರ್ಣ ಪ್ರಮಾಣದ ವರದಿ ಸಿದ್ಧಪಡಿಸುವ ಗುರಿಯನ್ನು ರಾಜ್ ಪಂಜ್ವಾನಿ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಭಾನುವಾರ ವರ್ತೂರು ಕೆರೆ ಸೇರಿ ಕೆಲವು ಕಡೆಗಳಲ್ಲಿ ಪರಿಶೀಲನೆ ನಡೆಸಿದ ಸಮಿತಿ, ಬಿಡಿಎ ಕಚೇರಿಯಲ್ಲಿ ಸ್ಥಳೀಯ ಪ್ರಾಧಿಕಾರಗಳು ಮತ್ತು ಸ್ಥಳೀಯರೊಂದಿಗೆ ಪ್ರತ್ಯೇಕ ಸಭೆಗಳನ್ನು ನಡೆಸಿ ದೂರುಗಳನ್ನು ಸ್ವೀಕರಿಸಿದೆ. ಎನ್ ಜಿಟಿ ಸ್ಥಳೀಯ ಪ್ರಾಧಿಕಾರಗಳು ಸಲ್ಲಿಸಿರುವ ಕ್ರಿಯಾ ಯೋಜನೆಯಲ್ಲಿರುವ ಅಂಶಗಳು ಮತ್ತು ಕೆರೆಯಲ್ಲಿನ ವಸ್ತು ಸ್ಥಿತಿಯನ್ನು ತಂಡ ತನ್ನ ವರದಿ ಮೂಲಕ ನ್ಯಾಯಪೀಠದ ಮುಂದುವರಿಸಲಿದೆ.

Expert committee will submit report NGT before April 20

ಕೆರೆ ವಿಚಾರವಾಗಿ ಈಗಾಗಲೇ ಎನ್ ಜಿಟಿ ಕೆಂಗಣ್ಣಿಗೆ ಗುರಿಯಾಗಿರುವ ಸ್ಥಳೀಯ ಪ್ರಾಧಿಕಾರಗಳಿಗೆ ಸಮಿತಿಯ ಪರಿಶೀಲನೆ ಮತ್ತಷ್ಟು ಆತಂಕ ತರಿಸಿದೆ. ವಸ್ತುಸ್ಥಿತಿ ಮತ್ತು ಕ್ರಿಯಾಯೋಜನೆಯಲ್ಲಿನ ಅಂಶಗಳಿಗೆ ಹೋಲಿಕೆಯಾಗುತ್ತಿಲ್ಲ. ಸ್ಥಳೀಯ ಪ್ರಾಧಿಕಾರಗಳು ಸುಳ್ಳು ಹೇಳಿ ದಾರಿ ತಪ್ಪಿಸುತ್ತಿವೆ ಎಂದು ಭಾವಿಸಿರಲಿಲ್ಲ ಎಂದು ನೇರವಾಗಿಯೇ ನ್ಯಾಯಪೀಠ ಅಸಮಾಧಾನ ಹೊರಹಾಕಿತ್ತು.

ಈ ನಡುವೆ ತಂಡ ಪರಿಶೀಲನೆ ನಡೆಸುತ್ತಿದ್ದ ವೇಳೆಯೂ ಹಲವು ಸಂಗತಿಗಳನ್ನು ಸ್ಥಳೀಯರು ಬಿಚ್ಚಿಟ್ಟಿರುವುದು ಅಧಿಕಾರಿಗಳಲ್ಲಿ ನ್ಯಾಯಾಂಗ ತೂಗುಗತ್ತಿ ಭೀತಿ ಶುರುವಾಗಿದೆ. ರಾಜ್ ಪಂಜ್ವಾನಿ ಯಾವೆಲ್ಲ ಅಂಶಗಳನ್ನು ನಮೂದಿಸಲಿದ್ದಾರೆ ಎಂಬುದು ವಿಚಾರಣೆಯಲ್ಲಿ ಬಹಿರಂಗವಾಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+